Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗೃಹಲಕ್ಷ್ಮಿ ಯೋಜನೆ ಬಗ್ಗೆ ಸಿಎಂ ಕೊಟ್ಟರು ಮಹತ್ವದ ಮಾಹಿತಿ

Advertisement
ಮಡಿಕೇರಿ: ಮೇ ತಿಂಗಳವರೆಗೆ ಗೃಹಲಕ್ಷ್ಮೀ ಯೋಜನೆ ಹಣ ಕೊಟ್ಟಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಭೂ ಕುಸಿತ ಸಂಭವಿಸಿದ ಮತ್ತು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಸಿಎಂ, ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಮೇ ತಿಂಗಳವರೆಗೆ ಹಣ ನೀಡಿದ್ದು, ಜೂನ್, ಜುಲೈ ತಿಂಗಳ ಗೃಹಲಕ್ಷ್ಮಿ ಹಣ ಕೊಡುತ್ತೇವೆ.ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಮುಂದುವರೆಸಲಿದೆ ಎಂದು ಹೇಳಿದ್ದಾರೆ.

ಮನೆ ಸಂಪೂರ್ಣ ಹಾನಿಯದವರಿಗೆ 1.2 ಲಕ್ಷ ರೂ. ಪರಿಹಾರ ನೀಡಲಾಗುವುದು. ಪರಿಹಾರದ ಜೊತೆಗೆ ಹೊಸ ಮನೆ ಕಟ್ಟಿಕೊಡಲಾಗುವುದು. ಭಾಗಶಃ ಮನೆ ಹಾನಿಯಾದವರಿಗೆ 50,000ರೂ. ಪರಿಹಾರ ನೀಡಲಾಗುವುದು.


ಕೊಡಗು ಜಿಲ್ಲೆಯಲ್ಲಿ ಮಳೆಯಿಂದ 16 ಜಾನುವಾರು ಮೃತಪಟ್ಟಿದ್ದು, ಒಂದೊಂದು ಜಾನುವಾರಿಗೆ 33 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.


ಕೊಡಗು ಜಿಲ್ಲೆಯಲ್ಲಿ 14 ಕಡೆ ಕಾಳಜಿ ಕೇಂದ್ರ ಸ್ಥಾಪಿಸಲಾಗಿದೆ. 186 ಜನ ಕಾಳಜಿ ಕೇಂದ್ರದಲ್ಲಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಶೇಕಡ 50ರಷ್ಟು ಮಳೆ ಹೆಚ್ಚಾಗಿದೆ. ಹೆಚ್ಚು ಪಡೆ ಭೂಕುಸಿತವಾಗಿದೆ.


24 ಗಂಟೆಯಲ್ಲಿ ಎರಡು ಕಡೆ ಬೂಕುಸಿತ ಸಂಭವಿಸಿದೆ. ಅದೃಷ್ಟವಶಾತ್ ಪ್ರಾಣ ಹಾನಿಯಾಗಿಲ್ಲ. ಕೆಲವರಿಗೆ ಗಾಯಗಳಾಗಿವೆ. ಮಳೆ ನಿಂತ ತಕ್ಷಣ ಪರಿಹಾರ ಕಾರ್ಯ ಕೈಗೊಳ್ಳಲಾಗುವುದು. ಮಳೆಯಿಂದ ಹಾನಿಯಾದ ಮನೆಗಳಿಗೆ ಪರಿಹಾರ ನೀಡಲಾಗುವುದು ಎಂದು ಹೇಳಿದ್ದಾರೆ.


ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಬೇಕು ಎನ್ನುವುದು ನಮ್ಮ ನಿಲುವಾಗಿದೆ. ಈ ಬಗ್ಗೆ ಅರಣ್ಯ ಸಚಿವರ ಜೊತೆ ಮತ್ತೊಮ್ಮೆ ಚರ್ಚಿಸಿ ಅಂತಿಮ ತೀರ್ಮಾನ ಮಾಡಲಾಗುವುದು. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ 746 ಕೋಟಿ ರೂ. ಮತ್ತು ಮಡಿಕೇರಿ ಜಿಲ್ಲಾ ಪಿಡಿ ಖಾತೆಯಲ್ಲಿ 46 ಕೋಟಿ ರೂ. ಹಣ ಇದೆ. ಅಗತ್ಯಬಿದ್ದರೆ ಇನ್ನೂ ಹೆಚ್ಚಿನ ಹಣ ನೀಡಲಾಗುವುದು ಎಂದು ಹೇಳಿದ್ದಾರೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ