Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾಗಿ ದೇವೇಗೌಡರು, ರಾಜ್ಯಾಧ್ಯಕ್ಷರಾಗಿ ಕುಮಾರಸ್ವಾಮಿ ಆಯ್ಕೆ

Advertisement

ಬೆಂಗಳೂರು: ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡರು ಹಾಗೂ ರಾಜ್ಯಾಧ್ಯಕ್ಷರಾಗಿ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಅವಿರೋಧವಾಗಿ ಪುನರಾಯ್ಕೆ ಆಗಿದ್ದಾರೆ.


ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಡೆದ ರಾಷ್ಟ್ರೀಯ ಮಂಡಳಿ ಸಭೆಯಲ್ಲಿ ಈ ಇಬ್ಬರು ನಾಯಕರ ಪುನರಾಯ್ಕೆ ಬಗ್ಗೆ ರಾಷ್ಟ್ರೀಯ ಪ್ರತಿನಿಧಿಗಳು ಒಮ್ಮತ ನಿರ್ಧಾರ ಕೈಗೊಂಡರು.

ರಾಷ್ಟ್ರ ಮಟ್ಟದಲ್ಲಿ ಪಕ್ಷ ಸಂಘಟನೆಗೆ ವಿಫುಲ ಅವಕಾಶಗಳಿವೆ. ಅದೇ ರೀತಿಯಲ್ಲಿ ಕರ್ನಾಟಕದಲ್ಲಿ ಪಕ್ಷ ಸಂಘಟನೆಯನ್ನು ಬಲಿಷ್ಠವಾಗಿ ಮಾಡಬೇಕಿದೆ.

ಈ ಹಿನ್ನೆಲೆಯಲ್ಲಿ ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರ ನೇತೃತ್ವದಲ್ಲಿಯೇ ಪಕ್ಷವನ್ನು ಸಂಘಟಿಸುವ ನಿರ್ಧಾರಕ್ಕೆ ರಾಷ್ಟ್ರೀಯ ಮಂಡಳಿ ಬಂದಿತು.

ಸಭೆಯ ಬಳಿಕ ಮಾಧ್ಯಮಗಳಿಗೆ ಈ ಬಗ್ಗೆ ವಿವರಗಳನ್ನು ನೀಡಿದ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ.ಬಿ. ಸುರೇಶ್ ಬಾಬು ಅವರು; ರಾಜ್ಯದ ಏಕೈಕ ಪ್ರಾದೇಶಿಕ ಪಕ್ಷ ಜೆಡಿಎಸ್ ಆಗಿದ್ದು, ಪಕ್ಷಕ್ಕೆ ಈಗ 25 ವರ್ಷ ತುಂಬಿದೆ. ದೇವೇಗೌಡರು ಮತ್ತು ಕುಮಾರಸ್ವಾಮಿ ಅವರ ಅವಿರತ ಶ್ರಮದಿಂದ ಪಕ್ಷ ಇವತ್ತಿಗೂ ಗಟ್ಟಿಯಾಗಿ ಉಳಿದಿದೆ.

ಅಸಂಖ್ಯಾತ ಕಾರ್ಯಕರ್ತ ಪಡೆಯನ್ನು ಹೊಂದಿದೆ. ದೇವೇಗೌಡರು ಪಕ್ಷವನ್ನು ಕಟ್ಟಿ ಬೆಳೆಸಿ, ತಮ್ಮ ಬದುಕನ್ನೇ ಪಕ್ಷಕ್ಕೆ ಮೀಸಲು ಇರಿಸಿದ್ದಾರೆ. ಬೆಳ್ಳಿಹಬ್ಬದ ಸಂದರ್ಭದಲ್ಲಿ ಈ ಇಬ್ಬರು ಬಲಿಷ್ಠ ನಾಯಕರೇ ಪಕ್ಷವನ್ನು ಮುನ್ನಡೆಸಬೇಕು ಎಂದು ರಾಷ್ಟ್ರೀಯ ಮಂಡಳಿ ತೀರ್ಮಾನಿಸಿತು ಎಂದು ಅವರು ಹೇಳಿದರು.

ನಿಖಿಲ್ ಕುಮಾರಸ್ವಾಮಿ ಅವರು ರಾಜ್ಯದ ಉದ್ದಗಲಕ್ಕೂ ಕೈಗೊಂಡಿರುವ ಸಂಘಟನಾ ಪ್ರವಾಸ ಹಾಗೂ ಸದಸ್ಯತ್ವ ನೋಂದಣಿ ಅಭಿಯಾನ ಯಶಸ್ವಿಯಾಗಿ ಮುಂದುವರಿದ್ದು, ಇದಕ್ಕೆ ಸಭೆಯಲ್ಲಿ ಮೆಚ್ಚಿಗೆ ದೊರೆತಿದೆ. ಎಲ್ಲಾ ನಾಯಕರು ಅವರ ಸಂಘಟನಾ ಶಕ್ತಿಯ ಬಗ್ಗೆ ಶ್ಲಾಘನೆ ಮಾಡಿದರು ಎಂದು ಸುರೇಶ್ ಬಾಬು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

 

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ