ಹಿಂದೂ ಪದವನ್ನು ಅಸ್ತಿತ್ವಕ್ಕೆ ತಂದಿದ್ದೇ ಕಾಂಗ್ರೆಸ್ ನಮ್ಮ ಭಾರತ ದೇಶದಲ್ಲಿ ಹಿಂದೂ ಎಂಬ ಯಾವ ಪದವೇ ಇರಲಿಲ್ಲ. ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರು ಹಿಂದೂ ಕೋಡ್ ಬಿಲ್ ತರದೇ ಇದ್ದಿದ್ರೆ ನಾವು ಇವತ್ತು ಈ ರೀತಿ ಇರುತ್ತಿರಲಿಲ್ಲ ಎಂದು ಸಂತೋಷ್ ಲಾಡ್ ಹೇಳಿದ್ದಾರೆ.
ಒಂದುವೇಳೆ ದೇಶದಲ್ಲಿ ಹಿಂದೂ ಕೋಡ್ ಬಿಲ್ ಜಾರಿಗೆ ತರದೇ ಇದ್ದಿದ್ರೆ, ಆಗ ಶೂದ್ರರನ್ನು ಕರೆಯಿರಿ, ಬ್ರಾಹ್ಮಣ, ವೈಷ್ಯರನ್ನು ಕರೆಯಿಸಿ ಎಂಬ ವ್ಯವಸ್ಥೆ ಈಗಲೂ ಇರುತ್ತಿತ್ತು ಎಂದು ಹೇಳಿದ್ದಾರೆ.
ಈ ಬಗ್ಗೆ ಬೇಸರ ವ್ಯಕ್ತಪಡಿಸಿದ ಅವರು, ವಿಪರಿಯಾಸ ಅಂದ್ರೆ ನಿಜವಾದ ಇತಿಹಾಸವನ್ನು ನಮ್ಮ ಜನ ಓದುವುದಿಲ್ಲ. ಕೇವಲ ಮಾಧ್ಯಮಗಳ ಮೂಲಕ ಸುಳ್ಳು ಸುದ್ದಿ ಹೇರುವುದೇ ರಾಜಕಾರಣವಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಬೇಸರ ಹೊರಹಾಕಿದ್ದಾರೆ.

