ಕನ್ನಡ ಮಾತೆ ಫೌಂಡೇಶನ್ ಸಂಯುಕ್ತ ಆಶ್ರಯದಲ್ಲಿ ಮಲ್ಲಿಕಾರ್ಜುನ ಮಹಾವಿದ್ಯಾಲಯದಲ್ಲಿ ವಿಶೇಷ ಕಾರ್ಯಕ್ರಮ
ಕಾಗವಾಡ: ಕನ್ನಡ ಮಾತೆ ಫೌಂಡೇಶನ್ ಇವರ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು ಸೆಪ್ಟೆಂಬರ್ 7, 2026ರಂದು ಕಾಗವಾಡ ಪಟ್ಟಣದ ಮಲ್ಲಿಕಾರ್ಜುನ ಮಹಾವಿದ್ಯಾಲಯಕ್ಕೆ ಆಗಮಿಸಲಿದ್ದಾರೆ. ಮಹಿಳೆಯರ ಹಕ್ಕುಗಳು, ಸಬಲೀಕರಣ ಹಾಗೂ ಮಹಿಳೆಯರ ಸಮಸ್ಯೆಗಳ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿದ್ದು, ವಿವಿಧ ಕ್ಷೇತ್ರಗಳ ಗಣ್ಯರು, ಮಹಿಳಾ ಸಂಘಟನೆಗಳ ಪ್ರತಿನಿಧಿಗಳು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆಯಿದೆ. ಕಾರ್ಯಕ್ರಮದ ಯಶಸ್ಸಿಗಾಗಿ ಕನ್ನಡ ಮಾತೆ ಫೌಂಡೇಶನ್ ಪದಾಧಿಕಾರಿಗಳು ಹಾಗೂ ಮಲ್ಲಿಕಾರ್ಜುನ ಮಹಾವಿದ್ಯಾಲಯದ ಆಡಳಿತ ಮಂಡಳಿ ಸಿದ್ಧತೆಗಳನ್ನು ಕೈಗೊಂಡಿದೆ.


