Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜಕೀಯ ಶುದ್ಧೀಕರಣಕ್ಕಾಗಿ ದಿಂಗಾಲೇಶ್ವರ ಸ್ವಾಮೀಜಿ ರಾಜಕಾರಣಕ್ಕೆ :ವಚನಾನಂದ ಶ್ರೀ

Advertisement
ದಾವಣಗೆರೆ: ದಿಂಗಾಲೇಶ್ವರ ಸ್ವಾಮೀಜಿ ಅವರು ಪಕ್ಷೇತರವಾಗಿ ಸ್ಪರ್ಧಿಸುವುದನ್ನು ತಾವು ಸ್ವಾಗತಿಸುವುದಾಗಿ ಹರಿಹರ ಪಂಚಮಸಾಲಿ ಪೀಠದ ವಚನಾನಂದ ಶ್ರೀಗಳು ಹೇಳಿದರು.

ವಚಾನಂದ ಶ್ರೀಗಳ ಬೆಂಬಲ ಕೋರಿ ಇಂದು ದಿಂಗಾಲೇಶ್ವರ ಶ್ರೀ ಭೇಟಿ ಈ ವೇಳೆ ಮಾತನಾಡಿದ ವಚನಾಂದ ಶ್ರೀಗಳು, ರಾಜಕೀಯ ಶುದ್ಧೀಕರಣಕ್ಕಾಗಿ ರಾಜಕಾರಣಕ್ಕೆ ಬಂದಿದ್ದಾರೆ.

ಅದು ಅವರ ವೈಯಕ್ತಿಕ ನಿರ್ಧಾರವಲ್ಲ, ಅವರ ಭಕ್ತರ ಅಭಿಪ್ರಾಯ ಕೇಳಿಕೊಂಡು ಚುನಾವಣೆ ಸ್ಪರ್ಧೆ ಮಾಡಿದ್ದಾರೆ. ಶ್ರೀಗೆ ಬೆಂಬಲ ನೀಡುವ ವಿಚಾರವಾಗಿ ಸದ್ಯದಲ್ಲೇ ಅಲ್ಲೊಂದು ಸಭೆ ಮಾಡಿ ನಮ್ಮ ನಿರ್ಧಾರ ತಿಳಿಸುತ್ತೇವೆ ಎಂದರು.

ಉತ್ತರ ಭಾರತದಂತೆ ಕರ್ನಾಟಕದಲ್ಲಿ ಮಠಾಧೀಶರು ರಾಜಕಾರಣಕ್ಕೆ ಬರಬೇಕು. ರಾಜಕಾರಣದಲ್ಲಿ ಅಶುದ್ಧಿಯನ್ನು ಶುದ್ಧಿ ಮಾಡಲಿಕ್ಕೆ ಪರಮ ಪೂಜ್ಯರು ಬಹಳ ಯೋಗ್ಯರು ಅಂತ ನನಗೆ ಅನಿಸುತ್ತದೆ.

‌ಪ್ರಹ್ಲಾದ ಜೋಶಿ ಅವರು ಆ ಭಾಗದ ಲಿಂಗಾಯತ ನಾಯಕರನ್ನು ತುಳಿಯುವಂತ ಕೆಲಸ ಮಾಡಿದ್ದಾರೆ ಎಂಬ ವಿಚಾರವೂ ನಮ್ಮ ಗಮನಕ್ಕೆ ಬಂದಿದೆ ಎಂದು ಕಿಡಿಕಾರಿದರು.

ಇದೇ ವೇಳೆ ದಿಂಗಾಲೇಶ್ವರ ಶ್ರೀ ಮಾತನಾಡಿ, ಜೋಶಿಯವರು ಕೆಲ ಮಠಾಧೀಶರನ್ನು ಹೆದರಿಸಿ ಬೆದರಿಸಿ ನನ್ನ ವಿರುದ್ಧ ಹೇಳಿಕೆ ಕೊಡಿಸುತ್ತಿದ್ದಾರೆ, ಅವರ ಕುಮ್ಮಕ್ಕಿನಿಂದ ಕೆಲ ಮಠಾಧೀಶರು ನನ್ನ ವಿರುದ್ಧ ಹೇಳಿಕೆ ಕೊಡುತ್ತಿದ್ದಾರೆ. ಇದು ನಿಲ್ಲದೇ ಹೋದರೆ ಅದರ ವ್ಯತಿರಿಕ್ತ ಪರಿಣಾಮ ಎದುರಿಸಬೇಕಾಗುತ್ತದೆ.

ಸಮಾಜ ರಾಜಕೀಯ ಹೊರತುಪಡಿಸಿ ಇಲ್ಲ, ಸಮಾಜ ಸೇವೆಗೆ ಅವಕಾಶ ಸಿಕ್ಕಿದೆ, ಅದನ್ನು ಭಕ್ತರು ವಹಿಸಿದ್ದಾರೆ, ನಾವು ನಿಭಾಯಿಸುತ್ತೇವೆ ಅಷ್ಟೇ. ಲಿಂಗಾಯತ ನಾಯಕರನ್ನು ತುಳಿಯುವ ಕೆಲಸ ಜೋಶಿ ಮಾಡಿದ್ದಾರೆ ಎಂದು ಕಿಡಿಕಾರಿದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಸಭೆ - ವಿಧಾನಪರಿಷತ್‌ನ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ : ಕಣದಲ್ಲಿ 8 ಜನನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಹೆಣ್ಣು ಮಗು : ಉಪ್ಪಿನಲ್ಲಿ ಮಲಗಿಸಿ ಖುರಾನ್ ಪಠಿಸಿದ ಪೋಷಕರು ಚೇಳೂರಿನಲ್ಲಿ ವಿಶೇಷ ಸ್ವಚ್ಛತಾ ಕಾರ್ಯ : ಪಿಡಿಒ ಕೆ. ವೆಂಕಟಾಚಲಪತಿ ನೇತೃತ್ವದಲ್ಲಿ ಕಸ ತೆರವುಶಿಕ್ಷಕರು ನಿಸ್ವಾರ್ಥದಿಂದ ಸೇವೆ ಮಾಡಿದರೆ ಸಮಾಜ ಅಂತವರನ್ನು ಎಂದಿಗೂ ಮರೆಯದು: ಮಿರ್ಜಿಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ಅಪರಾಧವಲ್ಲ : ಸುಪ್ರೀಂ ಕೋರ್ಟ್ ಅಗ್ನಿವೀರರಾಗಿ ಆಯ್ಕೆಯಾದ ಒಂದೇ ಶಾಲೆಯ ಕಲಿತ 17 ವಿದ್ಯಾರ್ಥಿಗಳು ವಿಜಯಪುರ ಪಾನ್ ಶಾಪ್ ನಲ್ಲಿ ನಿಗೂಢ ಸ್ಫೋಟ : ಜನರಲ್ಲಿ ಆತಂಕ ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್