Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಾಯಸಂದ್ರ ಕ್ರಾಸ್ ನಿಂದ ಅಂಚಿಹಳ್ಳಿ ಡಾಂಬಾರು ರಸ್ತೆ ನಿರ್ಮಾಣಕ್ಕೆ ಚಾಲನೆ

Advertisement
ತುರುವೇಕೆರೆ: -ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಮಾಯಸಂದ್ರ, ಯಡಿಯೂರು ರಸ್ತೆಯ ಮಾರ್ಗ ಮಧ್ಯದ ಮಾಯಸಂದ್ರ ಕ್ರಾಸ್ನಿಂದ ಅಂಚಿಹಳ್ಳಿವರೆಗಿನ ಡಾಂಬಾರು ರಸ್ತೆ ನಿರ್ಮಾಣಕ್ಕೆ ಶಾಸಕ ಎಂ.ಟಿ.ಕೃಷ್ಣಪ್ಪ ಚಾಲನೆ ನೀಡಿದರು.

ತಾಲ್ಲೂಕಿನ ಜಡೆಯ ಗ್ರಾಮದಲ್ಲಿ ಭೂಮಿ ಪೂಜೆ ನೆರವೇರಿಸಿ ಮಾತನಾಡಿ, ಸುಮಾರು 10 ಕೋಟಿ ವೆಚ್ಚದಲ್ಲಿ ರಸ್ತೆಯನ್ನು ನಿರ್ಮಾಣ ಮಾಡಲಾಗುತ್ತಿದೆ. ಈಗಾಗಲೇ ಯಡಿಯೂರು ಕ್ರಾಸ್ ನಿಂದ ಅಂಚಿಹಳ್ಳಿವರೆಗೆ ಡಾಂಬಾರು ರಸ್ತೆ ನಿರ್ಮಾಣ ಮಾಡಲಾಗುತ್ತಿದೆ. ಈ ರಸ್ತೆಯೂ ಆದಲ್ಲಿ ಯಡಿಯೂರು, ಮಾಯಸಂದ್ರ ರಸ್ತೆಯ ನಿರ್ಮಾಣ ಕಾರ್ಯ ಸಂಪೂರ್ಣಗೊಳ್ಳಲಿದೆ ಎಂದರು.

ಯಡಿಯೂರು, ಮಾಯಸಂದ್ರ ರಸ್ತೆಯ ನಿರ್ಮಾಣ ಕಾರ್ಯ ಪೂರ್ಣಗೊಳ್ಳುವ ಮೊದಲೇ ಸಾರ್ವಜನಿಕರು ಹಾಗೂ ರೈತಾಪಿಗಳು ತಮ್ಮ ಅಗತ್ಯಕ್ಕೆ ತಕ್ಕಂತೆ ಈಗಲೇ ರಸ್ತೆಯ ಮಧ್ಯೆ ಪೈಪುಗಳನ್ನು ಅಳವಡಿಸಿಕೊಳ್ಳಬಹುದಾಗಿದೆ. ರಸ್ತೆ ನಿರ್ಮಾಣವಾದ ನಂತರ ರಸ್ತೆಯನ್ನು ಅಗೆದು ಪೈಪುಗಳನ್ನು ಅಳವಡಿಸಲು ಮುಂದಾದಲ್ಲಿ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದ ಅವರು, ರಸ್ತೆ ಉತ್ತಮ ಗುಣಮಟ್ಟದಿಂದ ನಿರ್ಮಾಣ ಮಾಡಲಾಗುತ್ತಿದ್ದು, ಹತ್ತಾರು ವರ್ಷಗಳ ಕಾಲ ರಸ್ತೆ ಗಟ್ಟಿಮುಟ್ಟಾಗಿ ಇರಲಿದೆ. ರಸ್ತೆ ನಿರ್ಮಾಣಕ್ಕೆ ಮೊದಲೇ ರೈತಾಪಿಗಳು ತಮ್ಮ ಜಮೀನುಗಳಿಗೆ ಅಥವಾ ಮನೆಗಳಿಗೆ ಅಗತ್ಯವಿರುವ ಪೈಪುಗಳನ್ನು ಅಳವಡಿಸಿಕೊಳ್ಳುವುದು. ತದ ನಂತರ ರಸ್ತೆ ಅಗೆದಲ್ಲಿ ರಸ್ತೆ ಬೇಗನೇ ಗುಣಮಟ್ಟ ಕಳೆದುಕೊಂಡು ಹಾಳಾಗಲಿದೆ. ಅಧಿಕಾರಿಗಳು ಮತ್ತು ಗುತ್ತಿಗೆದಾರರು ಈ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಉಂಟು ಮಾಡಿ ರಸ್ತೆ ಹಾಳಾಗದಂತೆ ಮುತುವರ್ಜಿವಹಿಸಬೇಕೆಂದು ಅಧಿಕಾರಿಗಳಿಗೆ ಮತ್ತು ಗುತ್ತಿಗೆದಾರರಿಗೆ ಸೂಚಿಸಿದರು.

ಈ ಸಂಧರ್ಭದಲ್ಲಿ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಪ್ರಭಾಕರ್, ಸಹಾಯಕ ಇಂಜಿನಿಯರ್ ಇಮ್ರಾನ್, ಮಾಯಸಂದ್ರ, ಭೈತರಹೊಸಳ್ಳಿ, ಸೊರನವಹಳ್ಳಿಯ ಹಲವಾರು ಗ್ರಾಮ ಪಂಚಾಯ್ತಿ ಸದಸ್ಯರು, ಜನಪ್ರತಿನಿಧಿಗಳು ಮತ್ತು ಮುಖಂಡರು ಉಪಸ್ಥಿತರಿದ್ದರು.

ವರದಿ: ಗಿರೀಶ್ ಕೆ ಭಟ್
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ