Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

BELGAVI : ಪ್ರಿಯಕರನೊಡನೆ ಓಡಿ ಹೋದ ಮಗಳು: ಇಡೀ ಊರಿಗೇ ತಿಥಿ ಊಟ ಹಾಕಿಸಿದ ತಂದೆ

Advertisement

ಬೆಳಗಾವಿ : ಪ್ರಿಯಕರನೊಡನೆ ಮಗಳು ಓಡಿಹೋದಳೆಂದ ಕೋಪಕ್ಕೆ ಆಕೆಯ ತಿಥಿಯನ್ನು ಆಚರಿಸಿದ ತಂದೆ ಇಡೀ ಊರಿಗೇ ಊಟ ಹಾಕಿಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ನಾಗರಾಳ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸಾಕಷ್ಟು ಚರ್ಚೆ ಕಾರಣವಾಗಿದೆ.


ನಾಗರಾಳ ಗ್ರಾಮದ ಶಿವಗೌಡ ಪಾಟೀಲ್‌ ಎಂಬುವವರಿಗೆ ನಾಲ್ಕು ಮಂದಿ ಹೆಣ್ಣು ಮಕ್ಕಳಿದ್ದು, ಅವರ ಪೈಕಿ ಸುಶ್ಮಿತಾ ಶಿವಗೌಡ ಪಾಟೀಲ್‌ (19) ಕೊನೆಯವಳಾಗಿದ್ದಳು.

ಅದೇ ಗ್ರಾಮದಲ್ಲಿ ತಹಶೀಲ್ದಾರ್‌ ಕಚೇರಿಯಲ್ಲಿ ಗ್ರಾಮ ಸೇವಕನಾಗಿ ಕಾರ್ಯ ನಿರ್ವಹಿಸುತ್ತಿದ್ದ ವಿಠಲ ಬಸ್ತವಾಡ ಎಂಬ 29 ವರ್ಷದ ಯುವಕನೊಂದಿಗೆ ಸುಶ್ಮಿತಾಗೆ ಪ್ರೇಮ ಅಂಕುರಿಸಿತ್ತು.

ಹೀಗಾಗಿ ಆತನೊಂದಿಗೆ ಮದುವೆಯಾಗಿ ಮನೆಯವರಿಗೆ ಟಾಟಾ ಹೇಳಿದ್ದಳು. ಮಗಳ ಪ್ರೇಮದ ಬಗ್ಗೆ ಗೊತ್ತಿಲ್ಲದೇ ಮೊದಲು ಶಿವಗೌಡ ಅವರು ರಾಯಭಾಗ ಪೊಲೀಸ್‌ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು.

ಬಳಿಕ ಮಗಳ ಪ್ರೇಮದ ವಿಷಯ ಗೊತ್ತಾಗಿತ್ತು. ಇದರಿಂದ ಕಿಡಿಕಿಡಿಯಾದ ಶಿವಗೌಡ ತನ್ನ ಮಗಳು ಇನ್ನು ತಮ್ಮ ಪಾಲಿಗೆ ಸತ್ತಳೆಂದು ಘೋಷಿಸಿ ಶಾಸ್ತ್ರೋಕ್ತವಾಗಿ ಆಕೆಯ ತಿಥಿ ಆಚರಿಸಿದ್ದಲ್ಲದೇ, ಬಂಧುಬಳಗದೊಂದಿಗೆ ಊರಿನವರನ್ನೆಲ್ಲಾ ಕರೆದು ಊಟ ಹಾಕಿಸಿ ತಿಥಿಕಾರ್ಯ ಆಚರಣೆ ಮಾಡಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿರುವ ಶಿವಗೌಡ, ಸಂಸ್ಕಾರ ಬಿಟ್ಟು ನನ್ನ ಮಗಳು ಈ ರೀತಿ ಮಾಡಿದ್ದಾಳೆ. ನನ್ನ ಮನಸು ನೋಯಿಸಿದ್ದಾಳೆ. ಇನ್ನು ನಮ್ಮ ಪಾಲಿಗೆ ,ನಮ್ಮ ಮನೆಯವರ ಪಾಲಿಗೆ ಆಕೆ ತೀರಿಕೊಂಡಿದ್ದಾಳೆಂದು ಈ ರೀತಿ ಮಾಡಿದ್ದೇನೆ ಎಂದಿದ್ದಾರೆ.

ನನ್ನ ಮಗಳಿಗೆ ಕೇವಲ 19 ವರ್ಷ. ಎಲ್ಲರೂ ಹೆಣ್ಣು ಮಕ್ಕಳೇ ಆಗಿದ್ದು, ನನಗೆ ಗಂಡು ಮಕ್ಕಳಿಲ್ಲ. ವಯಸಾಗಿರುವ ಕಾಲದಲ್ಲಿ ಈ ರೀತಿ ಮಾಡುವುದು ಸರಿಯಲ್ಲ. ಯಾವುದೇ ಹೆಣ್ಣು ಮಕ್ಕಳಾಗಲೀ ಸಂಸ್ಕಾರ ಬಿಡಬೇಡಿ. ನಿಮ್ಮ ತಂದೆ ತಾಯಿ ಮನಸು ನೋಯಿಸಬೇಡಿ ಎಂದು ಶಿವನಗೌಡ ಅಲವತ್ತುಕೊಂಡಿದ್ದಾ ರೆ.ನಾಗರಾಳ ಗ್ರಾಮದ ಶಿವಗೌಡ ಪಾಟೀಲ್‌ ಎಂಬುವವರಿಗೆ ನಾಲ್ಕು ಮಂದಿ ಹೆಣ್ಣು ಮಕ್ಕಳಿದ್ದು, ಅವರ ಪೈಕಿ ಸುಶ್ಮಿತಾ ಶಿವಗೌಡ ಪಾಟೀಲ್‌ (19) ಕೊನೆಯವಳಾಗಿದ್ದಳು.

ಅದೇ ಗ್ರಾಮದಲ್ಲಿ ತಹಶೀಲ್ದಾರ್‌ ಕಚೇರಿಯಲ್ಲಿ ಗ್ರಾಮ ಸೇವಕನಾಗಿ ಕಾರ್ಯ ನಿರ್ವಹಿಸುತ್ತಿದ್ದ ವಿಠಲ ಬಸ್ತವಾಡ ಎಂಬ 29 ವರ್ಷದ ಯುವಕನೊಂದಿಗೆ ಸುಶ್ಮಿತಾಗೆ ಪ್ರೇಮ ಅಂಕುರಿಸಿತ್ತು.

ಹೀಗಾಗಿ ಆತನೊಂದಿಗೆ ಮದುವೆಯಾಗಿ ಮನೆಯವರಿಗೆ ಟಾಟಾ ಹೇಳಿದ್ದಳು. ಮಗಳ ಪ್ರೇಮದ ಬಗ್ಗೆ ಗೊತ್ತಿಲ್ಲದೇ ಮೊದಲು ಶಿವಗೌಡ ಅವರು ರಾಯಭಾಗ ಪೊಲೀಸ್‌ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು. ಬಳಿಕ ಮಗಳ ಪ್ರೇಮದ ವಿಷಯ ಗೊತ್ತಾಗಿತ್ತು.

ಇದರಿಂದ ಕಿಡಿಕಿಡಿಯಾದ ಶಿವಗೌಡ ತನ್ನ ಮಗಳು ಇನ್ನು ತಮ್ಮ ಪಾಲಿಗೆ ಸತ್ತಳೆಂದು ಘೋಷಿಸಿ ಶಾಸ್ತ್ರೋಕ್ತವಾಗಿ ಆಕೆಯ ತಿಥಿ ಆಚರಿಸಿದ್ದಲ್ಲದೇ, ಬಂಧುಬಳಗದೊಂದಿಗೆ ಊರಿನವರನ್ನೆಲ್ಲಾ ಕರೆದು ಊಟ ಹಾಕಿಸಿ ತಿಥಿಕಾರ್ಯ ಆಚರಣೆ ಮಾಡಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿರುವ ಶಿವಗೌಡ, ಸಂಸ್ಕಾರ ಬಿಟ್ಟು ನನ್ನ ಮಗಳು ಈ ರೀತಿ ಮಾಡಿದ್ದಾಳೆ. ನನ್ನ ಮನಸು ನೋಯಿಸಿದ್ದಾಳೆ. ಇನ್ನು ನಮ್ಮ ಪಾಲಿಗೆ ,ನಮ್ಮ ಮನೆಯವರ ಪಾಲಿಗೆ ಆಕೆ ತೀರಿಕೊಂಡಿದ್ದಾಳೆಂದು ಈ ರೀತಿ ಮಾಡಿದ್ದೇನೆ ಎಂದಿದ್ದಾರೆ.

ನನ್ನ ಮಗಳಿಗೆ ಕೇವಲ 19 ವರ್ಷ. ಎಲ್ಲರೂ ಹೆಣ್ಣು ಮಕ್ಕಳೇ ಆಗಿದ್ದು, ನನಗೆ ಗಂಡು ಮಕ್ಕಳಿಲ್ಲ. ವಯಸಾಗಿರುವ ಕಾಲದಲ್ಲಿ ಈ ರೀತಿ ಮಾಡುವುದು ಸರಿಯಲ್ಲ. ಯಾವುದೇ ಹೆಣ್ಣು ಮಕ್ಕಳಾಗಲೀ ಸಂಸ್ಕಾರ ಬಿಡಬೇಡಿ. ನಿಮ್ಮ ತಂದೆ ತಾಯಿ ಮನಸು ನೋಯಿಸಬೇಡಿ ಎಂದು ಶಿವನಗೌಡ ಅಲವತ್ತುಕೊಂಡಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ