Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿಎಂ ಆಗಿ ಒಂದು ತಿಂಗಳು ಪೂರೈಸಿದ ಡಿ.ಕೆಶಿ : ಸಿದ್ದರಾಮಯ್ಯ ನಿವಾಸಕ್ಕೆ ಭೇಟಿ ನೀಡಿದ ಕುಟುಂಬ 

Advertisement

ಬೆಂಗಳೂರು : ಮುಖ್ಯಮಂತ್ರಿಯಾಗಿ ಯಶಸ್ವಿಯಾಗಿ ಒಂದು ತಿಂಗಳು ಪೂರ್ಣಗೊಳಿಸಿದ ಡಿ.ಕೆ. ಶಿವಕುಮಾರ್ ಅವರು ಮಾಜಿ ಸಿಎಂ ಸಿದ್ದರಾಮಯ್ಯ ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆ. 

ಪತ್ನಿ ಉಷಾ ಡಿ.ಕೆ. ಶಿವಕುಮಾರ್ ಹಾಗೂ ಸಹೋದರ ಡಿ.ಕೆ. ಸುರೇಶ್ ಅವರೊಂದಿಗೆ ಸಿದ್ದರಾಮಯ್ಯ ಅವರ ಮನೆಗೆ ತೆರಳಿದ ಸಿಎಂ, ಆತ್ಮೀಯ ಸಮಾಲೋಚನೆ ನಡೆಸಿದರು.

ಭೇಟಿಯ ವೇಳೆ ಸಿದ್ದರಾಮಯ್ಯ ಅವರಿಗೆ ಪುಷ್ಪಗುಚ್ಛ ನೀಡಿ ಗೌರವಿಸಿದ ಮುಖ್ಯಮಂತ್ರಿಗಳು, ಬಳಿಕ ಅವರೊಂದಿಗೆ ಉಪಾಹಾರ ಸೇವಿಸುತ್ತಾ ಸುದೀರ್ಘ ಚರ್ಚೆಯಲ್ಲಿ ತೊಡಗಿಕೊಂಡರು. 

ಕಳೆದ ಒಂದು ತಿಂಗಳ ಅವಧಿಯಲ್ಲಿ ಸರ್ಕಾರ ಕೈಗೊಂಡ ಪ್ರಮುಖ ಜನಪರ ನಿರ್ಧಾರಗಳು, ಪ್ರಗತಿಯಲ್ಲಿರುವ ಅಭಿವೃದ್ಧಿ ಯೋಜನೆಗಳು ಹಾಗೂ ಮುಂದಿನ ಆಡಳಿತಾತ್ಮಕ ಸುಧಾರಣೆಗಳ ಕುರಿತು ಉಭಯ ನಾಯಕರು ಅನೌಪಚಾರಿಕವಾಗಿ ಚರ್ಚಿಸಿದ್ದಾರೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ಸಿಎಂ ಕುಟುಂಬಸ್ಥರು ಕೂಡ ಮಾಜಿ ಮುಖ್ಯಮಂತ್ರಿಗಳಿಗೆ ಆತ್ಮೀಯವಾಗಿ ಶುಭ ಹಾರೈಸಿದರು.

ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಡಿ.ಕೆ. ಶಿವಕುಮಾರ್, ಕರ್ನಾಟಕದ ಮುಖ್ಯಮಂತ್ರಿಯಾಗಿ ಒಂದು ತಿಂಗಳ ಸೇವೆಯನ್ನು ಪೂರ್ಣಗೊಳಿಸಿದ ಅಂಗವಾಗಿ ಇಂದು ಕುಟುಂಬದೊಂದಿಗೆ ಸಿದ್ದರಾಮಯ್ಯ ಅವರನ್ನು, ಅವರ ಅಧಿಕೃತ ನಿವಾಸ ಕಾವೇರಿಯಲ್ಲಿ ಭೇಟಿ ಮಾಡಿ ಆಶೀರ್ವಾದವನ್ನು ಪಡೆದುಕೊಳ್ಳಲಾಯಿತು.

 ಸಿದ್ದರಾಮಯ್ಯನವರ ದೂರದೃಷ್ಟಿಯ ನಾಯಕತ್ವ, ಅಪಾರ ಆಡಳಿತ ಅನುಭವ ಹಾಗೂ ನಾಡಿನ ಜನರ ಅಭಿವೃದ್ಧಿಯತ್ತ ಅವರ ಅಚಲ ಬದ್ಧತೆ ನಮ್ಮ ರಾಜ್ಯದ ಪ್ರಗತಿಯ ಪಯಣಕ್ಕೆ ಸದಾ ಬಲ ತುಂಬಲಿದೆ.

ರಾಜ್ಯದ ಸಮಗ್ರ ಅಭಿವೃದ್ಧಿ, ಜನಕಲ್ಯಾಣ ಮತ್ತು ಸುಭದ್ರ ಭವಿಷ್ಯ ನಿರ್ಮಾಣಕ್ಕೆ ಸಿದ್ದರಾಮಯ್ಯನವರ ಮಾರ್ಗದರ್ಶನ ಮತ್ತು ಆಶೀರ್ವಾದವು ಸದಾ ಪ್ರೇರಣೆಯಾಗಿದೆ.

ಸಿದ್ದರಾಮಯ್ಯನವರ ಆಶೀರ್ವಾದ ಮತ್ತು ನಿರಂತರ ಮಾರ್ಗದರ್ಶನಕ್ಕೆ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಆಗಿ ಒಂದು ತಿಂಗಳು ಪೂರೈಸಿದ ಡಿ.ಕೆಶಿ : ಸಿದ್ದರಾಮಯ್ಯ ನಿವಾಸಕ್ಕೆ ಭೇಟಿ ನೀಡಿದ ಕುಟುಂಬ ಅಂಜನಾದ್ರಿಗೆ ಭೇಟಿ ನೀಡಿ ದೇವರ ದರ್ಶನ ಪಡೆದ ರಾಹುಲ್ ದ್ರಾವಿಡ್ ಗರ್ಭಿಣಿಯಾಗಿದ್ದರೂ ಜಿಮ್ ನಲ್ಲಿ ನಟಿ ಸಮಂತಾ ವರ್ಕ್ ಔಟ್ : ವಿಡಿಯೋ ವೈರಲ್ ಸಂಪುಟ ವಿಸ್ತರಣೆ : ಜು. 5ಕ್ಕೆ ಡಿ. ಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ದೆಹಲಿಗೆ ಮಲಗಿದ್ದಾಗ ಗಂಡನ ಖಾಸಗಿ ಭಾಗ ಕತ್ತರಿಸಿದ ಹೆಂಡತಿ : ವಿಡಿಯೋ ವೈರಲ್ಈ ಭಾಗದ ವಿದ್ಯಾರ್ಥಿಗಳಿಗೆ ಶೋ ಬದಲಿ ಚಪ್ಪಲಿ ವಿತರಣೆ 1,800 ಕಿ.ಮೀ ಸೈಕಲ್ ಸವಾರಿ ಮಾಡಿ ಬೆಂಗಳೂರಿಗೆ ಬಂದ ಹಾರ್ದಿಕ್ ಪಾಂಡ್ಯ ಅಭಿಮಾನಿ ಈ ಬಾರಿ ಆಗಸ್ಟ್ ನಲ್ಲಿ ವಿಧಾನ ಮಂಡಲದ ಮುಂಗಾರು ಅಧಿವೇಶನಇರಾಕ್‌ನ ಸಂಸದೆ ಮನೆ ಮೇಲೆ ದಾಳಿ : 27ಕೆಜಿ ಚಿನ್ನ, ಬಂಗಾರದ ಒಳ ಉಡುಪು, 927 ಕೋಟಿ ರೂ. ವಶಕ್ಕೆ ತಿಂಗಳಿಗೆ 2 ದಿನ ಮಂತ್ರಿಗಳು ಜನರ ಬಳಿ ಹೋಗುವುದು ಕಡ್ಡಾಯ : ಡಿ. ಕೆ ಶಿವಕುಮಾರ್