Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಾಯಸಂದ್ರ ಕ್ರಾಸ್ ನಿಂದ ಅಂಚಿಹಳ್ಳಿ ಡಾಂಬಾರು ರಸ್ತೆ ನಿರ್ಮಾಣಕ್ಕೆ ಚಾಲನೆ

Advertisement
ತುರುವೇಕೆರೆ: -ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಮಾಯಸಂದ್ರ, ಯಡಿಯೂರು ರಸ್ತೆಯ ಮಾರ್ಗ ಮಧ್ಯದ ಮಾಯಸಂದ್ರ ಕ್ರಾಸ್ನಿಂದ ಅಂಚಿಹಳ್ಳಿವರೆಗಿನ ಡಾಂಬಾರು ರಸ್ತೆ ನಿರ್ಮಾಣಕ್ಕೆ ಶಾಸಕ ಎಂ.ಟಿ.ಕೃಷ್ಣಪ್ಪ ಚಾಲನೆ ನೀಡಿದರು.

ತಾಲ್ಲೂಕಿನ ಜಡೆಯ ಗ್ರಾಮದಲ್ಲಿ ಭೂಮಿ ಪೂಜೆ ನೆರವೇರಿಸಿ ಮಾತನಾಡಿ, ಸುಮಾರು 10 ಕೋಟಿ ವೆಚ್ಚದಲ್ಲಿ ರಸ್ತೆಯನ್ನು ನಿರ್ಮಾಣ ಮಾಡಲಾಗುತ್ತಿದೆ. ಈಗಾಗಲೇ ಯಡಿಯೂರು ಕ್ರಾಸ್ ನಿಂದ ಅಂಚಿಹಳ್ಳಿವರೆಗೆ ಡಾಂಬಾರು ರಸ್ತೆ ನಿರ್ಮಾಣ ಮಾಡಲಾಗುತ್ತಿದೆ. ಈ ರಸ್ತೆಯೂ ಆದಲ್ಲಿ ಯಡಿಯೂರು, ಮಾಯಸಂದ್ರ ರಸ್ತೆಯ ನಿರ್ಮಾಣ ಕಾರ್ಯ ಸಂಪೂರ್ಣಗೊಳ್ಳಲಿದೆ ಎಂದರು.

ಯಡಿಯೂರು, ಮಾಯಸಂದ್ರ ರಸ್ತೆಯ ನಿರ್ಮಾಣ ಕಾರ್ಯ ಪೂರ್ಣಗೊಳ್ಳುವ ಮೊದಲೇ ಸಾರ್ವಜನಿಕರು ಹಾಗೂ ರೈತಾಪಿಗಳು ತಮ್ಮ ಅಗತ್ಯಕ್ಕೆ ತಕ್ಕಂತೆ ಈಗಲೇ ರಸ್ತೆಯ ಮಧ್ಯೆ ಪೈಪುಗಳನ್ನು ಅಳವಡಿಸಿಕೊಳ್ಳಬಹುದಾಗಿದೆ. ರಸ್ತೆ ನಿರ್ಮಾಣವಾದ ನಂತರ ರಸ್ತೆಯನ್ನು ಅಗೆದು ಪೈಪುಗಳನ್ನು ಅಳವಡಿಸಲು ಮುಂದಾದಲ್ಲಿ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದ ಅವರು, ರಸ್ತೆ ಉತ್ತಮ ಗುಣಮಟ್ಟದಿಂದ ನಿರ್ಮಾಣ ಮಾಡಲಾಗುತ್ತಿದ್ದು, ಹತ್ತಾರು ವರ್ಷಗಳ ಕಾಲ ರಸ್ತೆ ಗಟ್ಟಿಮುಟ್ಟಾಗಿ ಇರಲಿದೆ. ರಸ್ತೆ ನಿರ್ಮಾಣಕ್ಕೆ ಮೊದಲೇ ರೈತಾಪಿಗಳು ತಮ್ಮ ಜಮೀನುಗಳಿಗೆ ಅಥವಾ ಮನೆಗಳಿಗೆ ಅಗತ್ಯವಿರುವ ಪೈಪುಗಳನ್ನು ಅಳವಡಿಸಿಕೊಳ್ಳುವುದು. ತದ ನಂತರ ರಸ್ತೆ ಅಗೆದಲ್ಲಿ ರಸ್ತೆ ಬೇಗನೇ ಗುಣಮಟ್ಟ ಕಳೆದುಕೊಂಡು ಹಾಳಾಗಲಿದೆ. ಅಧಿಕಾರಿಗಳು ಮತ್ತು ಗುತ್ತಿಗೆದಾರರು ಈ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಉಂಟು ಮಾಡಿ ರಸ್ತೆ ಹಾಳಾಗದಂತೆ ಮುತುವರ್ಜಿವಹಿಸಬೇಕೆಂದು ಅಧಿಕಾರಿಗಳಿಗೆ ಮತ್ತು ಗುತ್ತಿಗೆದಾರರಿಗೆ ಸೂಚಿಸಿದರು.

ಈ ಸಂಧರ್ಭದಲ್ಲಿ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಪ್ರಭಾಕರ್, ಸಹಾಯಕ ಇಂಜಿನಿಯರ್ ಇಮ್ರಾನ್, ಮಾಯಸಂದ್ರ, ಭೈತರಹೊಸಳ್ಳಿ, ಸೊರನವಹಳ್ಳಿಯ ಹಲವಾರು ಗ್ರಾಮ ಪಂಚಾಯ್ತಿ ಸದಸ್ಯರು, ಜನಪ್ರತಿನಿಧಿಗಳು ಮತ್ತು ಮುಖಂಡರು ಉಪಸ್ಥಿತರಿದ್ದರು.

ವರದಿ: ಗಿರೀಶ್ ಕೆ ಭಟ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ