LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ವಸತಿ ಹಂಚಿಕೆಯಲ್ಲಿ ಭ್ರಷ್ಟಾಚಾರದ ಆರೋಪ: ಸಚಿವರ ರಾಜಿನಾಮೆಗೆ ಒತ್ತಾಯ

Advertisement
ಸಿರುಗುಪ್ಪ : ರಾಜ್ಯದ ವಸತಿ ಇಲಾಖೆಯಿಂದ ಮನೆ ಹಂಚಿಕೆಯ ವೇಳೆ ಕೇಳಿಬಂದಿರುವ ಭ್ರಷ್ಟಾಚಾರದ ನೈತಿಕ ಹೊಣೆಹೊತ್ತು ವಸತಿ ಸಚಿವರಾದ ಜಮೀರ್ ಅಹಮದ್ ಅವರು ರಾಜಿನಾಮೆ ನೀಡಬೇಕೆಂದು ಒತ್ತಾಯಿಸಿ ಬಿಜೆಪಿ ಪಕ್ಷದಿಂದ ಆಗ್ರಹಿಸಲಾಯಿತು.

ನಗರದ ತಾಲೂಕು ಪಂಚಾಯಿತಿ ಕಛೇರಿಯನ್ನು ಮುಚ್ಚುವ ಮೂಲಕ ಪ್ರತಿಭಟನೆ ನಡೆಸಲಾಯಿತು. ಯುವ ಮೋರ್ಚಾದ ಜಿಲ್ಲಾಧ್ಯಕ್ಷ ಎಮ್.ಎಸ್.ಸಿದ್ದಪ್ಪ ಅವರು ಮಾತನಾಡಿ ಮನೆ ಹಂಚಿಕೆಯಲ್ಲಿ ಭ್ರಷ್ಟಾಚಾರ ನಡೆದಿರುವ ಬಗ್ಗೆ ಎಲ್ಲಾ ಪತ್ರಿಕೆ ಮಾದ್ಯಮಗಳಲ್ಲಿ ಬಹಿರಂಗಗೊಂಡಿದೆ.



ತಮ್ಮದೇ ಆಡಳಿತ ಪಕ್ಷದ ಶಾಸಕರು ಭ್ರಷ್ಟಾಚಾರದ ಬಗ್ಗೆ ನೇರ ಆರೋಪವನ್ನು ಮಾಡಿದ್ದಾರೆ. ಆದ್ದರಿಂದ ಈ ಕೂಡಲೇ ಸಚಿವರಾದ ಜಮೀರ್ ಅಹಮದ್ ಅವರು ರಾಜಿನಾಮೆ ನೀಡಬೇಕೆಂದು ಒತ್ತಾಯಿಸಿದರು.

ತಾಲೂಕಾಧ್ಯಕ್ಷ ಕುಂಟ್ನಾಳ್ ಮಲ್ಲಿಕಾರ್ಜುನ ಸ್ವಾಮಿ ಅವರು ಮಾತನಾಡಿ ಉಚಿತವಾಗಿ ದೊರೆಯಬೇಕಾಗಿರುವ ವಸತಿ ಸೌಲಭ್ಯದಲ್ಲೂ ವಸತಿ ಸಚಿವ ಜಮೀರ್ ಅಹಮದ್ ಅವರ ಆಪ್ತರಿಂದ ಒಂದೊಂದು ಮನೆಗೆ 30 ರಿಂದ 40 ಸಾವಿರ ರೂಪಾಯಿಗಳ ಲಂಚ ಪಡೆದು ಕಡು ಬಡವರಿಗೆ ವಂಚನೆ ಮಾಡಿದೆ. ಇದನ್ನು ವಿರೋಧಿಸಿ ರಾಜ್ಯಾದ್ಯಂತ ನಮ್ಮ ಪಕ್ಷದಿಂದ ಪ್ರತಿಭಟನೆಯನ್ನು ನಡೆಸಲಾಗುತ್ತಿದೆಂದರು.

ಮುಖಂಡರಾದ ಟಿ.ಧರಪ್ಪ ನಾಯಕ ಅವರು ಮಾತನಾಡಿ ಆಯಾ ಕ್ಷೇತ್ರಗಳ ಶಾಸಕರ ಮನವಿಗಳನ್ನು ಗಾಳಿ ತೂರಿ ಭ್ರಷ್ಟಾಚಾರವನ್ನು ನಡೆಸಿರುವ ಬಗ್ಗೆ ಕಾಂಗ್ರೇಸ್ ಪಕ್ಷದ ಬಿ.ಆರ್.ಪಾಟೀಲ್ ಅವರೇ ಆರೋಪ ಮಾಡಿದ್ದಾರೆ. ಆದ್ದರಿಂದ ಸಚಿವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕೆಂದು ಆಗ್ರಹಿಸಿದರು. ಇದೇ ವೇಳೆ ಬಿಜೆಪಿ ಪಕ್ಷದ ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಕಾರ್ಯಕರ್ತರು ಇದ್ದರು.

ವರದಿ: ಶ್ರೀನಿವಾಸ ನಾಯ್ಕ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ