Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನರೇಗಾ ಯೋಜನೆ ಕಾರ್ಮಿಕರಿಗೆ ಸೂಕ್ತ ಸೌಲಭ್ಯ ಕಲ್ಪಿಸುವಂತೆ ಆಗ್ರಹ

Advertisement
ಸಿರುಗುಪ್ಪ : -ನಗರದ ತಾಲೂಕು ಪಂಚಾಯಿತಿ ಕಾರ್ಯಾಲಯದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ವತಿಯಿಂದ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕಾಯಕ ಬಂದುಗಳಿಗೆ ಒಪ್ಪಿಗೆ ಪತ್ರದ ಆದೇಶ ವಾಪಾಸಾತಿ ಹಾಗೂ ಎನ್.ಎಮ್.ಎಮ್.ಎಸ್ ಹಾಜರಾಗಿ ಒಂದೇ ಸಲಕ್ಕೆ ಕಡ್ಡಾಯಗೊಳಿಸುವಂತೆ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ ಆಯುಕ್ತರಿಗೆ ತಾಲೂಕು ಪಂಚಾಯಿತಿ ವ್ಯವಸ್ಥಾಪಕಿ ಸುಜಾತ ಅವರ ಮೂಲಕ ಮನವಿ ಸಲ್ಲಿಸಲಾಯಿತು



ಕರ್ನಾಟಕ ಪ್ರಾಂತ ರೈತ ಸಂಘದ ತಾಲೂಕಾಧ್ಯಕ್ಷ ವಿ.ಮಾರುತಿ ಮಾತನಾಡಿ ತಾಲೂಕಿನಲ್ಲಿ ಈಗಾಗಾಲೇ ಬಿರುಬಿಸಿಲಿನಿಂದ ಭೀಕರ ಬರಗಾಲ ಬಂದೊದಗಿದ್ದು,
ಪಂಚಾಯಿತಿಗಳಲ್ಲಿ ಅರ್ಜಿ ನಮೂನೆ-6ರ ಮೂಲಕ ಬೇಡಿಕೆಯ ಅರ್ಜಿ ಸಲ್ಲಿಸಿದಾಗಿನಿಂದ 100ದಿನಗಳ ಕಾಲ ಉದ್ಯೋಗವನ್ನು ನೀಡಬೇಕು.



ಹಲವು ಪಂಚಾಯಿತಿಗಳಲ್ಲಿ ಉದ್ಯೋಗ ನೀಡಲು ನಿರ್ಲಕ್ಷ್ಯ ದೋರಣೆ ತೋರುತ್ತಿರುವುದರಿಂದ ಕೃಷಿ ಅವಲಂಭಿತ ರೈತ ಕುಟುಂಬಗಳು ಗುಳೇ ಹೋಗುತ್ತಿದ್ದಾರೆ. ಪಂಚಾಯಿತಿಗಳಿಗೆ ಮೇಟಿಗಳು ಅಲೆದು ಕೆಲಸ ಕೇಳಿದರೂ ಜಿ.ಪಿ.ಎಸ್ ನೆಪವೊಡ್ಡಿ ಕಾಲಹರಣ ಮಾಡುತ್ತಿದ್ದಾರೆ.

ಕೆಲವು ಪಂಚಾಯಿತಿಗಳಲ್ಲಿ ಜನಪ್ರತಿನಿಧಿಗಳ ಅಣತಿಯಂತೆ ಅಭಿವೃದಿ ಅಧಿಕಾರಿಗಳು ಕಾರ್ಯನಿರ್ವಹಿಸುತ್ತಿದ್ದು, ಅಂತಹವರ ವಿರುದ್ದ ಕ್ರಮ ಜರುಗಿಸಬೇಕು. ಮೇಟಿಗಳಿಗೆ ಸೂಕ್ತ ಕಿಟ್‌ಗಳನ್ನು ನೀಡಬೇಕು.

ಅರ್ಜಿ ಸಲ್ಲಿಸಿದ ನಂತರ ಉದ್ಯೋಗವನ್ನು ಕಾಲಮಿತಿಯೊಳಗೆ ನೀಡದಿದ್ದಲ್ಲಿ ನಿರುದ್ಯೋಗ ಭತ್ಯೆಯನ್ನು ನೀಡಬೇಕು.
ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೆಲಸವನ್ನು ನೀಡಿ ಗ್ರಾಮಗಳ ಅಭಿವೃದ್ದಿಗೆ ನೆರವಾಗಬೇಕು. ದೂರದ ಪ್ರಯಾಣಕ್ಕೆ ಸುರಕ್ಷಿತ ವಾಹನಗಳಲ್ಲಿ ಕರೆದೊಯ್ಯಬೇಕು. ಕೆಲಸದ ಸ್ಥಳದಲ್ಲಿ ಶುದ್ದ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿದರು.

ಇದೇ ವೇಳೆ ತಾಲೂಕು ಖಜಾಂಚಿ ಬಿ.ರಾಮಣ್ಣ, ಸಮಿತಿ ಸದಸ್ಯರಾದ ಹುಸೇನಪ್ಪ, ಸಣ್ಣ ಹುಲುಗಪ್ಪ, ಶಾಂತಮೂರ್ತಿ, ಮಾಸ್ತಿ ಪ್ರಕಾಶ, ಸಿ.ರವಿಕುಮಾರ, ದಿವಾಕರ, ಬಸಪ್ಪ ಇನ್ನಿತರರಿದ್ದರು.

ವರದಿ.ಶ್ರೀನಿವಾಸ ನಾಯ್ಕ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ