ಡಾ.ಬಾಬಾಸಾಹೇಬ ಅಂಬೇಡ್ಕರ್ ದಲಿತ ಹಿತರಕ್ಷಣಾ ವೇದಿಕೆಯ ಅಧ್ಯಕ್ಷ ಶರಣಪ್ಪ ಆಮದಿಹಾಳ ಅವರ ನೇತೃತ್ವದಲ್ಲಿ, ಎಲ್ಲಾ ಸದಸ್ಯರು ಮುಷ್ಕರ ಸ್ಥಳಕ್ಕೆ ಭೇಟಿ ನೀಡಿ ಪೌರಕಾರ್ಮಿಕರಿಗೆ ಸಂಪೂರ್ಣ ಬೆಂಬಲ ನೀಡಿದರು.

ಈ ಸಂದರ್ಭ ಮಾತನಾಡಿದ ಶರಣಪ್ಪ ಆಮದಿಹಾಳ ಅವರು, “ಪೌರಕಾರ್ಮಿಕರ ಬೇಡಿಕೆಗಳು ನ್ಯಾಯಸಮ್ಮತವಾಗಿವೆ. ಅವರು ಹಲವು ಬಾರಿ ಸರ್ಕಾರದ ಗಮನ ಸೆಳೆದಿದ್ದಾರೆ. ಅವರು ಹೋರಾಟದಿಂದ ಹಿಂದೆ ಸರಿಯಬಾರದು. ನಾವು ಸಂಪೂರ್ಣ ಬೆಂಬಲಿಸುತ್ತೇವೆ,” ಎಂದು ತಿಳಿಸಿದರು.
ಈ ವೇಳೆ ವೇದಿಕೆಯ ಉಪಾಧ್ಯಕ್ಷ ಯುವರಾಜ ಚಲವಾದಿ, ನಗರಸಭೆಯ ಸದಸ್ಯ ಸುರೇಶ್ ಜಂಗ್ಲಿ, ಗೈಬು ಛಲವಾದಿ, ಶ್ರೀಧರ್ ಕ್ಯಾತನ್, ದಿಲೀಪ್ ಕಲ್ಮನಿ, ಸಂಗಣ್ಣ ಜಂಗ್ಲಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

