ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಹೃದಯಾಘಾತಕ್ಕೆ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಕ್ರಿಕೆಟಿಗ ಎಸ್.ಎಲ್.ಅಕ್ಷಯ್ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಬೊಮ್ಮಸಂದ್ರದಲ್ಲಿ ಎಸ್ ಎಲ್ ಎಸ್ ಮೈದಾನದಲ್ಲಿ ಕೆ.ಎಸ್.ಸಿ.ಎ ಲೀಗ್ ಪಂದ್ಯಾವಳಿ ನಡೆಯುತ್ತಿತ್ತು.
ಕೆ.ಎಸ್.ಸಿ.ಎ ನಸೂರ್ ಸ್ಮಾರಕ ಶೀಲ್ಡ್ ನ ಏಕದಿನ ಲೀಗ್ ಪಂದ್ಯಾಟದ ವೇಳೆ ಅಕ್ಷಯ್ 4 ಓವರ್ ಬೌಲಿಂಗ್ ಮಾಡಿ ಆರೋಗ್ಯ ಸಮಸ್ಯೆ ಎಂದು ಅರ್ಧಕ್ಕೆ ಪಂದ್ಯದಿಂದ ಹೊರಬಂದಿದ್ದರು.
ಹೋಗೆ ಹೊರಬಂದವರು ನೀರು ಕುಡಿಯುತ್ತಿದ್ದಾಗ ಇದ್ದಕ್ಕಿಂದಂತೆ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಮಾರ್ಗಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ.
ಶಿವಮೊಗ್ಗ ಮೂಲದ ಅಕ್ಷಯ್ ಅವರಿಗೆ ಕೇವಲ 36 ವರ್ಷ ವಯಸ್ಸಾಗಿತ್ತು. ಸಣ್ಣ ವಯಸ್ಸಿನಲ್ಲಿಯೇ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ

