LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಜುಲೈ 21ನೇ ತಾರೀಕು ಪಾವಗಡಕ್ಕೆ ಸಿಎಂ ಆಗಮನ

Advertisement
 -----------------------------------------------ಪೂರ್ವ ಸಿದ್ಧತೆ ಕೈಗೊಳ್ಳಲು ಪರಿಶೀಲಿಸಿದ ಗೃಹ ಸಚಿವ ಪರಮೇಶ್ವರ

ಪಾವಗಡ :  ದಿನಾಂಕ.12/07/25 ಶನಿವಾರ ರಂದು ತಾಲ್ಲೂಕು ಪಂಚಾಯ್ತಿ ಸಭಾಂಗಣದಲ್ಲಿ ತುಮಕೂರು ಜಿಲ್ಲೆಯ ಉಸ್ತುವಾರಿ ಸಚಿವ ಹಾಗೂ ಗೃಹ ಸಚಿವ ಪರಮೇಶ್ವರ ಅಧ್ಯಕ್ಷತೆಯಲ್ಲಿ ಸಿಎಂ ಸಿದ್ದರಾಮಯ್ಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ/ ಶಂಕು ಸ್ಥಾಪನೆ ನೆರವೇರಿಸಲು ಪಾವಗಡ ಪಟ್ಟಣಕ್ಕೆ ಜುಲೈ 21ನೇ ತಾರಿಕ್ ಬರುತ್ತಿದ್ದಾರೆ ಅದಕ್ಕೆ ಕಾರ್ಯಕ್ರಮವನ್ನು ಯಶಸ್ವಿ ಗೊಳಿಸಬೇಕೆಂದು ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳನ್ನು ಕರೆಸಿ ಪೂರ್ವಭಾವಿ ಸಭೆ ನಡೆಸಿ ಇದೊಂದು ಐತಿಹಾಸಿಕ ಕಾರ್ಯಕ್ರಮವಾಗಿದ್ದು ಯಾವುದೇ ಲೋಪವಾಗದಂತೆ ಯಶಸ್ವಿಯಾಗಿ ನಡೆಸುವ ನಿಟ್ಟಿನಲ್ಲಿ ಅಗತ್ಯಪೂರ್ವ ಸಿದ್ಧತೆಗಳನ್ನು ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಭೆಯಲ್ಲಿ ಗೃಹ ಸಚಿವ ಪರಮೇಶ್ವರ್ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಅವರು ಮಾತನಾಡಿ.
ತಾಲ್ಲೂಕಿನ ಪ್ರತಿಯೊಂದು ಗ್ರಾಮಗಳಲ್ಲಿಯ ಎಲ್ಲಾ ಮನೆಗಳಿಗೂ ತುಂಗಭದ್ರಾ ಶುದ್ಧ ಕುಡಿಯುವ ನೀರು ಸಿಗುವಂತಾಗಬೇಕು. 2356 ಕೋಟಿ ವೆಚ್ಚದ ತುಂಗಭದ್ರಾ,
ಕುಡಿಯುವ ನೀರಿನ ಯೋಜನೆ ಯೋಜನೆ ಆಗಿದ್ದು ಗುಣಮಟ್ಟದಿಂದ ಕೂಡಿರಬೇಕು. ಒಂದು ವೇಳೆ ಕಳಪೆ ಕಾಮಗಾರಿಯಿಂದ ಸಮಸ್ಯೆ ಆದರೆ ಅಧಿಕಾರಿಗಳೆ ನೇರ ಹೊಣೆ. ಈ ಯೋಜನೆಯಿಂದ ತಾಲ್ಲೂಕಿನ ಚಿತ್ರಣವೇ ಬದಲಾಗಬೇಕು ನಂತರ
ವಿಶ್ವದಲ್ಲಿಯೇ ಪಾವಗಡ ತಾಲ್ಲೂಕು ಸೊಲಾರ್ ಪಾರ್ಕ್ ನಿರ್ಮಾಣದಲ್ಲಿ ಮೊದಲನೇ ಸ್ಥಾನ ಪಡೆದುಕೊಳ್ಳುತ್ತಿದ್ದು, ಸರ್ಕಾರ ಮತ್ತು ಖಾಸಗಿವರಿಂದ 3050 ಮೆಗಾವಾಟ್ ವಿದ್ಯತ್ ಉತ್ಪಾದನೆ ಮಾಡಬಹುದಾಗಿದೆ. ಇದರಿಂದ ವಿಶ್ವವೇ ಪಾವಗಡ ತಾಲ್ಲೂಕಿನತ್ತ ತಿರುಗಿ ನೋಡುವಂತಾಗಿದೆ ಎಂದು ಹೇಳಿ.
ತುಮಕೂರು ಜಿಲ್ಲೆಯ ತುಮುಲ್‌ ಅಧ್ಯಕ್ಷ ಹಾಗೂ ಪಾವಗಡ ವಿಧಾನಸಭೆ ಶಾಸಕ ಹೆಚ್ ವಿ ವೆಂಕಟೇಶ್ ರವರಿಗೆ ಪಾವಗಡ ತಾಲ್ಲೂಕಿಗೆ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ವಸತಿ ನಿಲಯಗಳನ್ನು ಅಥವಾ ರೈತರ ಅನುಕೂಲಕ್ಕಾಗಿ ಒಂದು ಭವನ ನಿರ್ಮಿಸುವುದಕ್ಕೆ ನಿಮ್ಮ ಇಲಾಖೆಯ ತುಮಕೂರು ಜಿಲ್ಲೆಯ ತುಮುಲ್‌ ನಿಂದ 10 ಕೋಟಿ ವೆಚ್ಚದಲ್ಲಿ ಭವನವನ್ನು ನಿರ್ಮಿಸುವುದಕ್ಕೆ ಹಣ ನೀಡಬೇಕು ಎಂದು ಹೇಳಿದರು.

ಈ ಪೂರ್ವಭಾವಿ ಸಭೆಗೆ ಭಾಗವಹಿಸಿದವರು. ಶಾಸಕ ಹೆಚ್ ವಿ ವೆಂಕಟೇಶ್. ಜಿಲ್ಲಾಧಿಕಾರಿ. ಶೋಭಾ ಕಲ್ಯಾಣ.
ಜಿಲ್ಲಾ ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿ ಪ್ರಭುಜಿ. ಮತ್ತು ಪೊಲೀಸ್ ವರಿಷ್ಠಾಧಿಕಾರಿ ಅಶೋಕ್. ಕೆ.ವಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಭಾಗವಹಿಸಿದ್ದರು.

ವರದಿ: ಶಿವಾನಂದ 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ