Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತುರುವೇಕೆರೆ ಹೊರವಲಯದಲ್ಲಿ ಚಿರತೆ ಪ್ರತ್ಯಕ್ಷ : ಆತಂಕದಲ್ಲಿ ನಾಗರೀಕರು

Advertisement
ತುರುವೇಕೆರೆ : ಪಟ್ಟಣದ ಹೊರವಲಯದಲ್ಲಿ ಸ್ಥಳೀಯ ಪಟ್ಟಣ ಪಂಚಾಯ್ತಿ ವತಿಯಿಂದ ನಿರ್ಮಿಸಲಾಗಿರುವ ಒಳಚರಂಡಿ ಘಟಕದ ಬಳಿ ಚಿರತೆ ಕಾಣಿಸಿಕೊಂಡಿದ್ದು ನಾಗರೀಕರಲ್ಲಿ ಆತಂಕಕ್ಕೆ ಕಾರಣವಾಗಿದೆ.

ತುರುವೇಕೆರೆ ತಾಲ್ಲೂಕಿನ ಗೋಣಿತುಮಕೂರು, ದೇವೀಹಳ್ಳಿ, ತಾಳಕೆರೆ ಸೇರಿದಂತೆ ಹತ್ತಾರು ಗ್ರಾಮಗಳಲ್ಲಿ ಚಿರತೆ ಕಾಣಿಸಿಕೊಂಡಿರುವುದು, ಮನುಷ್ಯರ ಮೇಲೆ ದಾಳಿ ನಡೆಸಿ ಗಾಯಗೊಳಿಸಿರುವುದು ಹಾಗೂ ನಾಯಿ, ಕುರಿ ಮುಂತಾದ ಪ್ರಾಣೀಗಳನ್ನು ಬಲಿ ಪಡೆದಿರುವುದು ಈಗಾಗಲೇ ವರದಿಯಾಗಿದ್ದು, ಪಟ್ಟಣ ಹಾಗೂ ತಾಲೂಕಿನ ಹಳ್ಳಿಗಳ ಜನತೆ ರಾತ್ರಿ ವೇಳೆ ಸಂಚರಿಸಲು ಭಯಪಡುವಂತಾಗಿರುವ ಸಂದರ್ಭದಲ್ಲಿ ಮತ್ತೊಮ್ಮೆ ತುರುವೇಕೆರೆ ಪಟ್ಟಣದ ಹೊರವಲಯದಲ್ಲಿ ಚಿರತೆ ಕಾಣಿಸಿಕೊಂಡಿರುವುದು ಭಯ ಮತ್ತಷ್ಟು ಹೆಚ್ಚಳವಾಗಿದೆ.

ಪಟ್ಟಣ ಪಂಚಾಯ್ತಿ ಒಳಚರಂಡಿ ಘಟಕದ ಬಳಿ ಕಾರ್ಮಿಕರು ಜೆಸಿಬಿ ಯಂತ್ರದಲ್ಲಿ ಒಳಚರಂಡಿ ಕಾಮಗಾರಿ ಕೆಲಸ ಮಾಡುತ್ತಿರುವ ಸಂದರ್ಭದಲ್ಲೇ ಚಿರತೆ ಎದುರಾಗಿದೆ. ಜೆಸಿಬಿ ಬಳಿಯೇ ಬಂದು ಕೆಲಕಾಲ ಸಂಚರಿಸಿದ ಚಿರತೆ ತದ ನಂತರದಲ್ಲಿ ತೋಟದ ಸಾಲಿನಲ್ಲಿ ಮರೆಯಾಗಿದೆ. ಚಾಲಕ ಪ್ರಾರಂಭದಲ್ಲಿ ಭಯಗೊಂಡರೂ ಧೈರ್ಯಗೆಡದೆ ಸಮಯಪ್ರಜ್ಞೆ ಮೆರೆದು ಜೆಸಿಬಿಯೊಳಗೆ ಸದ್ದಿಲ್ಲದೆ ಕುಳಿತು ಚಿರತೆಯ ಚಲನವಲನಗಳನ್ನು ತನ್ನ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾನೆ. ಚಿರತೆ ಕಣ್ಮರೆಯಾದ ನಂತರ ಆ ಸ್ಥಳದಿಂದ ಚಾಲಕ ಪಟ್ಟಣದೊಳಕ್ಕೆ ಬಂದಿದ್ದಾನೆ. ಜೆಸಿಬಿ ಚಾಲಕನೊಂದಿಗೆ ಮತ್ತೊಬ್ಬ ಕಾರ್ಮಿಕರು ಇದ್ದರೆನ್ನಲಾಗಿದೆ.

ಜೆಸಿಬಿ ಚಾಲಕ ಸೆರೆ ಹಿಡಿದಿದ್ದ ಚಿರತೆ ಹೊರವಲಯದಲ್ಲಿ ಕಾಣಿಸಿಕೊಂಡ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಚಿರತೆ ಭಯದಿಂದ ಆ ಭಾಗದಲ್ಲಿನ ತೋಟ, ಜಮೀನಿನ ಮಾಲೀಕರು, ರೈತರು ತಮ್ಮ ತೋಟದ ಕಡೆ ತಲೆ ಹಾಕಿಲ್ಲ. ಅಲ್ಲದೆ ರೈತರು ಕೂಡಲೇ ಚಿರತೆ ಸೆರೆ ಹಿಡಿದು ನಾಗರೀಕರ ಜೀವ ರಕ್ಷಣೆ ಮಾಡಬೇಕೆಂದು ತಾಲೂಕು ಆಡಳಿತ, ಅರಣ್ಯ ಇಲಾಖೆ ಅಧಿಕಾರಿಗಳನ್ನು ಮನವಿ ಮಾಡಿದ್ದಾರೆ.

ವರದಿ: ಗಿರೀಶ್ ಕೆ ಭಟ್, ತುರುವೇಕೆರೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ