LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಅಕ್ರಮ ಪಂಪ್‌ಸೆಟ್ ತೆರವುಗೊಳಿಸಿ, ಶಿರಾಡೋಣ–ಹಾಲಹಳ್ಳಿ ರೈತರಿಗೆ ನೀರು ಒದಗಿಸಲು ಆಗ್ರಹ

Advertisement

ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಏತ ನೀರಾವರಿ ಯೋಜನೆ ದುರುಪಯೋಗ ಆರೋಪ:

ವಿಜಯಪುರ : ಕರ್ನಾಟಕ–ಮಹಾರಾಷ್ಟ್ರ ಗಡಿಭಾಗದ ಕಟ್ಟಕಡೆಯ ಗ್ರಾಮಗಳಾದ ಶಿರಾಡೋಣ ಹಾಗೂ ಹಾಲಹಳ್ಳಿ ಗ್ರಾಮದ ರೈತರಿಗೆ ಚಡಚಣ ಏತ ನೀರಾವರಿ ಯೋಜನೆಯ ನೀರು ಸಮರ್ಪಕವಾಗಿ ದೊರೆಯುತ್ತಿಲ್ಲ. ಯೋಜನೆಯ ಪೈಪ್‌ಲೈನ್ ಒಡೆದು ಅಕ್ರಮವಾಗಿ ಪಂಪ್‌ಸೆಟ್‌ಗಳನ್ನು ಅಳವಡಿಸಿಕೊಂಡು ನೀರು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ಗ್ರಾಮಗಳ ರೈತರು ಬುಧವಾರ ಚಡಚಣ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.

ಮನವಿ ಸ್ವಿಕರಿಸಿ ಮಾತನಾಡಿದ ಚಡಚಣ ಉಪ ತಹಶೀಲ್ದಾರ ಕೆ ವಾಯ್ ಹೊಸಮನಿ ಶಿರಾಡೋನ ಹಾಗೂ ಹಾಲಹಳ್ಳಿ ರೈತರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಕೂಡಲೆ ಮೇಲಾಧಿಕಾರಿಗಳಿಗೆ ತಿಳಿಸಿ ಕ್ರಮ ಕೈಗೊಳ್ಳುವದಾಗಿ ಹೇಳಿದರು.

ಈ ಸಂದರ್ಭದಲ್ಲಿ ಮಾತನಾಡಿದ ರೈತ ಎಚ್.ಎಸ್. ಬನಸೋಡೆ, *ಚಡಚಣ ಏತ ನೀರಾವರಿ ಯೋಜನೆಯ ನೀರನ್ನು ಅಕ್ರಮವಾಗಿ ಬಳಸುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಅನಧಿಕೃತವಾಗಿ ಅಳವಡಿಸಿರುವ ಪಂಪ್‌ಸೆಟ್‌ಗಳನ್ನು ಮುಟ್ಟುಗೋಲು ಹಾಕಿಕೊಂಡು, ಯೋಜನೆಯ ನೀರು ಅರ್ಹ ರೈತರ ಜಮೀನುಗಳಿಗೆ ತಲುಪುವಂತೆ ಕ್ರಮ ವಹಿಸಬೇಕು* ಎಂದು ಆಗ್ರಹಿಸಿದರು.

 ಕರ್ನಾಟಕ–ಮಹಾರಾಷ್ಟ್ರ ಗಡಿಭಾಗವಾಗಿರುವುದರಿಂದ ಮಹಾರಾಷ್ಟ್ರದ ಕೆಲ ರೈತರು ನೀರಾವರಿ ಯೋಜನೆಯ ಪೈಪ್‌ಲೈನ್ ಒಡೆದು ಅಕ್ರಮವಾಗಿ ಪಂಪ್‌ಸೆಟ್ ಅಳವಡಿಸಿಕೊಂಡು ತಮ್ಮ ಜಮೀನುಗಳಿಗೆ ನೀರು ಹರಿಸಿಕೊಳ್ಳುತ್ತಿದ್ದಾರೆ. ಇದರಿಂದ ಶಿರಾಡೋಣ ಹಾಗೂ ಹಾಲಹಳ್ಳಿ ಗ್ರಾಮದ ರೈತರಿಗೆ ನೀರು ತಲುಪುತ್ತಿಲ್ಲ ಎಂದು ಅವರು ದೂರಿದರು.
 ರೈತರು ಈಗಾಗಲೇ ಜಿಲ್ಲಾಧಿಕಾರಿಗಳು, ಶಾಸಕರು ಹಾಗೂ ಸಚಿವರ ಗಮನಕ್ಕೆ ಸಮಸ್ಯೆಯನ್ನು ತಂದಿದ್ದರೂ, ಸಮಸ್ಯೆ ಬಗೆಹರಿದಿಲ್ಲ. ನೀರಿಲ್ಲದೆ ರೈತರ ಪರಿಸ್ಥಿತಿ ದಿನದಿಂದ ದಿನಕ್ಕೆ ಸಂಕಷ್ಟಕ್ಕೆ ಸಿಲುಕುತ್ತಿದೆ. ಈ ಹಿನ್ನೆಲೆಯಲ್ಲಿ ಶಿರಾಡೋಣ ಗ್ರಾಮದ ರೈತರು ಸ್ವತಃ ಚಡಚಣದಿಂದ ಶಿರಾಡೋಣ ಗ್ರಾಮದ ಗಡಿಭಾಗದವರೆಗೆ ನೀರಾವರಿ ಯೋಜನೆಯ ಪೈಪ್‌ಲೈನ್ ಪರಿಶೀಲನೆ ನಡೆಸಿ, ಅಕ್ರಮ ಬಳಕೆಯ ಕುರಿತು ಜಿಪಿಎಸ್ ದಾಖಲೆ, ಛಾಯಾಚಿತ್ರ ಹಾಗೂ ವಿಡಿಯೊಗಳನ್ನು ಸಂಗ್ರಹಿಸಿರುವುದಾಗಿ ತಿಳಿಸಿದರು.
ರೈತರ ಆರೋಪಗಳು:
1. ನೀರಾವರಿ ಯೋಜನೆಯ ಪೈಪ್‌ಲೈನ್ ಒಡೆದು ಅನಧಿಕೃತವಾಗಿ ನೀರು ಬಳಸಲಾಗುತ್ತಿದ್ದು, ಇದರಿಂದ ಯೋಜನೆಯ ನೀರು ಮುಂದಿನ ಪ್ರದೇಶಗಳಿಗೆ ತಲುಪದಂತಾಗಿದೆ.
2. ಅನಧಿಕೃತ ಮೋಟಾರ್ ಹಾಗೂ ಪಂಪ್‌ಸೆಟ್ ಅಳವಡಿಸಿಕೊಂಡಿರುವ ಕುರಿತು ಜಿಪಿಎಸ್ ದಾಖಲೆ, ಫೋಟೊ ಮತ್ತು ವಿಡಿಯೊಗಳನ್ನು ಅಧಿಕಾರಿಗಳ ಗಮನಕ್ಕೆ ತರಲಾಗಿದೆ.
3. ಚಡಚಣ ಏತ ನೀರಾವರಿ ಯೋಜನೆಯ ನೀರನ್ನು ಅನಧಿಕೃತವಾಗಿ ಬಳಸುತ್ತಿರುವವರನ್ನು ತಕ್ಷಣ ತಡೆದು, ಅಕ್ರಮ ಪಂಪ್‌ಸೆಟ್‌ಗಳನ್ನು ತೆರವುಗೊಳಿಸಿ, ಶಿರಾಡೋಣ ಹಾಗೂ ಹಾಲಹಳ್ಳಿ ರೈತರಿಗೆ ನ್ಯಾಯ ಒದಗಿಸಬೇಕು.

ಇದರೊಂದಿಗೆ ಕೃಷ್ಣಾ ಭಾಗ್ಯ ಜಲನಿಗಮ ನಿಯಮಿತದ ರಾಮಪುರ ವಿಭಾಗದ ವ್ಯಾಪ್ತಿಗೆ ಬರುವ ಚಡಚಣ ಏತ ನೀರಾವರಿ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ, ನೀರು ಪೂರೈಕೆಗೆ ವೇಳಾಪಟ್ಟಿ ನಿಗದಿಪಡಿಸಬೇಕು ಎಂದು ರೈತರು ಒತ್ತಾಯಿಸಿದರು.

ಅಧಿಕಾರಿಗಳು ಮನವಿಗೆ ಸ್ಪಂದಿಸಿ ಸಮಸ್ಯೆ ಬಗೆಹರಿಸದಿದ್ದರೆ ಶಿರಾಡೋಣ ಹಾಗೂ ಹಾಲಹಳ್ಳಿ ಗ್ರಾಮದ ರೈತರು ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳುವುದಾಗಿ ಎಚ್ಚರಿಕೆ ನೀಡಿದರು.
 ಈ ಸಂದರ್ಭದಲ್ಲಿ ವಿಶ್ವನಾಥ ಬಿರಾದಾರ, ರಮನಂದ ಕುಲಕರ್ಣಿ. ಕುಂಬಾರ. ಪೂಜಾರಿ, ಸಂತೋಷ ಖರಾತ, ಪೀರಪ್ಪ ಖರಾತ, ನೆನೆಪ್ಪ ಬಿರಾದಾರ, ಶ್ರೀಶೈಲ ಖರಾತ, ಶಿವರಾಜ, ಸಂತೋಷ ಪೂಜಾರಿ ಸೇರಿದಂತೆ ಶಿರಾಡೋಣ ಹಾಗೂ ಹಾಲಹಳ್ಳಿ ಗ್ರಾಮದ ರೈತರು ಉಪಸ್ಥಿತರಿದ್ದರು.

ಕೋಟ*ಸಂಸದ ರಮೇಶ ಜಿಗಜಿಣಗಿ* ಚಡಚಣ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೊಷ್ಟಿಯಲ್ಲಿ ಮಾತನಾಡಿದ ಅವರು ರೈತರ ಸಮಸ್ಯೆ ಕುರಿತು ಸಂಬAಧಪಟ್ಟ ಅಧಿಕಾರಿಗಳೊಂದಿಗೆ ಮಾತನಾಡಿ, ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸುವುದಾಗಿ ಭರವಸೆ ನೀಡಿದರು.

ವರದಿ : ಶ್ರೀಕಾಂತ ಬಗಲಿ

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಜಪಾನ್ ಮಹಿಳೆಯರ ಪಂದ್ಯ ಪದಕಗಳ ಭೇಟೆಗೆ ಭಾರತೀಯ ಕ್ರೀಡಾಳುಗಳು ಸಜ್ಜು ಬಿಜೆಪಿ ವತಿಯಿಂದ ಒಂದು ತಿಂಗಳು 'ಸೇವಾ ಸಂಕಲ್ಪ ದಿನ' ಆಚರಣೆ : ಮಾಜಿ ಎಂ.ಎಲ್.ಸಿ ಮಹಾಂತೇಶ ಕವಟಗಿಮಟ್ಟ.ಕುಡಿದು ಕೋರ್ಟ್ ನಲ್ಲಿ ಗಲಾಟೆ : ವಕೀಲನಿಗೆ ಒಂದು ದಿನ ಜೈಲು ಶಿಕ್ಷೆ, 2 ಸಾವಿರ ದಂಡ ವಿಧಿಸಿದ ಹೈಕೋರ್ಟ್ ಪ್ರೀತಿಸಿ ಮದುವೆಯಾದ ಹೆಂಡತಿಯನ್ನ ಲಾಡ್ಜ್‌ನಲ್ಲಿ ಕೊಂದ ಕಿರಾತಕ ಗಂಡ ಭಾರತದ ಕ್ರೀಡಾ ಪಟುಗಳಿಗೆ ಅದ್ದೂರಿ ಸ್ವಾಗತ ಪಾವಗಡಕ್ಕೆ ತಕ್ಷಣ ಭದ್ರಾ ಮೇಲ್ದಂಡೆ ನೀರು ಹರಿಸಿ :  ರೈತ ಸಂಘದಿಂದ ಉಗ್ರ ಹೋರಾಟ ಮಾಡುತ್ತೇವೆ ಎಂದು : ಜಿಲ್ಲಾಧ್ಯಕ್ಷ ಪೂಜಾರಪ್ಪ ನಕ್ಸಲ್ ಶಂಕಿತ ಕನಕಲಬಂಡೆ ವೆಂಕಟೇಶ್ ಬಂಧನ ಹಿನ್ನೆಲೆ : ಎಸ್ಪಿ ಅಶೋಕ್ ಸ್ಪಷ್ಟನೆಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಭಾರತೀಯ ಜನತಾ ಪಕ್ಷದ ವತಿಯಿಂದ ಸೆ.17ರಿಂದ ಅ.17ರವರೆಗೆ ಒಂದು ತಿಂಗಳ ಕಾಲ ‘ಸೇವಾ ಸಂಕಲ್ಪ ಯಾತ್ರೆ’ ಹಮ್ಮಿಕೊಳ್ಳಲಾಗಿದೆ ಅಕ್ರಮ ಪಂಪ್‌ಸೆಟ್ ತೆರವುಗೊಳಿಸಿ, ಶಿರಾಡೋಣ–ಹಾಲಹಳ್ಳಿ ರೈತರಿಗೆ ನೀರು ಒದಗಿಸಲು ಆಗ್ರಹ