Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸೆನ್ಸಸ್-2027ರ ಸ್ವಯಂ ಗಣತಿ : ಕಡ್ಡಾಯವಾಗಿ 15 ಕುಟುಂಬಗಳನ್ನು ಪೂರ್ಣಗೊಳಿಸಲು ನಿರ್ದೇಶನ

Advertisement
ಸೇಡಂ: ಈ ಮೂಲಕ ಸೇಡಂ ತಾಲೂಕಿನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಸರಕಾರಿ, ಅನುದಾನಿತ, ಅನುದಾನ ರಹಿತಿ ಶಾಲೆಯ ಮುಖ್ಯಗುರುಗಳಿಗೆ ಮತ್ತು ಸಹ ಶಿಕ್ಷಕರಿಗೆ ಹಾಗೂ ತಾಲೂಕಿನ ಸಮಸ್ತ ಮೇಲುಸ್ತೂವಾರಿ ಅಧಿಕಾರಿಗಳಿಗೆ ಈ ಮೂಲಕ ಸೂಚಿಸುವುದೇನೆಂದರೆ, ಸೆನ್ಸಸ್-2027ರ ಸ್ವಯಂ ಗಣತಿ ಅಭಿಯಾನವು ದೇಶದ ಪ್ರಮುಖ ಜನಗಣತಿ ಕಾರ್ಯಕ್ರಮದ ಭಾಗವಾಗಿದೆ. ಪ್ರತಿಯೊಬ್ಬ ನಾಗರಿಕನೂ ಈ ಅಭಿಯಾನದಲ್ಲಿ ಸಕ್ರಿಯವಾಗಿ ಭಾಗವಹಿಸುವುದು ಕಡ್ಡಾಯ ಮತ್ತು ಸಾಮಾಜಿಕ ಹೊಣೆಗಾರಿಕೆಯಾಗಿದೆ.

ಈ ಹಿನ್ನೆಲೆಯಲ್ಲಿ, ನಿಮ್ಮ ವ್ಯಾಪ್ತಿಯಲ್ಲಿ ಪ್ರತಿಯೊಬ್ಬ ಸಿಬ್ಬಂದಿ ಕನಿಷ್ಠ 15 ಕುಟುಂಬಗಳ ಸ್ವಯಂ ಗಣತಿಯನ್ನು ಪೂರ್ಣಗೊಳಿಸಲೇಬೇಕು. ಇದು ನಿಮ್ಮ ಕಾರ್ಯಕ್ಷಮತೆಯ ಮೌಲ್ಯಮಾಪನದ ಭಾಗವಾಗಿದ್ದು, ಯಾವುದೇ ಕಾರಣಕ್ಕೂ ವಿನಾಯಿತಿ ಇರುವುದಿಲ್ಲ.

ಕಾರ್ಯವಿಧಾನ:
1. ನಿಮ್ಮ ಸ್ವಂತ ಕುಟುಂಬದ ಗಣತಿಯನ್ನು ಕಡ್ಡಾಯವಾಗಿ ಪೂರ್ಣಗೊಳಿಸಿ.
2. ನಿಮ್ಮ ನೆರೆಹೊರೆ, ಸಂಬಂಧಿಕರು, ಅಥವಾ ಶಾಲಾ ಸಂಪರ್ಕದ ಮೂಲಕ 15 ಕುಟುಂಬಗಳನ್ನು ಗುರುತಿಸಿ.
3. ಸೆನ್ಸಸ್ ಅಧಿಕೃತ ಪೋರ್ಟಲ್ / ಮೊಬೈಲ್ ಅಪ್ಲಿಕೇಶನ್ ಮೂಲಕ ಪ್ರತಿ ಕುಟುಂಬದ ಮಾಹಿತಿಯನ್ನು ನಿಖರವಾಗಿ ನಮೂದಿಸಿ.
4. ಪೂರ್ಣಗೊಳಿಸಿದ ಬಳಿಕ ಅದರ ಸ್ಕ್ರೀನ್ಶಾಟ್ ಅಥವಾ ಸ್ವೀಕೃತಿಯನ್ನು ಸಂಬಂಧಪಟ್ಟ ಸಿ.ಆರ್.ಪಿ ರವರಿಗೆ ಸಲ್ಲಿಸಿ.

ಗಮನಿಸಿ : ಈ ನಿಯಮವನ್ನು ಉಲ್ಲಂಘಿಸಿದ ಅಥವಾ ನಿರ್ಲಕ್ಷಿಸಿದ ಸಿಬ್ಬಂದಿ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು. ಎಲ್ಲಾ ಶಾಲಾ ಮುಖ್ಯಸ್ಥರು ತಮ್ಮ ತಂಡದ ಪ್ರಗತಿಯನ್ನು ಪ್ರತಿದಿನ ಪರಿಶೀಲಿಸಿ, ವರದಿಯನ್ನು ಕಚೇರಿಗೆ ಸಲ್ಲಿಸಬೇಕು.

ಸೆನ್ಸಸ್-2027 ನಮ್ಮೆಲ್ಲರ ಸಹಭಾಗಿತ್ವವನ್ನು ಅಪೇಕ್ಷಿಸುತ್ತದೆ.ತಡವಾಗದೆ ಸ್ವಯಂ ಗಣತಿಯನ್ನು ಪೂರ್ಣಗೊಳಿಸಿ ಮತ್ತು ಇತರರಿಗೂ ಮಾರ್ಗದರ್ಶನ ನೀಡಿ ಎಂದು ಸೇಡಂ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಮಾರುತಿ ಹುಜರಾತಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ: ವೆಂಕಟಪ್ಪ ಕೆ ಸುಗ್ಗಾಲ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಸಭೆ - ವಿಧಾನಪರಿಷತ್‌ನ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ : ಕಣದಲ್ಲಿ 8 ಜನನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಹೆಣ್ಣು ಮಗು : ಉಪ್ಪಿನಲ್ಲಿ ಮಲಗಿಸಿ ಖುರಾನ್ ಪಠಿಸಿದ ಪೋಷಕರು ಚೇಳೂರಿನಲ್ಲಿ ವಿಶೇಷ ಸ್ವಚ್ಛತಾ ಕಾರ್ಯ : ಪಿಡಿಒ ಕೆ. ವೆಂಕಟಾಚಲಪತಿ ನೇತೃತ್ವದಲ್ಲಿ ಕಸ ತೆರವುಶಿಕ್ಷಕರು ನಿಸ್ವಾರ್ಥದಿಂದ ಸೇವೆ ಮಾಡಿದರೆ ಸಮಾಜ ಅಂತವರನ್ನು ಎಂದಿಗೂ ಮರೆಯದು: ಮಿರ್ಜಿಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ಅಪರಾಧವಲ್ಲ : ಸುಪ್ರೀಂ ಕೋರ್ಟ್ ಅಗ್ನಿವೀರರಾಗಿ ಆಯ್ಕೆಯಾದ ಒಂದೇ ಶಾಲೆಯ ಕಲಿತ 17 ವಿದ್ಯಾರ್ಥಿಗಳು ವಿಜಯಪುರ ಪಾನ್ ಶಾಪ್ ನಲ್ಲಿ ನಿಗೂಢ ಸ್ಫೋಟ : ಜನರಲ್ಲಿ ಆತಂಕ ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್