Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸೆನ್ಸಸ್-2027ರ ಸ್ವಯಂ ಗಣತಿ : ಕಡ್ಡಾಯವಾಗಿ 15 ಕುಟುಂಬಗಳನ್ನು ಪೂರ್ಣಗೊಳಿಸಲು ನಿರ್ದೇಶನ

Advertisement
ಸೇಡಂ: ಈ ಮೂಲಕ ಸೇಡಂ ತಾಲೂಕಿನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಸರಕಾರಿ, ಅನುದಾನಿತ, ಅನುದಾನ ರಹಿತಿ ಶಾಲೆಯ ಮುಖ್ಯಗುರುಗಳಿಗೆ ಮತ್ತು ಸಹ ಶಿಕ್ಷಕರಿಗೆ ಹಾಗೂ ತಾಲೂಕಿನ ಸಮಸ್ತ ಮೇಲುಸ್ತೂವಾರಿ ಅಧಿಕಾರಿಗಳಿಗೆ ಈ ಮೂಲಕ ಸೂಚಿಸುವುದೇನೆಂದರೆ, ಸೆನ್ಸಸ್-2027ರ ಸ್ವಯಂ ಗಣತಿ ಅಭಿಯಾನವು ದೇಶದ ಪ್ರಮುಖ ಜನಗಣತಿ ಕಾರ್ಯಕ್ರಮದ ಭಾಗವಾಗಿದೆ. ಪ್ರತಿಯೊಬ್ಬ ನಾಗರಿಕನೂ ಈ ಅಭಿಯಾನದಲ್ಲಿ ಸಕ್ರಿಯವಾಗಿ ಭಾಗವಹಿಸುವುದು ಕಡ್ಡಾಯ ಮತ್ತು ಸಾಮಾಜಿಕ ಹೊಣೆಗಾರಿಕೆಯಾಗಿದೆ.

ಈ ಹಿನ್ನೆಲೆಯಲ್ಲಿ, ನಿಮ್ಮ ವ್ಯಾಪ್ತಿಯಲ್ಲಿ ಪ್ರತಿಯೊಬ್ಬ ಸಿಬ್ಬಂದಿ ಕನಿಷ್ಠ 15 ಕುಟುಂಬಗಳ ಸ್ವಯಂ ಗಣತಿಯನ್ನು ಪೂರ್ಣಗೊಳಿಸಲೇಬೇಕು. ಇದು ನಿಮ್ಮ ಕಾರ್ಯಕ್ಷಮತೆಯ ಮೌಲ್ಯಮಾಪನದ ಭಾಗವಾಗಿದ್ದು, ಯಾವುದೇ ಕಾರಣಕ್ಕೂ ವಿನಾಯಿತಿ ಇರುವುದಿಲ್ಲ.

ಕಾರ್ಯವಿಧಾನ:
1. ನಿಮ್ಮ ಸ್ವಂತ ಕುಟುಂಬದ ಗಣತಿಯನ್ನು ಕಡ್ಡಾಯವಾಗಿ ಪೂರ್ಣಗೊಳಿಸಿ.
2. ನಿಮ್ಮ ನೆರೆಹೊರೆ, ಸಂಬಂಧಿಕರು, ಅಥವಾ ಶಾಲಾ ಸಂಪರ್ಕದ ಮೂಲಕ 15 ಕುಟುಂಬಗಳನ್ನು ಗುರುತಿಸಿ.
3. ಸೆನ್ಸಸ್ ಅಧಿಕೃತ ಪೋರ್ಟಲ್ / ಮೊಬೈಲ್ ಅಪ್ಲಿಕೇಶನ್ ಮೂಲಕ ಪ್ರತಿ ಕುಟುಂಬದ ಮಾಹಿತಿಯನ್ನು ನಿಖರವಾಗಿ ನಮೂದಿಸಿ.
4. ಪೂರ್ಣಗೊಳಿಸಿದ ಬಳಿಕ ಅದರ ಸ್ಕ್ರೀನ್ಶಾಟ್ ಅಥವಾ ಸ್ವೀಕೃತಿಯನ್ನು ಸಂಬಂಧಪಟ್ಟ ಸಿ.ಆರ್.ಪಿ ರವರಿಗೆ ಸಲ್ಲಿಸಿ.

ಗಮನಿಸಿ : ಈ ನಿಯಮವನ್ನು ಉಲ್ಲಂಘಿಸಿದ ಅಥವಾ ನಿರ್ಲಕ್ಷಿಸಿದ ಸಿಬ್ಬಂದಿ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು. ಎಲ್ಲಾ ಶಾಲಾ ಮುಖ್ಯಸ್ಥರು ತಮ್ಮ ತಂಡದ ಪ್ರಗತಿಯನ್ನು ಪ್ರತಿದಿನ ಪರಿಶೀಲಿಸಿ, ವರದಿಯನ್ನು ಕಚೇರಿಗೆ ಸಲ್ಲಿಸಬೇಕು.

ಸೆನ್ಸಸ್-2027 ನಮ್ಮೆಲ್ಲರ ಸಹಭಾಗಿತ್ವವನ್ನು ಅಪೇಕ್ಷಿಸುತ್ತದೆ.ತಡವಾಗದೆ ಸ್ವಯಂ ಗಣತಿಯನ್ನು ಪೂರ್ಣಗೊಳಿಸಿ ಮತ್ತು ಇತರರಿಗೂ ಮಾರ್ಗದರ್ಶನ ನೀಡಿ ಎಂದು ಸೇಡಂ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಮಾರುತಿ ಹುಜರಾತಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ: ವೆಂಕಟಪ್ಪ ಕೆ ಸುಗ್ಗಾಲ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ