LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಸೆನ್ಸಸ್-2027ರ ಸ್ವಯಂ ಗಣತಿ : ಕಡ್ಡಾಯವಾಗಿ 15 ಕುಟುಂಬಗಳನ್ನು ಪೂರ್ಣಗೊಳಿಸಲು ನಿರ್ದೇಶನ

Advertisement
ಸೇಡಂ: ಈ ಮೂಲಕ ಸೇಡಂ ತಾಲೂಕಿನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಸರಕಾರಿ, ಅನುದಾನಿತ, ಅನುದಾನ ರಹಿತಿ ಶಾಲೆಯ ಮುಖ್ಯಗುರುಗಳಿಗೆ ಮತ್ತು ಸಹ ಶಿಕ್ಷಕರಿಗೆ ಹಾಗೂ ತಾಲೂಕಿನ ಸಮಸ್ತ ಮೇಲುಸ್ತೂವಾರಿ ಅಧಿಕಾರಿಗಳಿಗೆ ಈ ಮೂಲಕ ಸೂಚಿಸುವುದೇನೆಂದರೆ, ಸೆನ್ಸಸ್-2027ರ ಸ್ವಯಂ ಗಣತಿ ಅಭಿಯಾನವು ದೇಶದ ಪ್ರಮುಖ ಜನಗಣತಿ ಕಾರ್ಯಕ್ರಮದ ಭಾಗವಾಗಿದೆ. ಪ್ರತಿಯೊಬ್ಬ ನಾಗರಿಕನೂ ಈ ಅಭಿಯಾನದಲ್ಲಿ ಸಕ್ರಿಯವಾಗಿ ಭಾಗವಹಿಸುವುದು ಕಡ್ಡಾಯ ಮತ್ತು ಸಾಮಾಜಿಕ ಹೊಣೆಗಾರಿಕೆಯಾಗಿದೆ.

ಈ ಹಿನ್ನೆಲೆಯಲ್ಲಿ, ನಿಮ್ಮ ವ್ಯಾಪ್ತಿಯಲ್ಲಿ ಪ್ರತಿಯೊಬ್ಬ ಸಿಬ್ಬಂದಿ ಕನಿಷ್ಠ 15 ಕುಟುಂಬಗಳ ಸ್ವಯಂ ಗಣತಿಯನ್ನು ಪೂರ್ಣಗೊಳಿಸಲೇಬೇಕು. ಇದು ನಿಮ್ಮ ಕಾರ್ಯಕ್ಷಮತೆಯ ಮೌಲ್ಯಮಾಪನದ ಭಾಗವಾಗಿದ್ದು, ಯಾವುದೇ ಕಾರಣಕ್ಕೂ ವಿನಾಯಿತಿ ಇರುವುದಿಲ್ಲ.

ಕಾರ್ಯವಿಧಾನ:
1. ನಿಮ್ಮ ಸ್ವಂತ ಕುಟುಂಬದ ಗಣತಿಯನ್ನು ಕಡ್ಡಾಯವಾಗಿ ಪೂರ್ಣಗೊಳಿಸಿ.
2. ನಿಮ್ಮ ನೆರೆಹೊರೆ, ಸಂಬಂಧಿಕರು, ಅಥವಾ ಶಾಲಾ ಸಂಪರ್ಕದ ಮೂಲಕ 15 ಕುಟುಂಬಗಳನ್ನು ಗುರುತಿಸಿ.
3. ಸೆನ್ಸಸ್ ಅಧಿಕೃತ ಪೋರ್ಟಲ್ / ಮೊಬೈಲ್ ಅಪ್ಲಿಕೇಶನ್ ಮೂಲಕ ಪ್ರತಿ ಕುಟುಂಬದ ಮಾಹಿತಿಯನ್ನು ನಿಖರವಾಗಿ ನಮೂದಿಸಿ.
4. ಪೂರ್ಣಗೊಳಿಸಿದ ಬಳಿಕ ಅದರ ಸ್ಕ್ರೀನ್ಶಾಟ್ ಅಥವಾ ಸ್ವೀಕೃತಿಯನ್ನು ಸಂಬಂಧಪಟ್ಟ ಸಿ.ಆರ್.ಪಿ ರವರಿಗೆ ಸಲ್ಲಿಸಿ.

ಗಮನಿಸಿ : ಈ ನಿಯಮವನ್ನು ಉಲ್ಲಂಘಿಸಿದ ಅಥವಾ ನಿರ್ಲಕ್ಷಿಸಿದ ಸಿಬ್ಬಂದಿ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು. ಎಲ್ಲಾ ಶಾಲಾ ಮುಖ್ಯಸ್ಥರು ತಮ್ಮ ತಂಡದ ಪ್ರಗತಿಯನ್ನು ಪ್ರತಿದಿನ ಪರಿಶೀಲಿಸಿ, ವರದಿಯನ್ನು ಕಚೇರಿಗೆ ಸಲ್ಲಿಸಬೇಕು.

ಸೆನ್ಸಸ್-2027 ನಮ್ಮೆಲ್ಲರ ಸಹಭಾಗಿತ್ವವನ್ನು ಅಪೇಕ್ಷಿಸುತ್ತದೆ.ತಡವಾಗದೆ ಸ್ವಯಂ ಗಣತಿಯನ್ನು ಪೂರ್ಣಗೊಳಿಸಿ ಮತ್ತು ಇತರರಿಗೂ ಮಾರ್ಗದರ್ಶನ ನೀಡಿ ಎಂದು ಸೇಡಂ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಮಾರುತಿ ಹುಜರಾತಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ: ವೆಂಕಟಪ್ಪ ಕೆ ಸುಗ್ಗಾಲ್
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್ಗಣೇಶ ವಿಸರ್ಜನೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಸಾವು