Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವೈದ್ಯರ ಚೀಟಿ ಇಲ್ಲದೇ ಔಷಧಿ ನೀಡಿದರೇ ಲೈಸೆನ್ಸ್ ರದ್ದು

Advertisement

ವೈದ್ಯರ ಸಲಹಾ ಚೀಟಿ ಇಲ್ಲದೇ ಅನುಸೂಚಿತ ಔಷಧಗಳನ್ನು ಮಾರಾಟ ಮಾಡುವ ಔಷಧ ಅಂಗಡಿಗಳ ಮೇಲೆ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಕೊಪ್ಪಳ ಜಿಲ್ಲಾ ಸಹಾಯಕ ಔಷಧ ನಿಯಂತ್ರಕ ವೆಂಕಟೇಶ ರಾಥೋಡ ಅವರು ಸೂಚನೆ ನೀಡಿದ್ದಾರೆ.


ಔಷಧ ಮತ್ತು ಕಾಂತಿವರ್ಧಕ ಅಧಿನಿಯಮ 1940ರ ಅಡಿಯಲ್ಲಿ ಅನುಸೂಚಿ ಹೆಚ್, ಹೆಚ್1 ಮತ್ತು ಎಕ್ಸ್ ಅಡಿಯಲ್ಲಿ ಬರುವ ಮತ್ತುಬರಿಸುವ, ಅಮಲುಕಾರಕ ಅಥವಾ ರೋಗ ನಿರೋಧಕ ಮತ್ತು ಇತರೆ ಅನುಸೂಚಿತ ಔಷಧಗಳನ್ನು ವೈದ್ಯರ ಸಲಹಾ ಚೀಟಿ ಇಲ್ಲದೇ ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧವಾಗಿರುತ್ತದೆ.

ಕೊಪ್ಪಳ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಮಾದಕ ವ್ಯಸನ ನಿಯಂತ್ರಣ (ನಾರ್ಕೋ ಕೋ-ಆರ್ಡಿನೇಷನ್ ಸೆಂಟರ್) ಸಮನ್ವಯ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿಗಳ ನಿರ್ದೇಶನದ ಮೇರೆಗೆ ಸಹಾಯಕ ಔಷಧ ನಿಯಂತ್ರಕರು ಹಾಗೂ ಉಪ ಔಷಧ ನಿಯಂತ್ರಕರು ಜಿಲ್ಲೆಯಲ್ಲಿನ ಔಷಧ ಅಂಗಡಿಗಳನ್ನು ಪರಿವೀಕ್ಷಣೆ ಕೈಗೊಂಡಿದ್ದು, ಈ ಅವಧಿಯಲ್ಲಿ ವೈದ್ಯರ ಸಲಹಾ ಚೀಟಿ ಇಲ್ಲದೇ ಅನುಸೂಚಿತ ಔಷಧಗಳನ್ನು ಮಾರಾಟ ಮಾಡಿರುವ ಒಟ್ಟು ಒಂದು ಸಂಸ್ಥೆಯ ಪರವಾನಿಗೆ ರದ್ದುಗೊಳಿಸಲಾಗಿದೆ ಮತ್ತು ಒಟ್ಟು ನಾಲ್ಕು ಸಂಸ್ಥೆಗಳ ಪರವಾನಿಗೆಗಳನ್ನು ಅಮಾನತ್ತುಗೊಳಿಸಿ ಆದೇಶಗೊಳಿಸಲಾಗಿದೆ.

ಆದ್ದರಿಂದ ಜಿಲ್ಲೆಯ ಎಲ್ಲಾ ಚಿಲ್ಲರೆ ಔಷಧ ವ್ಯಾಪಾರಸ್ಥರು ಅನುಸೂಚಿತ ಹೆಚ್, ಹೆಚ್1 ಮತ್ತು ಎಕ್ಸ್ ಅಡಿಯಲ್ಲಿ ಬರುವ ಮತ್ತುಬರಿಸುವ, ಅಮಲುಕಾರಕ, ರೋಗ ನಿರೋಧಕ ಮತ್ತು ಇತರೆ ಅನುಸೂಚಿತ ಔಷಧಗಳನ್ನು ವೈದ್ಯರ ಸಲಹಾ ಚೀಟಿ ಇಲ್ಲದೇ ಮಾರಾಟ ಮಾಡಬಾರದು ಹಾಗೂ ಇದರ ಕುರಿತು ಎಚ್ಚರಿಕೆ ಫಲಕವನ್ನು ಸಾರ್ವಜನಿಕರಿಗೆ ಕಾಣುವಂತೆ ತಮ್ಮ ಅಂಗಡಿಗಳಲ್ಲಿ ಕಡ್ಡಾಯವಾಗಿ ಪ್ರದರ್ಶಿಸಬೇಕೆಂದು ಕೊಪ್ಪಳ ಜಿಲ್ಲಾ ಸಹಾಯಕ ಔಷಧ ನಿಯಂತ್ರಕರ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.

 
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ