Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್‌ ಜಯಂತಿ: ನಿಮಿತ್ಯ ಜನರಿಗೆ ತಂಪು ಪಾನೀಯ ನೀಡಿದ ಯುವಕರು

Advertisement
ಸಾವಳಗಿ : ಇಂದು ಸಂವಿಧಾನ ಶಿಲ್ಪಿ, ಮಹಾ ಮಾನವತಾವಾದಿ, ಭಾರತ ರತ್ನ ಡಾ ಬಿ.ಆರ್.ಅಂಬೇಡ್ಕರ್ ರವರ 134ನೇ ಜನ್ಮದಿನಾಚರಣೆಯನ್ನು ಸಾವಳಗಿ ಪಟ್ಟಣದಲ್ಲಿ ಬೆಳಿಗ್ಗೆ ಗ್ರಾಮದ ಎಲ್ಲ ಮುಖಂಡರು ಮತ್ತು ಯುವಕರು ಡಾ. ಬಿ ಆರ್ ಅಂಬೇಡ್ಕರ್ ಅವರ ಮೂರ್ತಿಗೇ ಪುಷ್ಪಾರ್ಚನೆ ಮಾಡಿ ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಆಚರಣೆ ಮಾಡಿದರು.



ಈ ಪುಷ್ಪಾರ್ಚನೆ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾಗ ಗಿರೀಶ್ ಕಡಕೋಳ ಮಾತನಾಡಿ ವಿದ್ಯಾವಂತರಾಗಿ, ಸಂಘಟಿತರಾಗಿ ಮತ್ತು ಉತ್ತೇಜಿತರಾಗಿರಿ..! ಎಂಬ ತಮ್ಮ ಸಂದೇಶದಿಂದ ಆರಂಭವಾಗಿ, ಪ್ರಜೆಗಳು ತಾವು ಏನೆಲ್ಲ ಸ್ವತಂತ್ರವನ್ನು ಪಡೆದಿರಬೇಕು, ಹೇಗೆ ಗೌರವಿಸಬೇಕು, ಹೇಗೆ ಬಳಸಿಕೊಳ್ಳಬೇಕು, ಎಲ್ಲಿಯವರೆಗೆ ಬಳಸಿಕೊಳ್ಳಬೇಕು ಎಂಬುವವರೆಗಿನ ಬೃಹತ್‌ ಸಂವಿಧಾನವನ್ನು ಎಲ್ಲರಿಗೂ ಸಮಾನವಾಗಿ ಅನ್ವಯವಾಗುವಂತೆ, ದೇಶದ ಪ್ರತಿಯೊಬ್ಬರ ಪಾಲಿಗೆ ಪವಿತ್ರ ಗ್ರಂಥವಾದ ಸಂವಿಧಾನವನ್ನು ನೀಡಿದ ಹಿಂದಿನ ದೊಡ್ಡ ಶಕ್ತಿ ಇವರು. ಎಂದು ಹೇಳಿದರು.

ರಾಯಲ್ ಫ್ರೆಂಡ್ಸ್ ಗ್ರೂಪ್ ನವರು ಬಹಳ ವಿಶೇಷವಾಗಿ ಜನ್ಮದಿನಾಚರಣೆಯನ್ನು ಆಚರಿಸಿದರು ವಿಶೇಷ ಏನೆಂದರೆ ಜನರಿಗೆ ತಂಪು ಪಾನೀಯ ನೀಡಿ ಸಾರ್ವಜನಿಕರಿಗೆ ಬಿಸಿಲಿನ ಬೇಗೆಯನ್ನು ತಪ್ಪಿಸಿದರು ಇದೇ ಸಂದರ್ಭದಲ್ಲಿ ಮಾತನಾಡಿದ ಗ್ರಾಮ ಪಂಚಾಯಿತಿ ಸದಸ್ಯರಾದ ಭರತೇಶ್ ಜಮಖಂಡಿ ಅವರು ಡಾ ಬಿ ಆರ್ ಅಂಬೇಡ್ಕರ್ ಅವರ ಬದುಕು, ಜೀವನಶೈಲಿ, ಅವರ ಕೊಡುಗೆಗಳು ಎಲ್ಲರಿಗೂ ಸ್ಫೂರ್ತಿ. ಅವರ ಕೊಡುಗೆ ಭಾರತ ಜನತೆಯ ಒಂದು ರೀತಿ ಜೀವನಾಡಿ ಇದ್ದಂತೆ. ಅವರ ಬೃಹತ್‌ ಮತ್ತು ಸೂಕ್ಷ್ಮ ಕೊಡುಗೆಗಳಿಂದಲೇ ಇಂದು ದೇಶದ ಎಲ್ಲ ಜನತೆಗೆ ಸಮಾನತೆ, ಹಕ್ಕು, ಕರ್ತವ್ಯ, ಪ್ರಗತಿಯ ಕನಸು ಎಲ್ಲವೂ ಸುಲಭ ಹಾಗೂ ಸುಗಮವಾಗಿರುವುದು ಎಂದು ಹೇಳಿದರು.



ರಾಯಲ್ ಫ್ರೆಂಡ್ಸ್ ಗ್ರೂಪ್ ನ ಅಧ್ಯಕ್ಷರಾದ ಮಹಾಂತೇಶ ಹೋನವಾಡ ಮಾತನಾಡಿ ಇದೇ ಮೊದಲ ಬಾರಿ ನಮ್ಮ ಎಲ್ಲ ಗೆಳೆಯರು ಸೇರಿ ಜನರಿಗೆ ಒಳ್ಳೆ ರೀತಿ ಯಿಂದ ಸಹಾಯ ಸಹಕಾರ ಮಾಡುವುದು ನಮ್ಮ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಒಳ್ಳೆಯ ಸಂದೇಶಗಳನ್ನು ಜನರಿಗೆ ಹೇಳುವುದು ನಮ್ಮ ಉದ್ದೇಶವಾಗಿದೆ ಭಾರತದ ಪ್ರತಿ ಪ್ರಜೆಯೂ ಸಹ ಅವರ ಕೊಡುಗೆಗಳನ್ನು ನೆನೆದು, ಅವರನ್ನು ಸ್ಮರಿಸಿ, ಗೌರವಿಸಬೇಕಾದ ದಿನ ಇದಾಗಿದೆ ಎಂದು ಹೇಳಿದ್ದರು ಇದೇ ಸಂದರ್ಭದಲ್ಲಿ ಕಿರಣ ಸೂರಗೊಂಡ. ಅಂಬರೀಶ್ ಮೇಲಿನ ಕೇರಿ ವಿಶ್ವನಾಥ್ ಸಾವಳಗಿ ಅನಿಲ್ ತಿಕೋಟಾ ಶಶಿ ಹೊನ್ನೂರ್ ಆದಿತ್ಯ ತಿಕೋಟಾ ಸಾಗರ್ ಕಾಂಬಳೆ ಅನಿಲ ಐಹೊಳೆ ಅಭಿ ಸರ್ ಇನ್ನು ಅನೇಕ ಯುವಕರು ಪಾಲ್ಗೊಂಡಿದ್ದರು.

ವರದಿ: ಅಜಯ್ ಕಾಂಬಳೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ