Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕ್ರಿಕೆಟಿಗ ಕೆ.ಎಲ್. ರಾಹುಲ್ ದಂಪತಿಗಳ ಮನೆಗೆ ‘ಲಕ್ಷ್ಮೀ’  ಆಗಮನ

Advertisement
ಮುಂಬೈ: ಪತ್ನಿ ಅಥಿಯಾ ಶೆಟ್ಟಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಕ್ರಿಕೆಟಿಗ ಕೆ.ಎಲ್.ರಾಹುಲ್​ ತಂದೆಯಾದ ಹರುಷದಲ್ಲಿದ್ದಾರೆ.

ಸೋಮವಾರ ಸಂಜೆ ಈ ಬಗ್ಗೆ ಅಥಿಯಾ ಹಾಗೂ ಕೆ.ಎಲ್​.ರಾಹುಲ್​ ಇಬ್ಬರೂ ಇನ್​ಸ್ಟಾಗ್ರಾಂನಲ್ಲಿ ತಮ್ಮ ಮಗಳ ಆಗಮನದ ಬಗ್ಗೆ ಮುದ್ದಾದ ಪೋಸ್ಟ್​ವೊಂದನ್ನು ಹಂಚಿಕೊಂಡು, ಅಧಿಕೃತವಾಗಿ ಘೋಷಿಸಿದರು.

"ಹೆಣ್ಣು ಮಗುವಿನ ಆಗಮನ" ಎಂಬ ಕ್ಯಾಪ್ಷನ್​ನೊಂದಿಗೆ ಕೊಳದಲ್ಲಿ ಎರಡು ಹಂಸಗಳ ವರ್ಣಚಿತ್ರವಿರುವ ಪೋಸ್ಟರ್​ ಪೋಸ್ಟ್​ ಮಾಡಿದ್ದಾರೆ.

ಈ ಕಾರಣಕ್ಕಾಗಿ ನಿನ್ನೆ ನಡೆದ ಡೆಲ್ಲಿ ಕ್ಯಾಪಿಟಲ್ಸ್​ ಹಾಗೂ ಲಕ್ನೋ ಸೂಪರ್​ ಜೈಂಟ್ಸ್​ ತಂಡಗಳ ನಡುವಿನ ಐಪಿಎಲ್​ ಪಂದ್ಯಾಟದಿಂದ ಸ್ಟಾರ್​ ಬ್ಯಾಟರ್ ಕೆ.ಎಲ್.ರಾಹುಲ್​ ಹೊರಗುಳಿದು, ಮುಂಬೈಗೆ ತೆರಳಿದ್ದರು.

ಕೆ.ಎಲ್​.ರಾಹುಲ್​ ಹಾಗೂ ಅಥಿಯಾ ಈ ಶುಭ ಸುದ್ದಿಯನ್ನು ಹಂಚಿಕೊಂಡ ತಕ್ಷಣವೇ ಅಭಿಮಾನಿಗಳು, ಕ್ರಿಕೆಟ್​ ಹಾಗೂ ಚಲನಚಿತ್ರ ಕ್ಷೇತ್ರದ ತಾರೆಗಳು ಕಾಮೆಂಟ್​ಗಳ ಮೂಲಕ ಇಬ್ಬರಿಗೂ ಅಭಿನಂದನೆಗಳ ಮಳೆಯನ್ನೇ ಸುರಿಸಿದ್ದಾರೆ.

ನಟಿಯರಾದ ಅದಿತಿ ರಾವ್​ ಹೈದರಿ, ಭೂಮಿ ಪಡ್ನೇಕರ್​, ಮಾಜಿ ಕ್ರಿಕೆಟಿಗ ಶಿಖರ್​ ಧವನ್​ ಸೇರಿದಂತೆ ಹಲವರು ಸೋಶಿಯಲ್​ ಮೀಡಿಯಾದಲ್ಲಿ ಶುಭಾಶಯಗಳನ್ನು ತಿಳಿಸಿದ್ದಾರೆ.

2023ರ ಜನವರಿ 23ರಂದು ಖಂಡಾಲಾದಲ್ಲಿರುವ ಸುನೀಲ್ ಶೆಟ್ಟಿ ಅವರ ತೋಟದ ಮನೆಯಲ್ಲಿ ಅಥಿಯಾ ಶೆಟ್ಟಿ ಮತ್ತು ಕೆ.ಎಲ್.ರಾಹುಲ್ ವಿವಾಹವಾಗಿದ್ದರು. 2024ರ ನವೆಂಬರ್​ನಲ್ಲಿ ಇಬ್ಬರೂ ಮೊದಲ ಮಗುವಿನ ನಿರೀಕ್ಷೆಯಲ್ಲಿರುವುದಾಗಿ ಹೇಳಿ ಮುದ್ದಾದ ಮಗುವಿನ ಪಾದಗಳ ಚಿತ್ರವನ್ನು ಸೋಶಿಯಲ್​ ಮೀಡಿಯಾ ಪೋಸ್ಟ್​ ಮಾಡಿ ಘೋಷಿಸಿದ್ದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ