Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶನಿವಾರದ ತರಗತಿಗಳ ವೇಳಾಪಟ್ಟಿಯಲ್ಲಿ ಬದಲಾವಣೆ : ಬೆಳಗ್ಗೆ 8.30 ರಿಂದ ಶಾಲೆಗಳು ಪ್ರಾರಂಭ 

Advertisement

ಬೆಂಗಳೂರು: ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಶಿಕ್ಷಣ ಇಲಾಖೆಯು ಮಹತ್ವದ ಸಿಹಿ ಸುದ್ದಿಯೊಂದನ್ನು ನೀಡಿದೆ.

ಇನ್ಮುಂದೆ ಶನಿವಾರದ ತರಗತಿಗಳ ವೇಳಾಪಟ್ಟಿಯಲ್ಲಿ ದೊಡ್ಡ ಬದಲಾವಣೆ ತರಲಾಗಿದ್ದು, ಇಡೀ ಕರ್ನಾಟಕದಾದ್ಯಂತ ಎಲ್ಲಾ ಶಾಲೆಗಳಿಗೂ ಅನ್ವಯವಾಗುವಂತೆ ಏಕರೂಪದ ಹೊಸ ಸಮಯವನ್ನು ಅಧಿಕೃತವಾಗಿ ಜಾರಿಗೆ ತರಲಾಗಿದೆ.

ಶಾಲಾ ಶಿಕ್ಷಣ ಇಲಾಖೆಯ ಹೊಸ ಆದೇಶದ ಪ್ರಕಾರ, ಇನ್ಮುಂದೆ ಶನಿವಾರದ ದಿನದಂದು ಬೆಳಗ್ಗೆ 8.30 ರಿಂದ ಮಧ್ಯಾಹ್ನ 12:30 ರವರೆಗೆ ತರಗತಿಗಳು ನಡೆಯಲಿವೆ.

ಸಮಯದ ಗೊಂದಲಕ್ಕೆ ಬಿದ್ದ ತೆರೆ

ಈ ಹಿಂದೆ ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ಶನಿವಾರದ ಶಾಲಾ ಅವಧಿಯಲ್ಲಿ ಸಾಕಷ್ಟು ವ್ಯತ್ಯಾಸಗಳಿದ್ದವು. ಕೆಲವು ಭಾಗಗಳಲ್ಲಿ ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 12 ರವರೆಗೆ ಶಾಲೆಗಳಿದ್ದರೆ, ಇನ್ನು ಕೆಲವು ಕಡೆ ಬೆಳಗ್ಗೆ 7:30 ಕ್ಕೇ ತರಗತಿಗಳು ಆರಂಭವಾಗಿ 11:30 ಕ್ಕೆ ಮುಕ್ತಾಯಗೊಳ್ಳುತ್ತಿದ್ದವು. ಈ ಹಿಂದಿನ ಸಮಯದ ಭಿನ್ನತೆಯಿಂದ ಉಂಟಾಗುತ್ತಿದ್ದ ಗೊಂದಲಗಳಿಗೆ ಈಗ ಸಂಪೂರ್ಣವಾಗಿ ತೆರೆ ಎಳೆಯಲಾಗಿದೆ.

ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳು ಕಡ್ಡಾಯವಾಗಿ ಇದೇ ಹೊಸ ವೇಳಾಪಟ್ಟಿಯನ್ನು ಅನುಸರಿಸಬೇಕು ಎಂದು ಶಿಕ್ಷಣ ಇಲಾಖೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಗುವಿನ ಅಳುವಿನಿಂದ ಬೇಸತ್ತು ಹೆತ್ತ ಮಗುವನ್ನೇ ಹತ್ಯೆಗೈದ ತಾಯಿ ಶನಿವಾರದ ತರಗತಿಗಳ ವೇಳಾಪಟ್ಟಿಯಲ್ಲಿ ಬದಲಾವಣೆ : ಬೆಳಗ್ಗೆ 8.30 ರಿಂದ ಶಾಲೆಗಳು ಪ್ರಾರಂಭ ಭಾಮೈದನ ಮೇಲಿನ ಇಡಿ ದಾಳಿಯನ್ನು ರಾಜಕೀಯ ಪ್ರೇರಿತ ಎನ್ನಲಾಗದು : ಸತೀಶ್ ಜಾರಕಿಹೊಳಿ ದೇವೂ ಮಾಕೊಂಡ ಅವರ ಕೃತಿಗೆ 2025 ರ 'ಪುಸ್ತಕ ಸೊಗಸು' ಬಹುಮಾನಯರಗಟ್ಟಿ ಸಂತೆ ಸ್ಥಳಾಂತರಎಸ್.ಐ.ಆರ್ ಯಶಸ್ವಿಯಾದರೆ ಬಿಜೆಪಿ ಅಭ್ಯರ್ಥಿ ಗೆಲುವು ಖಚಿತ : ಸಚ್ಚಿದಾನಂದ ಮೂರ್ತಿಮುಂಗಾರು ಮಳೆ ವಿಳಂಬ : ರಾಜ್ಯದ 122 ತಾಲೂಕುಗಳಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಅನುಮತಿ ಇಲ್ಲದೇ ಖಾಸಗಿ ಫೋಟೋ - ವಿಡಿಯೋ ಶೇರ್ ಮಾಡಿದ್ದರೇ ತಕ್ಷಣವೇ ಎಫ್‌ಐಆರ್ ರಸ್ತೆ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಎರಡನೇ ಪತ್ನಿಗೂ ಸಮಾನ ಪರಿಹಾರ : ಹೈಕೋರ್ಟ್ ಆದೇಶರಾಜ್ಯದಲ್ಲಿ 91,152 ಅನರ್ಹರ ಪಿಂಚಣಿ ತಕ್ಷಣದಿಂದಲೇ ರದ್ದು : ರಾಜ್ಯ ಸರ್ಕಾರ ಆದೇಶ