Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮತ ಕಳ್ಳತನ ವಿರುದ್ಧದ ಸಹಿ ಸಂಗ್ರಹ : 1,12,41,000 ಸಹಿಗಳ ದಾಖಲೆ ಎಐಸಿಸಿಗೆ ಸಲ್ಲಿಕೆ

Advertisement
ನವದೆಹಲಿ : ಮತ ಕಳ್ಳತನ ವಿರುದ್ಧದ ಸಹಿ ಸಂಗ್ರಹ ಅಭಿಯಾನವನ್ನು ಕರ್ನಾಟಕದಲ್ಲಿ ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದ್ದು, ಕೆಪಿಸಿಸಿ ಅಧ್ಯಕ್ಷರಾದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ರಾಜ್ಯದಲ್ಲಿ ಸಂಗ್ರಹಿಸಲಾದ 1,12,41,000 ಸಹಿಗಳ ದಾಖಲೆಗಳನ್ನು ಎಐಸಿಸಿಗೆ ಸಲ್ಲಿಸಿದರು.

ದೆಹಲಿಯಲ್ಲಿರುವ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ಸೋಮವಾರ ಭೇಟಿ ನೀಡಿದ ಶಿವಕುಮಾರ್ ಅವರ ನೇತೃತ್ವದ ಕರ್ನಾಟಕ ಕಾಂಗ್ರೆಸ್ ಮುಖಂಡರ ನಿಯೋಗವು ಸಹಿ ಸಂಗ್ರಹ ದಾಖಲೆಗಳ ಒಂದು ಪೆಟ್ಟಿಗೆಯನ್ನು ಸಾಂಕೇತಿಕವಾಗಿ ಸಲ್ಲಿಸಿದರು. ನಂತರ ಉಳಿದ ಪೆಟ್ಟಿಗೆಗಳನ್ನು ಎಐಸಿಸಿ ನೂತನ ಕಟ್ಟಡ ಇಂದಿರಾ ಭವನದಲ್ಲಿ ಎಐಸಿಸಿ ಕಾರ್ಯದರ್ಶಿ ನೆಟ್ಟ ಡಿಸೋಜ ಅವರಿಗೆ ಹಸ್ತಾಂತರಿಸಲಾಯಿತು.

ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ 40 ಜಿಲ್ಲೆಗಳಲ್ಲಿ (ರಾಜಕೀಯ ಉದ್ದೇಶಕ್ಕಾಗಿ ರಚಿಸಿಕೊಂಡಿರುವ ಜಿಲ್ಲೆಗಳು) ಸಹಿ ಸಂಗ್ರಹಿಸಲಾಗಿದೆ.

ರಾಜ್ಯದಲ್ಲಿ ನಡೆದ ಅಭಿಯಾನದಲ್ಲಿ ಅತಿ ಹೆಚ್ಚು ಸಹಿ ಸಂಗ್ರಹಿಸಿದ ಜಿಲ್ಲಾಧ್ಯಕ್ಷರುಗಳು ಕೂಡ ಶಿವಕುಮಾರ್ ಅವರ ಜೊತೆಯಲ್ಲಿ ದೆಹಲಿಗೆ ಹೋಗಿ ಸಹಿ ಸಂಗ್ರಹ ದಾಖಲೆಗಳನ್ನು ನೀಡಿದ್ದಾರೆ.

ಈ ಸಂದರ್ಭದಲ್ಲಿ ಎಐಸಿಸಿ ಕಾರ್ಯದರ್ಶಿ ಅಭಿಷೇಕ್ ದತ್, ಕೆಪಿಸಿಸಿ ಕಾರ್ಯಾಧ್ಯಕ್ಷ ಡಾ ಜಿ ಸಿ ಚಂದ್ರಶೇಖರ್, ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಸೊರಕೆ ಮತ್ತಿತರರು ಉಪಸ್ಥಿತರಿದ್ದರು.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ