Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆಸ್ತಿಗಾಗಿ ಹೆಣ್ಣು ಮಕ್ಕಳು ಕಲಹ : 4 ಕೋಟಿ ರೂ. ಆಸ್ತಿ ದೇವಸ್ಥಾನಕ್ಕೆ ದಾನ

Advertisement
ತಮಿಳುನಾಡು : ಈಗಿನ ಕಾಲದಲ್ಲಿ ಜನರಿಗೆ ಆಸ್ತಿ, ಹಣ, ಐಶ್ವರ್ಯ ಜನರಿಗೆ ಇದ್ದಷ್ಟೂ ಸಾಕಾಗಲ್ಲ. ಅಂತಹದ್ರಲ್ಲಿ ಇಲ್ಲೊಬ್ಬರು ತನ್ನ ಬಳಿ ಇದ್ದ ಬರೋಬ್ಬರಿ 4 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಹಿಂದೆ ಮುಂದೆ ನೋಡದೆ ದೇಗುಲಕ್ಕೆ ದಾನ ಮಾಡಿರುವ ಘಟನೆ ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯ ರೇಣುಗುಂಬಲ ಅಮ್ಮನ ದೇವಾಲಯದಲ್ಲಿ ನಡೆದಿದೆ.

ನಿವೃತ ಸೇನಾಧಿಕಾರಿಯಾಗಿರುವ ಅರಣಿ ಸಿಟಿಯ ಕೇಶವಪುರಂ ಗ್ರಾಮದ ವಿಜಯನ್ ಬಾಲ್ಯದಿಂದಲೂ ರೇಣುಗುಂಬಲ ಅಮ್ಮನನವರ ಭಕ್ತ.. ನಿವೃತ ಸೇನಾಧಿಕಾರಿಯಾಗಿದ್ದ ಇವರು ಕಳೆದ 10 ವರ್ಷದ ಹಿಂದೆ ಕಾರಣಾಂತರಗಳಿಂದ ಪತ್ನಿಯಿಂದ ದೂರವಿದ್ದರು.

ಪತ್ನಿಯಿಂದ ದೂರವಾದ ಜೊತೆಗೆಯೇ ಕುಟುಂಬದಿಂದ ಯಾವುದೇ ಸಹಾಯ, ಬೆಂಬಲ ಸಿಗುತ್ತಿರಲಿಲ್ಲ.. ಇನ್ನೊಂದೆಡೆ ಅಮ್ಮನ ಜೊತೆ ಇದ್ದ ಇಬ್ಬರು ಮಕ್ಕಳು ದಿನನಿತ್ಯ ನಮಗೆ ಆಸ್ತಿ ಬೇಕು ಪಾಲು ಮಾಡಿ ಎಂದು ಗಲಾಟೆ ಮಾಡುತ್ತಲೇ ಇದ್ದರು. ಇವೆಲ್ಲವನ್ನೂ ಹತ್ತಿರದಿಂದ ನೋಡಿದ ವಿಜಯನ್ ಬಹಳ ಬೇಸರಗೊಂಡಿದ್ದರು.

ಅಷ್ಟೇ ಅಲ್ಲದೆ ಮಕ್ಕಳ ಈ ವರ್ತನೆ, ಅವರಿಂದ ಆಗುತ್ತಿರುವ ಅಪಮಾನದಿಂದ ಬೇಸತ್ತ ವಿಜಯನ್ ತಮ್ಮ ಆಸ್ತಿಗೆ ಸಂಬಂಧಿಸಿದ ನಾಲ್ಕು ಪುಟದ ದಾಖಲೆಗಳನ್ನು ಹುಂಡಿಗೆ ಹಾಕಿದ್ದಾರೆ. ವರದಿಯ ಪ್ರಕಾರ, ವಿಜಯನ್ ಅವರು ಹಾಕಿದ ಆಸ್ತಿಯಲ್ಲಿ ಒಂದು ಆಸ್ತಿ ಮೂರು ಕೋಟಿ ಮೌಲ್ಯದ್ದಾಗಿದ್ದು, ಮತ್ತೊಂದು ಆಸ್ತಿ 1 ಕೋಟಿ ಮೌಲ್ಯದ್ದಾಗಿದೆ.

ಇನ್ನು ಜೂನ್ 24 ರಂದು ಅರಲುಮಿಗು ರೇಣುಗುಂಬಲ ಅಮ್ಮಾನ್ ದೇವಾಲಯದ ಹುಂಡಿ ಎಣಿಕೆ ಮಾಡುವ ವೇಳೆ ಆಸ್ತಿ ಪತ್ರ ಪತ್ತೆಯಾಗಿದೆ. ಇದನ್ನು ಪರಿಶೀಲಿಸಿದಾಗ ಒರಿಜಿನಲ್ ಎಂದು ಗೊತ್ತಾಗಿದೆ. ಕೂಡಲೇ ವಿಜಯನ್ ಅವರನ್ನು ಸಂಪರ್ಕಿಸಿ ಮಾತಾಡಿದ್ದಾರೆ.

ಅದಕ್ಕೆ ವಿಜಯನ್.. ನನ್ನ ಆಸ್ತಿ ಸಂಪೂರ್ಣವಾಗಿ ದೇವಾಲಯಕ್ಕೆ ಅರ್ಪಿಸಿದ್ದೇನೆ. ನನ್ನ ಮಕ್ಕಳು ನನ್ನನ್ನು ಸರಿಯಾಗಿ ನೋಡಿಕೊಳ್ಳುತ್ತಿಲ್ಲ, ಅಲ್ಲದೇ ನನಗೆ ಒಂದು ರೂಪಾಯಿ ಕೂಡ ಕೊಡದೆ ಸತಾಯಿಸುತ್ತಿದ್ದಾರೆ. ಹಣ ಬೇಕು ಅಂದ್ರೆ ಆಸ್ತಿ ಮಾರು ಎಂದು ಬೆದರಿಕೆ ಹಾಕುತ್ತಿದ್ದಾರೆ.

ಮಕ್ಕಳ ಈ ವರ್ತನೆಯಿಂದ ಬಹಳ ನೋವು ಉಂಟಾಗಿ ಕಡೆ ಕ್ಷಣದಲ್ಲೂ ನಮ್ಮನ್ನು ಸರಿಯಾಗಿ ನೋಡಿಕೊಳ್ಳದ ಅವರಿಗೆ ಆಸ್ತಿ ಸಿಗಬಾರದು ಎಂದು ಯೋಚಿಸಿ ಕಾನೂನು ಬದ್ಧವಾಗಿ ಆಸ್ತಿಯನ್ನು ದೇವರಿಗೆ ಕೊಡುತ್ತೇನೆ ಎಂದು ವಿಜಯನ್ ತಿಳಿಸಿದ್ದಾರೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ