Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯದಲ್ಲಿ 7,000 ಗಡಿ ದಾಟಿದ ಡೆಂಗ್ಯೂ ಪ್ರಕರಣಗಳು

Advertisement
ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಡೆಂಗ್ಯೂ ಪ್ರಕರಣಗಳು ಹೆಚ್ಚಳವಾಗಿದ್ದು, ರಾಜ್ಯದಲ್ಲಿ ಶನಿವಾರ ಒಂದೇ ದಿನ 175 ಮಂದಿಗೆ ಡೆಂಗ್ಯೂ ಜ್ವರ ದೃಢಪಟ್ಟಿದೆ. ಈ ಮೂಲಕ ಪ್ರಸಕ್ತ ವರ್ಷದಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ 7,000 ಗಡಿ ದಾಟಿದೆ.

ಒಂದೇ ತಿಂಗಳಲ್ಲಿ ಆರು ಮಂದಿ ಬಲಿಯಾಗಿದ್ದಾರೆ.
ರಾಜ್ಯದಲ್ಲಿ ಈ ವರ್ಷ 93012 ಡೆಂಗೆ ಶಂಕಿತರನ್ನು ಗುರುತಿಸಿ, ತಪಾಸಣೆಗೆ ಒಳಪಡಿಸಲಾಗಿದೆ. 40918 ಮಂದಿಯ ರಕ್ತ ಪರೀಕ್ಷೆ ನಡೆಸಲಾಗಿದೆ.

ಒಟ್ಟು 5,098 ಮಂದಿಗೆ ಡೆಂಗ್ಯೂ ದೃಪಟ್ಟಿದ್ದರೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು 1,908 ಮಂದಿ ಸೇರಿ ಒಟ್ಟು 7006 ಮಂದಿಗೆ ಡೆಂಗ್ಯೂ ಜ್ವರ ಇರುವುದು ದೃಢಪಟ್ಟಿದೆ.

ಶನಿವಾರ ಒಂದೇ ದಿನ ಬಿಬಿಎಂಪಿ ವ್ಯಾಪ್ತಿಯಲ್ಲಿ 115, ಮಂಡ್ಯ 26, ಗದಗ 8, ವಿಜಯಪುರ 9, ಉಡುಪಿ 2, ಉತ್ತರ ಕನ್ನಡ, ಬಳ್ಳಾರಿ ಜಿಲ್ಲೆಗಳಲ್ಲಿ ತಲಾ ಒಂದೊಂದು ಪ್ರಕರಣಗಳು ದಾಖಲಾಗಿವೆ.

ಈಡಿಸ್ ಸೊಳ್ಳೆಯಿಂದ ಡೆಂಗ್ಯೂ ಹರಡುತ್ತದೆ. ಸೋಂಕಿತ ಸೊಳ್ಳೆ ಕಚ್ಚಿದ ನಾಲ್ಕರಿಂದ ಏಳು ದಿನಗಳಲ್ಲಿ ಹಲವಾರು ಚಿಹ್ನೆಗಳು ಮತ್ತು ರೋಗಲಕ್ಷಣಗಳನ್ನು ನೀವು ಗಮನಿಸಬಹುದು.

ಡೆಂಗ್ಯೂ ಜ್ವರದ ಲಕ್ಷಣಗಳು

* ತೀವ್ರ ಹಠಾತ್ ಜ್ವರ
* ತೀವ್ರ ತಲೆನೋವು
* ತೀವ್ರ ಕೀಲು ಮತ್ತು ಸ್ನಾಯು ನೋವು
* ರೆಟ್ರೊ-ಆರ್ಬಿಟಲ್ ನೋವು, ಕಣ್ಣುಗಳ ಸಣ್ಣದೊಂದು ಚಲನೆಯಿಂದಲೂ ಇದು ಉಲ್ಬಣಗೊಳ್ಳಬಹುದು
* ವಾಕರಿಕೆ ಮತ್ತು ವಾಂತಿ
* ದಡಾರ: ದದ್ದುಗಳು ಮುಂಡದ ಮೇಲೆ ಪ್ರಾರಂಭವಾಗಬಹುದು ಮತ್ತು ಮೇಲಿನ ಮತ್ತು ಕೆಳಗಿನ ಅಂಗಗಳಿಗೆ ವಿಸ್ತರಿಸಬಹುದು. ದದ್ದುಗಳು ಎದೆಯಿಂದ ಕೈಗಳು, ಕಾಲುಗಳು ಮತ್ತು ಮುಖಕ್ಕೆ ಹರಡಬಹುದು.

ಈ ರೋಗಲಕ್ಷಣಗಳು ಕೆಲವು ದಿನಗಳ ನಂತರ ಕಣ್ಮರೆಯಾಗಬಹುದು. ಈ ರೀತಿಯ ರೋಗಲಕ್ಷಣಗಳು ಆರಂಭಿಕ ಹಂತದಲ್ಲಿ ಮಾತ್ರ ಕಂಡುಬರುತ್ತವೆ. ಆದರೆ ಡೆಂಗ್ಯೂ ತೀವ್ರ ಸ್ವರೂಪಕ್ಕೆ ಮುಂದುವರಿಯಬಹುದು.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ