ಈ ಹೇಳಿಕೆ ರಾಜಕೀಯವಾಗಿ ಚರ್ಚೆಗೆ ಗ್ರಾಸವಾಗಿದ್ದಲ್ಲದೇ, ಡಿಕೆಶಿ ಅವರ ಅದೇ ಹೇಳಿಕೆಯನ್ನೇ ಮುಂದಿಟ್ಟು ಬಿಜೆಪಿ ಇದೀಗ ವ್ಯಂಗ್ಯವಾಗಿ ಟ್ವೀಟ್ ಮಾಡಿದೆ.
ನಟ್ಟು-ಬೋಲ್ಟು ಟೈಟ್ ಮಾಡುವುದರಲ್ಲಿ ನಿಸ್ಸೀಮರಾಗಿರುವ ಡಿಸಿಎಂ ಅವರು, ಸಿಎಂ ಸಿದ್ದರಾಮಯ್ಯ ಕುರ್ಚಿಯ ನಟ್ಟು ಬೋಲ್ಟುಗಳನ್ನು ಕಳಚುವುದರಲ್ಲಿ ಹೆಚ್ಚು ಆಸಕ್ತರಾಗಿದ್ದಾರೆ. ಅಕ್ಟೋಬರ್-ನವೆಂಬರ್ ಅಂತ್ಯಕ್ಕೆ ಹಾಲಿ ಸಿಎಂ ಸಿದ್ದರಾಮಯ್ಯ ಅವರ ಗದ್ದುಗೆಯ ಎಕ್ಸ್ಪೈರಿ ಡೇಟ್ ಮುಗಿಯಲಿದ್ದು, ಆ ಸ್ಥಾನಕ್ಕೆ ಹೊಂಚು ಹಾಕಿರುವ ಡಿಕೆಶಿ ಅವರು ಈಗಿನಿಂದಲೇ ಸಿದ್ದರಾಮಯ್ಯ ಅವರ ಕುರ್ಚಿಯ ನಟ್ಟು-ಬೋಲ್ಟುಗಳನ್ನು ಲೂಸ್ ಮಾಡುವುದರಲ್ಲಿ ನಿರತರಾಗಿದ್ದಾರೆ ಎಂದು ಕಮಲಪಡೆ ಛೇಡಿಸಿದೆ.

