Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನ್ಯಾಷನಲ್ ಹೆರಾಲ್ಡ್,ಯಂಗ್ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಕಿರುಕುಳ : ಡಿಸಿಎಂ ಆಕ್ರೋಶ 

Advertisement
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಹಾಗೂ ಯಂಗ್ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್ ನೀಡಿದೆ. ಆ ಮೂಲಕ ನಮಗೆ ಕಿರುಕುಳ ನೀಡಲಾಗುತ್ತಿದೆ. ಇದನ್ನು ನಾನು ಖಂಡಿಸುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಇಡಿ ಸಮನ್ಸ್ ವಿಚಾರವಾಗಿ ನಾವು ಮೊದಲಿನಿಂದಲೂ ತನಿಖೆಗೆ ಸಹಕರಿಸುತ್ತಲೇ ಬಂದಿದ್ದೇವೆ.

ಇಲ್ಲಿ ಯಾವುದೇ ಮುಚ್ಚುಮರೆಯಿಲ್ಲ. ಇಷ್ಟೆಲ್ಲಾ ಆದರೂ ಇಡಿ ಚಾರ್ಜ್ ಶೀಟ್ ಹಾಕಿರೋದು ಏಕೆ ಎಂಬುದೇ ಗೊತ್ತಿಲ್ಲ. ಇದರಲ್ಲಿ ಪೊಲೀಸರು ಪ್ರಕರಣ ದಾಖಲಿಸುವ ಅಗತ್ಯ ಇರಲಿಲ್ಲ. ನಾವು ಕಾನೂನಾತ್ಮಕವಾಗಿ ನ್ಯಾಯಲಯದಲ್ಲಿ ಹೋರಾಟ ಮಾಡುತ್ತೇವೆ ಎಂದರು.

ನನಗೆ ಹಾಗೂ ನನ್ನ ತಮ್ಮ ಡಿ.ಕೆ.ಸುರೇಶ್ ಗೆ ಇಡಿ ಸಮನ್ಸ್ ನೀಡಿದೆ. ಈಗಾಗಲೇ ನಾವು ಇದಕ್ಕೆ ಹಿಂದೆಯೇ ಉತ್ತರ ಕೊಟ್ಟಿದ್ದೆವು. ಆದರೂ ನಮಗೆ ಸಮನ್ಸ್ ನೀಡಿರುವುದು ಆಘಾತಕಾರಿ. ದೆಹಲಿ ಪೊಲೀಸರು ಡಿಸೆಂಬರ್ 19ರೊಳಗೆ ಮಾಹಿತಿ ನೀಡಬೇಕು ಎಂದು ತಿಳಿಸಿದ್ದಾರೆ ಎಂದರು.

ನಾವು ತೆರಿಗೆ ಪಾವತಿ ಮಾಡುತ್ತಿದ್ದೇವೆ. ನಮ್ಮ ಹಣವನ್ನು ನಮಗೆ ಬೇಕಾದವರಿಗೆ ನೀಡುತ್ತೇವೆ. ಕಿರುಕುಳ ನೀಡಲು ಪಿಎಂಎಲ್ ಎ ಪ್ರಕರಣ ಕೂಡ ದಾಖಲಿಸಿದ್ದರು. ಆನಂತರ ಏನಾಯಿತು? ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಬೆಂಬಲಿಗರಿಗೆ ಕಿರುಕುಳ ನೀಡುವುದು, ಜತೆಗೆ ಗೊಂದಲ ಮೂಡಿಸುವುದು ಇದರ ಉದ್ದೇಶ ಎಂದರು.

ನ್ಯಾಷನಲ್ ಹೆರಾಲ್ಡ್, ಯಂಗ್ ಇಂಡಿಯಾ ಇವು ನಮ್ಮ ಕಾಂಗ್ರೆಸ್ ಪಕ್ಷದ ಸಂಸ್ಥೆಗಳು. ನಾವು ಕಾಂಗ್ರೆಸ್ಸಿಗರಾದ ಕಾರಣಕ್ಕೆ ಈ ಸಂಸ್ಥೆಗಳು ಕಷ್ಟ ಕಾಲದಲ್ಲಿದ್ದಾಗ ನಮ್ಮ ಟ್ರಸ್ಟ್ ಗಳಿಂದ ದೇಣಿಗೆ ನೀಡಿದ್ದೇವೆ. ನಮ್ಮಂತೆ ಅನೇಕರು ಸಹಾಯ ಮಾಡಿದ್ದಾರೆ ಇದರಲ್ಲಿ ತಪ್ಪೇನಿದೆ? ಎಂದು ಪ್ರಶ್ನಿಸಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಸಭೆ - ವಿಧಾನಪರಿಷತ್‌ನ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ : ಕಣದಲ್ಲಿ 8 ಜನನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಹೆಣ್ಣು ಮಗು : ಉಪ್ಪಿನಲ್ಲಿ ಮಲಗಿಸಿ ಖುರಾನ್ ಪಠಿಸಿದ ಪೋಷಕರು ಚೇಳೂರಿನಲ್ಲಿ ವಿಶೇಷ ಸ್ವಚ್ಛತಾ ಕಾರ್ಯ : ಪಿಡಿಒ ಕೆ. ವೆಂಕಟಾಚಲಪತಿ ನೇತೃತ್ವದಲ್ಲಿ ಕಸ ತೆರವುಶಿಕ್ಷಕರು ನಿಸ್ವಾರ್ಥದಿಂದ ಸೇವೆ ಮಾಡಿದರೆ ಸಮಾಜ ಅಂತವರನ್ನು ಎಂದಿಗೂ ಮರೆಯದು: ಮಿರ್ಜಿಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ಅಪರಾಧವಲ್ಲ : ಸುಪ್ರೀಂ ಕೋರ್ಟ್ ಅಗ್ನಿವೀರರಾಗಿ ಆಯ್ಕೆಯಾದ ಒಂದೇ ಶಾಲೆಯ ಕಲಿತ 17 ವಿದ್ಯಾರ್ಥಿಗಳು ವಿಜಯಪುರ ಪಾನ್ ಶಾಪ್ ನಲ್ಲಿ ನಿಗೂಢ ಸ್ಫೋಟ : ಜನರಲ್ಲಿ ಆತಂಕ ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್