LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಸಿಎಂ ಆಸ್ತಿ ಕೊಟ್ಟರೆ ರಾಜ್ಯದ ರೈತರ ಸಾಲ ಮನ್ನಾ ಮಾಡಬಹುದು : HD ಕುಮಾರಸ್ವಾಮಿ  

Advertisement

ಬೆಂಗಳೂರು : ರಾಜ್ಯದಲ್ಲಿ ರೈತರ ಸಾಲ ಮನ್ನಾ ವಿಚಾರವಾಗಿ ರಾಜಕೀಯ ನಾಯಕರ ನಡುವೆ ವಾಗ್ದಾಳಿ ತೀವ್ರಗೊಂಡಿದೆ.

ವಿರೋಧ ಪಕ್ಷದ ನಾಯಕರು ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದು, "ರೈತರ ಸಾಲ ಮನ್ನಾ ಮಾಡಲು ಸರ್ಕಾರದ ಆರ್ಥಿಕ ಇಲಾಖೆ ಏನೂ ಕಷ್ಟಪಡಬೇಕಿಲ್ಲ.

ಬೆಂಗಳೂರಿನ ತಾವರೆಕೆರೆ ಬಳಿ ಡಿಎಲ್‌ಎಫ್ ಹಾಗೂ ನೈಸ್ ರಸ್ತೆ ಹೆಸರಿನಲ್ಲಿ ಸಾವಿರಾರು ಕೋಟಿ ಮೌಲ್ಯದ ಆಸ್ತಿಯನ್ನು ನುಂಗಲು ಹೊರಟಿದ್ದಾರೆ.

ಸಿಎಂ ಡಿ.ಕೆ.ಶಿವಕುಮಾರ್ ಅವರು ಮನಸ್ಸು ಮಾಡಿದರೆ ತಮ್ಮ ವೈಯಕ್ತಿಕ ಸಂಪತ್ತಿನಿಂದಲೇ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬಹುದು" ಎಂದು ವ್ಯಂಗ್ಯವಾಡಿದ್ದರು.

ಈ ಹೇಳಿಕೆಗೆ ಇದೀಗ ಶಾಸಕ ಹೆಚ್.ಸಿ. ಬಾಲಕೃಷ್ಣ ಅವರು ಖಾರವಾಗಿ ತಿರುಗೇಟು ನೀಡಿದ್ದಾರೆ. ವಿಪಕ್ಷ ನಾಯಕರ ಟೀಕೆಗೆ ಸವಾಲೆಸೆದಿರುವ ಅವರು, "ಅವರು ಹೇಳಿರುವ ಹಾಗೆ ಸಾಲ ಮನ್ನಾ ಮಾಡಲು ನಮ್ಮದೇನೂ ಅಭ್ಯಂತರವಿಲ್ಲ.

ಆದರೆ, ನಮ್ಮ ಮೇಲೆ ಆರೋಪ ಮಾಡುತ್ತಿರುವವರು ಕೂಡ ಹಲವು ವರ್ಷಗಳಿಂದ ರಾಜಕೀಯದಲ್ಲಿದ್ದು ಸಾಕಷ್ಟು ಸಂಪಾದನೆ ಮಾಡಿ ಇಟ್ಟುಕೊಂಡಿದ್ದಾರಲ್ಲವೇ? ಅವರೂ ಸ್ವಲ್ಪ ಹಣವನ್ನು ತಂದು ಸೇರಿಸಲಿ, ನಾವೂ ನಮ್ಮ ಕಡೆಯಿಂದ ಸ್ವಲ್ಪ ಹಣ ಹಾಕುತ್ತೇವೆ. ಇಬ್ಬರೂ ಒಟ್ಟಾಗಿ ಸೇರಿ ರೈತರ ಸಾಲ ಮನ್ನಾ ಮಾಡೋಣ ಬನ್ನಿ" ಎಂದು ಮಾರ್ಮಿಕವಾಗಿ ಸವಾಲು ಹಾಕಿದ್ದಾರೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಭೀಕರ ಅಗ್ನಿ ಅವಘಡ ಪ್ರಕರಣಕ್ಕೆ ಸ್ಪೋಟಕ ತಿರುವು: ಸಿಸಿಟಿವಿಯಲ್ಲಿ ಅಪರಿಚಿತ ಓಡಾಟ ಸೆರೆಕ್ರೇನ್ ಗೆ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ಬಾಂಗ್ಲಾದೇಶ ತಂಡಕ್ಕೆ 196 ರನ್ ಗೆಲುವಿನ ಗುರಿ ನೀಡಿದ ಭಾರತ ಬಾಗಲಕೋಟೆ ನಡುರಸ್ತೆಯಲ್ಲೇ ಯುವಕನಿಂದ ಅಸಭ್ಯ ವರ್ತನೆ: ಯುವತಿ ರಕ್ಷಣೆಗೆ ಬಂದವರನ್ನೇ ಜೈಲಿಗಟ್ಟಿದ ಪೊಲೀಸ್ರುಸಂಪೂರ್ಣ ಸರಣಿ ಜಯಕ್ಕೆ ಆಸ್ಟ್ರೇಲಿಯಾ ಯತ್ನಗಳತಗಾ ಗ್ರಾಮದಲ್ಲಿ ಪ್ರಜಾಸೇವೆ ಕಾರ್ಯಕ್ರಮಪ್ರಶಿಕ್ಷಣಾರ್ಥಿಗಳು ಉತ್ತಮ ಶಿಕ್ಷಕರಾಗಲು ರೂಢಿ ಪಾಠಗಳು ಸಹಕಾರಿ : ಮಹಾಂತೇಶ ಓಲೇಕಾರ ಯರಗಟ್ಟಿಯಲ್ಲಿ ಪ್ರಜಾ ಸೇವೆ ಆಂದೋಲನ ಸಭೆಕನ್ನಡಪರ ಹೋರಾಟಗಾರರ ವಿರುದ್ಧ ಕೇಸ್ ಗಳು ವಾಪಸ್‌: ಡಿ.ಕೆ.ಶಿವಕುಮಾರ್ಹುಬ್ಬಳ್ಳಿಯಲ್ಲಿ ಘೋರ ದುರಂತ : ಸಿಲಿಂಡರ್ ಸ್ಫೋಟಗೊಂಡು ಇಬ್ಬರು ದುರ್ಮರಣ