ಚಿಟಗುಪ್ಪ:ಪ್ರಸ್ತಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಜಿಲ್ಲಾ ಆಡಳಿತ ವತಿಯಿಂದ ಬೀದರ ನಗರದಲ್ಲಿ ಅಭಿನಂದನಾ ಪ್ರಮಾಣ ಪತ್ರ ವಿತರಿಸುವ ಸಮಾರಂಭ ಜರುಗಿತ್ತು.ಈ ಸಮಾರಂಭದಲ್ಲಿ ಚಿಟಗುಪ್ಪಾ ತಾಲ್ಲೂಕಿನ ಮಂಗಲಗಿ ಗ್ರಾಮೀಣ ಭಾಗದಲ್ಲಿರುವ ಹಮ್ಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಮಹಮ್ಮದ್ ಖುಶ್ರೂದ್ದಿನ್ ಖಾದ್ರಿ 99.36 ಅಂಕ ಪಡೆದು ರಾಜ್ಯಕ್ಕೆ 5ನೇ ರ್ಯಾಂಕ್,ಜಿಲ್ಲೆಗೆ 2ನೇ ರ್ಯಾಂಕ್ ಮತ್ತು ತಾಲ್ಲೂಕಿಗೆ ಮೊದಲ ರ್ಯಾಂಕ್ ಗಳಿಸಿದರಿಂದ ಜಿಲ್ಲಾಧಿಕಾರಿ ಶ್ರೀಮತಿ ಶಿಲ್ಪಾ ಶರ್ಮಾ ಅವರು ಸನ್ಮಾನಿಸಿ ಅಭಿನಂದನಾ ಪತ್ರ ವಿತರಿಸಿದರು.ಈ ಸಂದರ್ಭದಲ್ಲಿ ಹಮ್ಮಿದುಲ್ಲಾ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಶಿರೀನ್ ಖಾದ್ರಿ ಹಾಗೂ ಎಂ.ಎ ಖಾದ್ರಿ ಉಪಸ್ಥಿತರಿದ್ದರು.
ವರದಿ:ಸಜೀಶ್ ಲಂಬುನೋರ್

