Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಟ ಯಶ್ ನಟನೆಯ ಟಾಕ್ಸಿಕ್ ಚಿತ್ರದ ವಿರುದ್ಧ ಆಪ್ ಆಕ್ರೋಶ : ಕಾರ್ಯಕರ್ತೆರಿಂದ ದೂರು

Advertisement
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಟಾಕ್ಸಿಕ್ ಚಿತ್ರದ ಟೀಸರ್ ವಿವಾದಗಳಿಂದ ಭಾರಿ ಸದ್ದು ಮಾಡುತ್ತಿದೆ. ಟಾಕ್ಸಿಕ್ ಟೀಸರ್ ನಲ್ಲಿರುವ ಅಶ್ಲೀಲ ದೃಶ್ಯದ ವಿರುದ್ಧ ಸಾಲು ಸಾಲು ದೂರು ದಾಖಲಾಗುತ್ತಿವೆ.

ಟೀಸರ್ ರಿಲೀಸ್ ಆಗಿ 24 ಗಂಟೆಗಳಲ್ಲಿಯೇ 200 ಮಿಲಿಯನ್ ವೀಕ್ಷಣೆ ಕಂಡಿದ್ದ ಟಾಕ್ಸಿಕ್ ಟೀಸರ್, ಅದರಲ್ಲಿನ ಅಶ್ಲೀಲ ದೃಶ್ಯ ವಿವಾದಕ್ಕೆ ಕಾರಣವಾಗಿದೆ.

ಕೆಲ ದಿನಗಳ ಹಿಂದೆ ವಕೀಲರೊಬ್ಬರು ಟೀಸರ್ ನಲ್ಲಿರುವ ಬೋಲ್ಡ್ ದೃಶ್ಯಗಳ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಕುಟುಂಬದ ಜೊತೆ ಕುಳಿತು ವೀಕ್ಷಿಸಲು ಸಾಧ್ಯವಿಲ್ಲದಂತಹ ಟೀಸರ್. ಮಕ್ಕಳು, ವಿದ್ಯಾರ್ಥಿಗಳಿಗೆ ಇಂತಹ ಟೀಸರ್ ನಿಂದ ಯಾವ ಸಂದೇಶ ನೀಡಲು ಹೋಗಿದ್ದೀರಿ? ಎಂದು ಪ್ರಶ್ನಿಸಿದ್ದರು. ಇದೀಗ ಆಮ್ ಆದ್ಮಿ ಪಕ್ಷ ಕೂಡ ಟೀಸರ್ ವಿರುದ್ಧ ಕಿಡಿಕಾರಿದೆ.

ಆಮ್ ಆದ್ಮಿ ಪಕ್ಷದ ಮಹಿಳಾ ಘಟಕ ಟಾಕ್ಸಿಕ್ ಟೀಸರ್ ನಲ್ಲಿರುವ ಅಶ್ಲೀಲ ದೃಶ್ಯಗಳನ್ನು ತೆಗೆದುಹಾಕುವಂತೆ ಒತ್ತಾಯಿಸಿದೆ.

ಯಶ್ ಅವರಂತಹ ಖ್ಯಾತ ನಟರು ಇಂತಹ ದೃಶ್ಯದ ಟೀಸರ್ ಮೂಲಕ ಸಮಾಜದಲ್ಲಿ ತಪ್ಪು ಸಂದೇಶ ನೀಡುತ್ತಿರುವುದು ಬೇಸರದ ಸಂಗತಿ ಎಂದು ಆಮ್ ಆದ್ಮಿ ಪಕ್ಷದ ಮಹಿಳಾ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಟೀಸರ್ ನಲ್ಲಿರುವ ಅಶ್ಲೀಲ ಹಾಗೂ ಮಹಿಳೆಯರು ಮತ್ತು ಸಾಮಾಜಿಕ ಸ್ವಾಸ್ಥ್ಯಕ್ಕೆ ಧಕ್ಕೆಯನ್ನುಂಟು ಮಾಡುತ್ತಿದೆ. ಯಾವುದೇ ವಯಸ್ಸಿನ ಮಿತಿ ಅಥವಾ ಮುನ್ನೆಚ್ಚರಿಕೆ ಇಲ್ಲದೇ ಸಾರ್ವಜನಿಕವಾಗಿ ಬಿಡುಗಡೆಯಾಗಿರುವ ಈ ದೃಶ್ಯಗಳು ಮಹಿಳೆಯರ ಘನತೆಗೆ ಕುಂದುತರುತ್ತದೆ. ಕನ್ನಡದ ಐತಿಹಾಸಿಕ ಸಂಸ್ಕೃತಿಗೆ ಮಾಡುತ್ತಿರುವ ಅಪಮಾನ ಎಂದು ಆಪ್ ನ ರಾಜ್ಯ ಮಹಿಳಾ ಕಾರ್ಯದರ್ಶಿ ಉಷಾ ಮೋಹನ್ ಕಿಡಿಕಾರಿದ್ದಾರೆ.

ರಾಜ್ಯ ಮಹಿಳಾ ಆಯೋಗದ ಕಚೇರಿಗೆ ಭೇಟಿ ನೀಡಿದ ಆಮ್ ಆದ್ಮಿ ಪಕ್ಷದ ಮಹಿಳಾ ಘಟಕದ ಸದಸ್ಯರು, ಟಾಕ್ಸಿಕ್ ಚಿತ್ರದ ಟೀಸರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಾಗೂ ಅಶ್ಲೀಲ ದೃಶ್ಯ ತೆಗೆಯುವಂತೆ ನಿರ್ದೇಶಿಸುವಂತೆ ಮನವಿ ಮಾಡಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ