Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸಂಘದ ವತಿಯಿಂದ ಪೌರ ಕಾರ್ಮಿಕ ದಿನಾಚರಣೆ

Advertisement
ಚಿಕ್ಕೋಡಿ : -ಸದಲಗಾ ಶಾಖೆ ಹಾಗೂ ಸದಲಗಾ ಪುರಸಭೆಯ ಸಂಯುಕ್ತ ಆಶ್ರಯದಲ್ಲಿ ಪೌರಕಾರ್ಮಿಕರ ದಿನಾಚರಣೆಯನ್ನು ಆಚರಿಸಲಾಯಿತು.ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಸದಲಗಾ ಪುರಸಭೆಯ ಆಡಳಿತಾಧಿಕಾರಿಗಳು ಆದ ಚಿಕ್ಕೋಡಿಯ ಉಪ ವಿಭಾಗಿಕಾರಿಗಳು ಶ್ರೀ ಸುಭಾಷ್ ಸಂಪಗಾವಿ ಆಗಮಿಸಿದ್ದರು.



ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುರಸಭೆಯ ಮುಖ್ಯಾಧಿಕಾರಿಗಳಾದ ಶ್ರೀ ಶಿವಾನಂದ ಬೋಸಲೆ ಅವರು ವಹಿಸಿದ್ದರು ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘದ ಶಾಕಾಧ್ಯಕ್ಷರು ಶ್ರೀ ಸಂಜೀವ್ ಗುಡೆ ಮಾತನಾಡಿ ಪೌರಕಾರ್ಮಿಕ ದಿನಾಚರಣೆಯ ಉದ್ದೇಶವನ್ನು ತಿಳಿಸುತ್ತಾ ಪೌರಕಾರ್ಮಿಕರು ತಮ್ಮ ಮಕ್ಕಳಿಗೆ ಒಳ್ಳೆಯ ಶಿಕ್ಷಣ ಕೊಡಬೇಕಂತ ಹೇಳಿದರು ಮುಖ್ಯ ಅತಿಥಿಗಳಾದ ಉಪವಿಭಾಗಾಧಿಕಾರಿಗಳು ಮಾತನಾಡಿ ಪೌರಕಾರ್ಮಿಕರ ಕಾರ್ಯವನ್ನು ಮೆಚ್ಚುಗೆ ವ್ಯಕ್ತಪಡಿಸಿ ತಮ್ಮ ಸಮಸ್ಯೆಗಳು ಏನಾದರೂ ಇದ್ದರೆ ಅದನ್ನು ಸರ್ಕಾರದ ಮಟ್ಟದಲ್ಲಿ ಪಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಅಂತ ತಿಳಿಸಿದರು.



ಪುರಸಭೆಯ ಮಾಜಿ ಅಧ್ಯಕ್ಷರಾದ ಶ್ರೀ ಅಭಿಜಿತ್ ಪಾಟೀಲ್ ಮಾತನಾಡಿ ಪೌರಕಾರ್ಮಿಕರ ಕೆಲಸದ ಒತ್ತಾಯ ಕಡಿಮೆ ಮಾಡಲು ಯಂತ್ರೋಪಕರಣಗಳನ್ನು ಉಪಯೋಗಿಸಲು ಸೂಚಿಸಿದರು ಪುರಸಭೆಯ ಮಾಜಿ ಉಪಾಧ್ಯಕ್ಷರು ಮಾತನಾಡಿ ಪೌರಕಾರ್ಮಿಕರಿಗೆ ಕ್ವಾಟರ್ಸ್ ನಿರ್ಮಾಣ ಮಾಡಲು ಸೂಚಿಸಿದರು

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮುಖ್ಯ ಅಧಿಕಾರಿಗಳು ಎಲ್ಲ ಪೌರಕಾರ್ಮಿಕರು ಸುರಕ್ಷಾ ಸಾಮಗ್ರಿಗಳನ್ನು ಉಪಯೋಗಿಸಿ ಆರೋಗ್ಯದ ಕಡೆ ಗಮನ ಕೊಡಬೇಕೆಂದು ತಿಳಿಸಿದರು ಇದೇ ಸಮಯದಲ್ಲಿ ಪೌರಕಾರ್ಮಿಕ ದಿನಾಚರಣೆಯ ಅಂಗವಾಗಿ ನಡೆಸಲಾದ ವಿವಿಧ ಸ್ಪರ್ಧೆಗಳ ವಿಜೇತರರಿಗೆ ಬಹುಮಾನ ವಿತರಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಪುರಸಭೆ ಸದಸ್ಯರಾದ ಭೀಮರಾವ್ ಮಾಳಗೆ ಅತಾವುಲ್ಲ ಮುಜಾವರ್ ಹೇಮಂತ್ ಸಿಂಗೆ ಪ್ರಶಾಂತ್ ಕರಂಗಳೆ ರವಿ ಗೋಸಾವಿ ಗಣ್ಯರಾದ ಅಭಿನಂದನ್ ಪಾಟೀಲ್ ಸಂತೋಷ್ ನವಲೆ ದರೆಪ್ಪ ಹವಾಲ್ದಾರ್ ಪ್ರಕಾಶ್ ಅನುರೆ ಚಿದಾನಂದ ಸಮಗಾರ್ ಇಲ್ಲಾಯಿ ಸನದಿ ಸುನಿಲ್ ನಂದೆ ಕೈಲಾಸ್ ಮಾಳಗೆ ರಾಜು ಅಮೃತಸಮ್ಮಣ್ಣವರ ಉಪಸ್ಥಿತರಿದ್ದರು.

ಐ ಬಿ ಶೇಷಮ ಸ್ವಾಗತಿಸಿದರು ಎಂ ಬಿ ಗೌಂಡಿ ವಂದಿಸಿದರು ವಿಜಯಕುಮಾರ್ ಕೋಕನೆ ಕಾರ್ಯಕ್ರಮವನ್ನು ನಿರೂಪಿಸಿದರು.

ವರದಿ :-ರಾಜು ಮುಂಡೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ