Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದಲಿತರಿಗೆ ಮುಸ್ಲಿಮರಿಗೆ ಒಕ್ಕಲಿಗರಿಗೆ ಲಿಂಗಾಯತರಿಗೆ ಸಿಎಂ ಆಗುವ ಆಸೆ ಇದೆ : ಜಮೀರ್ ಅಹ್ಮದ್ ಖಾನ್ 

Advertisement
ದಾವಣಗೆರೆ : ಸಿಎಂ ಸ್ಥಾನದ ಕುರಿತಾಗಿ ಇದೀಗ ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಯಾಗುತ್ತಿದ್ದು, ಇತ್ತೀಚಿಗೆ ಪಿಡಬ್ಲ್ಯೂಡಿ ಸಚಿವ ಸತೀಶ್ ಜಾರಕಿಹೊಳಿ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದು ತೀವ್ರ ಕುತೂಹಲ ಕೆರಳಿಸಿತ್ತು.

ಬಳಿಕ ಇಂದು ಸಚಿವ ಜಮೀರ್ ಅಹ್ಮದ್ ಖಾನ್ ದಲಿತರಿಗೆ ಮುಸ್ಲಿಮರಿಗೆ ಒಕ್ಕಲಿಗರಿಗೆ ಲಿಂಗಾಯತರಿಗೆ ಎಲ್ಲರಿಗೂ ಸಿಎಂ ಆಗುವ ಆಸೆ ಇದೆ ಎಂದು ಹೇಳಿದರು.


ದಾವಣಗೆರೆಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ದಲಿತರು, ಮುಸ್ಲಿಂ, ಒಕ್ಕಲಿಗರು ಸೇರಿ ಎಲ್ಲರಿಗೂ ಸಿಎಂ ಆಗುವ ಆಸೆ ಇದೆ. ಆದರೆ ಮುಂದಿನ 5 ವರ್ಷದ ಅವಧಿಯಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ. ಸಿಎಂ ಹುದ್ದೆಯಿಂದ ಟಗರನ್ನು ಅಲ್ಲಾಡಿಸಲು ಯಾರಿಂದಲೂ ಸಾಧ್ಯವೇ ಇಲ್ಲ ಎಂದು ಸಚಿವ ಜಮೀರ್ ಅಹ್ಮದ್ ಹೇಳಿಕೆ ನೀಡಿದರು.


ಸಿಎಂ ಕುರ್ಚಿಯಲ್ಲಿ ಟಗರು ಗಟ್ಟಿಯಾಗಿ ಕುಳಿತದೆ. ಸಿಎಂ ಕುರ್ಚಿಯಲ್ಲಿರುವ ಟಗರನ್ನು ಯಾರಿಂದಲೂ ಸಾಧ್ಯವಿಲ್ಲ ಎಂದು ದಾವಣಗೆರೆಯಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿಕೆ ನೀಡಿದರು.


ದೇಶದಲ್ಲಿ ಸಿದ್ದರಾಮಯ್ಯ ಅವರಷ್ಟು ಜನಪ್ರಿಯ ವ್ಯಕ್ತಿ ಯಾರು ಇಲ್ಲ. ರಾಜ್ಯದಲ್ಲೇ ಪ್ರಧಾನಿ ಮೋದಿಗಿಂತಲೂ ಸಿಎಂ ಸಿದ್ದರಾಮಯ್ಯ ಪ್ರಸಿದ್ಧರಾಗಿದ್ದಾರೆ. ಬೇಕಾದರೆ ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಪ್ರಧಾನಿ ಮೋದಿ ಕಾರ್ಯಕ್ರಮ ನಡೆಸಿ. ಸಿದ್ದರಾಮಯ್ಯ ಕಾರ್ಯಕ್ರಮಕ್ಕೆ ಜನರು ಹೆಚ್ಚು ಸೇರುತ್ತಾರೆ. ಸಿದ್ದರಾಮಯ್ಯ ಸಲುವಾಗಿ ಸ್ವಯಂ ಪ್ರೇರಿತವಾಗಿ ರಣ ಸೇರುತ್ತಾರೆ ನಮ್ಮ ಟಗರು ಟಗರೆ ಎಂದು ಜಮೀರ್ ಅಹ್ಮದ್ ತಿಳಿಸಿದರು.


ರಾಹುಲ್ ಗಾಂಧಿಯವರು ಜಾತಿಗಣಿತಿ ಬಗ್ಗೆ ಹೇಳಿಕೆ ನೀಡಿದ್ದಾರೆ. ಸೋನಿಯಾ ಗಾಂಧಿ ಮಲ್ಲಿಕಾರ್ಜುನ್ ಖರ್ಗೆ ಅವರು ಹೇಳಿದ್ದಾರೆ ಅಂದರೆ ಮುಗಿಯಿತು. ಎಲ್ಲ ಬಾಯಿ ಮುಚ್ಚಿಕೊಂಡು ಇರಬೇಕು.


ಜಾತಿಗಣತಿ ಬಗ್ಗೆ ಸಿಎಂ ಸಿದ್ದರಾಮಯ್ಯ ಈಗಲ್ಲ ಹಲವಾರು ವರ್ಷಗಳಿಂದ ಮಾತನಾಡುತ್ತಲೇ ಬಂದಿದ್ದಾರೆ. ಜಾತಿಗಣತಿಯ ಬಗ್ಗೆ ವರದಿ ಜಾರಿಗೆ ಬಗ್ಗೆ ರಾಹುಲ್ ಅವರೇ ಹೇಳಿದ್ದಾರೆ ಅದೇ ಅಂತಿಮ ಎಂದರು.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ