Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪೌರ ಕಾರ್ಮಿಕರ ದಿನಾಚರಣೆ

Advertisement
ಸಿರುಗುಪ್ಪ : -ನಗರದ ಶ್ರೀ ಅಭಯಾಂಜನೇಯ್ಯ ಸ್ವಾಮಿ ದೇವಸ್ಥಾನದ ಪೌರಾಡಳಿತ ನಿರ್ದೇಶನಾಲಯ, ನಗರಸಭೆ ಕಾರ್ಯಾಲಯ, ಕರ್ನಾಟಕ ರಾಜ್ಯ ಪೌರ ನೌಕರರ ಸಂಘಗಳ ಸಹಯೋಗದಲ್ಲಿ ಬುಧವಾರ ನಡೆದ ಪೌರಕಾರ್ಮಿಕರ ದಿನಾಚರಣೆಯನ್ನು ನಗರಸಭೆ ಅಧ್ಯಕ್ಷೆ ರೇಣುಕಮ್ಮ ಉದ್ಘಾಟಿಸಿದರು.



ನಗರಸಭೆ ಆಯುಕ್ತ ಹೆಚ್.ಎನ್.ಗುರುಪ್ರಸಾದ್ ಅವರು ಮಾತನಾಡಿ ನಗರದ ಸ್ವಚ್ಛತೆಯ ಕಾರ್ಯದೊಂದಿಗೆ ಜನರ ಆರೋಗ್ಯವನ್ನು ಕಾಪಾಡುತ್ತಿರುವ ಪೌರ ಕಾರ್ಮಿಕರಾದ ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕಿದೆ.



ಆದಕಾರಣ ಸ್ವಚ್ಛತೆ ಕಾರ್ಯದಲ್ಲಿ ತೊಡಗಿರುವಾಗ ನಿಮ್ಮ ಮೂಗು, ಬಾಯಿ, ಕೈ ಮತ್ತು ಕಾಲುಗಳಿಗೆ ಸುರಕ್ಷಾ ಕವಚಗಳನ್ನು ಧರಿಸಬೇಕೆಂದು ತಿಳಿಸಿದರು.

ಪೌರ ನೌಕರರ ಸಂಘದ ಗೌರವಾಧ್ಯಕ್ಷ ಅಮರೇಶ ಅವರು ಮಾತನಾಡಿ ನಗರದ ಅಂದವನ್ನು ಹೆಚ್ಚಿಸುವ ಪೌರಕಾರ್ಮಿಕರನ್ನು ಪ್ರತಿಯೊಬ್ಬರು ಗೌರವಿಸಬೇಕು ಎಂದು ತಿಳಿಸುವುದರೊಂದಿಗೆ ಪೌರಕಾರ್ಮಿಕ ದಿನಾಚರಣೆ ಹಿನ್ನಲೆಯನ್ನು ತಿಳಿಸಿದರು.



ಶ್ರೀ ಅಭಯಾಂಜನೇಯ್ಯ ಸ್ವಾಮಿ ದೇವಸ್ಥಾನದವರೆಗೆ ಸಾಗಿದ ಮೆರವಣಿಗೆಯಲ್ಲಿ ವಾದ್ಯಗಳಿಗೆ ಪೌರ ನೌಕರರು, ಕಾರ್ಮಿಕರು, ಸಂಘದ ಪದಾಧಿಕಾರಿಗಳು ನರ್ತಿಸಿ ಸಂಭ್ರಮಿಸಿದರು. ಕಾರ್ಯಕ್ರಮದಲ್ಲಿ ಪೌರಕಾರ್ಮಿಕರನ್ನು ಸನ್ಮಾನಿಸಲಾಯಿತು.

ಇದೇ ವೇಳೆ ನಗರಸಭೆ ಉಪಾಧ್ಯಕ್ಷೆ ಕೆ.ಯಶೋದಮೂರ್ತಿ, ಸದಸ್ಯರು, ಪೌರ ಕಾರ್ಮಿಕರ ಸಂಘದ ಅಧ್ಯಕ್ಷ ವೆಂಕೋಬ, ಉಪಾಧ್ಯಕ್ಷ ರಂಗಸ್ವಾಮಿ, ಪ್ರಧಾನ ಕಾರ್ಯದರ್ಶಿ ಪಂಪಾಪತಿ ಸೇರಿದಂತೆ ಇನ್ನಿತರ ಅಧಿಕಾರಿಗಳು, ಸಿಬ್ಬಂದಿಗಳು ಮತ್ತು ಪೌರಕಾರ್ಮಿಕರು ಇದ್ದರು.

ವರದಿ : ಶ್ರೀನಿವಾಸ ನಾಯ್ಕ
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ