Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾಗಿ ದೇವೇಗೌಡರು, ರಾಜ್ಯಾಧ್ಯಕ್ಷರಾಗಿ ಕುಮಾರಸ್ವಾಮಿ ಆಯ್ಕೆ

Advertisement

ಬೆಂಗಳೂರು: ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡರು ಹಾಗೂ ರಾಜ್ಯಾಧ್ಯಕ್ಷರಾಗಿ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಅವಿರೋಧವಾಗಿ ಪುನರಾಯ್ಕೆ ಆಗಿದ್ದಾರೆ.


ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಡೆದ ರಾಷ್ಟ್ರೀಯ ಮಂಡಳಿ ಸಭೆಯಲ್ಲಿ ಈ ಇಬ್ಬರು ನಾಯಕರ ಪುನರಾಯ್ಕೆ ಬಗ್ಗೆ ರಾಷ್ಟ್ರೀಯ ಪ್ರತಿನಿಧಿಗಳು ಒಮ್ಮತ ನಿರ್ಧಾರ ಕೈಗೊಂಡರು.

ರಾಷ್ಟ್ರ ಮಟ್ಟದಲ್ಲಿ ಪಕ್ಷ ಸಂಘಟನೆಗೆ ವಿಫುಲ ಅವಕಾಶಗಳಿವೆ. ಅದೇ ರೀತಿಯಲ್ಲಿ ಕರ್ನಾಟಕದಲ್ಲಿ ಪಕ್ಷ ಸಂಘಟನೆಯನ್ನು ಬಲಿಷ್ಠವಾಗಿ ಮಾಡಬೇಕಿದೆ.

ಈ ಹಿನ್ನೆಲೆಯಲ್ಲಿ ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರ ನೇತೃತ್ವದಲ್ಲಿಯೇ ಪಕ್ಷವನ್ನು ಸಂಘಟಿಸುವ ನಿರ್ಧಾರಕ್ಕೆ ರಾಷ್ಟ್ರೀಯ ಮಂಡಳಿ ಬಂದಿತು.

ಸಭೆಯ ಬಳಿಕ ಮಾಧ್ಯಮಗಳಿಗೆ ಈ ಬಗ್ಗೆ ವಿವರಗಳನ್ನು ನೀಡಿದ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ.ಬಿ. ಸುರೇಶ್ ಬಾಬು ಅವರು; ರಾಜ್ಯದ ಏಕೈಕ ಪ್ರಾದೇಶಿಕ ಪಕ್ಷ ಜೆಡಿಎಸ್ ಆಗಿದ್ದು, ಪಕ್ಷಕ್ಕೆ ಈಗ 25 ವರ್ಷ ತುಂಬಿದೆ. ದೇವೇಗೌಡರು ಮತ್ತು ಕುಮಾರಸ್ವಾಮಿ ಅವರ ಅವಿರತ ಶ್ರಮದಿಂದ ಪಕ್ಷ ಇವತ್ತಿಗೂ ಗಟ್ಟಿಯಾಗಿ ಉಳಿದಿದೆ.

ಅಸಂಖ್ಯಾತ ಕಾರ್ಯಕರ್ತ ಪಡೆಯನ್ನು ಹೊಂದಿದೆ. ದೇವೇಗೌಡರು ಪಕ್ಷವನ್ನು ಕಟ್ಟಿ ಬೆಳೆಸಿ, ತಮ್ಮ ಬದುಕನ್ನೇ ಪಕ್ಷಕ್ಕೆ ಮೀಸಲು ಇರಿಸಿದ್ದಾರೆ. ಬೆಳ್ಳಿಹಬ್ಬದ ಸಂದರ್ಭದಲ್ಲಿ ಈ ಇಬ್ಬರು ಬಲಿಷ್ಠ ನಾಯಕರೇ ಪಕ್ಷವನ್ನು ಮುನ್ನಡೆಸಬೇಕು ಎಂದು ರಾಷ್ಟ್ರೀಯ ಮಂಡಳಿ ತೀರ್ಮಾನಿಸಿತು ಎಂದು ಅವರು ಹೇಳಿದರು.

ನಿಖಿಲ್ ಕುಮಾರಸ್ವಾಮಿ ಅವರು ರಾಜ್ಯದ ಉದ್ದಗಲಕ್ಕೂ ಕೈಗೊಂಡಿರುವ ಸಂಘಟನಾ ಪ್ರವಾಸ ಹಾಗೂ ಸದಸ್ಯತ್ವ ನೋಂದಣಿ ಅಭಿಯಾನ ಯಶಸ್ವಿಯಾಗಿ ಮುಂದುವರಿದ್ದು, ಇದಕ್ಕೆ ಸಭೆಯಲ್ಲಿ ಮೆಚ್ಚಿಗೆ ದೊರೆತಿದೆ. ಎಲ್ಲಾ ನಾಯಕರು ಅವರ ಸಂಘಟನಾ ಶಕ್ತಿಯ ಬಗ್ಗೆ ಶ್ಲಾಘನೆ ಮಾಡಿದರು ಎಂದು ಸುರೇಶ್ ಬಾಬು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

 

 
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ