
ಸದಾಶಿವನಗರದ ಸ್ಮಶಾನದ ಅಭಿವೃದ್ದಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು. ಸ್ಮಶಾನದ ಸಮಸ್ಯೆಗಳನ್ನು ನಿರ್ಲಕ್ಷಿಸಲಾಗಿತ್ತು. ಸ್ಮಶಾನದಲ್ಲಿ ಜನರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದರು. ಈ ಸಮಸ್ಯೆಗಳನ್ನು ಅರಿತು ಶೀಘ್ರದಲ್ಲೆ ಪರಿಹರಿಸುವುದಾಗದ ತಂದೆ ಭರವಸೆ ನೀಡಿದ್ದರು.

ತಂದೆ ಜನರಿಗೆ ನೀಡಿದ ಮಾತಿನಂತೆ ನಗರದ ವಿವಿಧ ಕಡೆ ಅಭಿವೃದ್ದಿ ಕಾಮಗಾರಿಗಳನ್ನು ಪ್ರಾರಂಭಿಸಲಾಗಿದೆ. ತಂದೆಯ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳು ಮತ್ತು ಸ್ಥಳೀಯ ಕಾರ್ಪೊರೇಟರ್ ಸಹಕಾರದೊಂದಿಗೆ ಕಾಮಗಾರಿಗಳಿಗೆ ಚಾಲನೆಯನ್ನು ನೀಡಲಾಗುತ್ತಿದೆ. ನಿರ್ದಿಷ್ಟ ಅವಧಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.
ವರದಿ : ಪ್ರತೀಕ ಚಿಟಗಿ

