Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿವಾದಿತ ಭೋಜಶಾಲಾ ಇನ್ಮುಂದೆ "ದೇವಸ್ಥಾನ": ಹೈಕೋರ್ಟ್ ಐತಿಹಾಸಿಕ ಆದೇಶ 

Advertisement

ಭೋಪಾಲ್ : ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿ ದಶಕಗಳಿಂದಲೂ ತೀವ್ರ ವಿವಾದಕ್ಕೆ ಕಾರಣವಾಗಿದ್ದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಸಂಕೀರ್ಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. 

ಸುದೀರ್ಘ ಕಾನೂನು ಹೋರಾಟಕ್ಕೆ ಪ್ರಮುಖ ತಿರುವು ನೀಡಿರುವ ಉನ್ನತ ನ್ಯಾಯಾಲಯವು, ವಿವಾದಿತ ಭೋಜಶಾಲಾ ಆವರಣವನ್ನು "ದೇವಸ್ಥಾನ" ಎಂದು ಘೋಷಿಸಿ ಐತಿಹಾಸಿಕ ಆದೇಶ ಹೊರಡಿಸಿದೆ.

ನ್ಯಾಯಮೂರ್ತಿಗಳಾದ ವಿಜಯ್ ಕುಮಾರ್ ಶುಕ್ಲಾ ಮತ್ತು ಅಲೋಕ್ ಅವಸ್ತಿ ಅವರನ್ನೊಳಗೊಂಡ ಹೈಕೋರ್ಟ್‌ನ ದ್ವಿಸದಸ್ಯ ಪೀಠವು ಈ ಮಹತ್ವದ ತೀರ್ಪನ್ನು ಪ್ರಕಟಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಮೇ 12 ರಂದೇ ಎಲ್ಲಾ ಕಡೆಯ ವಾದ-ಪ್ರತಿವಾದಗಳನ್ನು ಆಲಿಸಿ ವಿಚಾರಣೆ ಪೂರ್ಣಗೊಳಿಸಿದ್ದ ನ್ಯಾಯಾಲಯವು, ತೀರ್ಪನ್ನು ಕಾಯ್ದಿರಿಸಿತ್ತು. ತೀವ್ರ ಕುತೂಹಲ ಕೆರಳಿಸಿದ್ದ ಈ ತೀರ್ಪನ್ನು ಇಂದು ಅಧಿಕೃತವಾಗಿ ಪ್ರಕಟಿಸಲಾಗಿದೆ.

ನ್ಯಾಯಾಲಯವು ತನ್ನ ಆದೇಶದಲ್ಲಿ ಐತಿಹಾಸಿಕ ಸಾಕ್ಷ್ಯಗಳನ್ನು ಉಲ್ಲೇಖಿಸಿದ್ದು, ವಿವಾದಿತ ಇಡೀ ಸಂಕೀರ್ಣವು ಮೂಲತಃ ವಾಗ್ದೇವಿ (ಸರಸ್ವತಿ ದೇವಿ)ಯ ಮಂದಿರವಾಗಿತ್ತು ಮತ್ತು ಇದನ್ನು ರಾಜ ಭೋಜನು ಸ್ಥಾಪಿಸಿದ್ದ ಪ್ರಸಿದ್ಧ ಸಂಸ್ಕೃತ ಅಧ್ಯಯನ ಕೇಂದ್ರವಾಗಿತ್ತು ಎಂದು ಸ್ಪಷ್ಟವಾಗಿ ಹೇಳಿದೆ.

ಈ ಮೂಲಕ ಈ ಜಾಗವು ಮೂಲತಃ ಹಿಂದೂ ಧಾರ್ಮಿಕ ಮತ್ತು ಶೈಕ್ಷಣಿಕ ಕೇಂದ್ರವಾಗಿತ್ತು ಎಂಬ ವಾದಕ್ಕೆ ನ್ಯಾಯಾಲಯವು ಕಾನೂನು ಮುದ್ರೆ ಒತ್ತಿದೆ.

ಭಾರತೀಯ ಪುರಾತತ್ವ ಇಲಾಖೆ (ASI) ಇತ್ತೀಚೆಗೆ ನಡೆಸಿದ್ದ ಸುದೀರ್ಘ ವೈಜ್ಞಾನಿಕ ಸಮೀಕ್ಷೆಯ ವರದಿಯನ್ನು ಆಧರಿಸಿ ಹೈಕೋರ್ಟ್ ಈ ನಿರ್ಧಾರಕ್ಕೆ ಬಂದಿದೆ ಎನ್ನಲಾಗಿದೆ.

 ಸಮೀಕ್ಷೆಯ ವೇಳೆ ಪತ್ತೆಯಾಗಿದ್ದ ಶಾಸನಗಳು, ಕೆತ್ತನೆಗಳು ಮತ್ತು ಮಂದಿರದ ಅವಶೇಷಗಳು ಈ ಸಂಕೀರ್ಣದ ಮೂಲ ಸ್ವರೂಪವನ್ನು ಸಾಬೀತುಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿವೆ ಎಂದು ನ್ಯಾಯಪೀಠವು ಅಭಿಪ್ರಾಯಪಟ್ಟಿದೆ.

ಈ ಐತಿಹಾಸಿಕ ತೀರ್ಪು ಹೊರಬೀಳುತ್ತಿದ್ದಂತೆ ಧಾರ್ ಜಿಲ್ಲೆ ಸೇರಿದಂತೆ ಮಧ್ಯಪ್ರದೇಶದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಸೂಕ್ಷ್ಮ ಪ್ರದೇಶಗಳಲ್ಲಿ ಹದ್ದಿನ ಕಣ್ಣು ಇಡಲಾಗಿದ್ದು, ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡುವಂತೆ ಆಡಳಿತ ಮಂಡಳಿ ಸಾರ್ವಜನಿಕರಲ್ಲಿ ಮನವಿ ಮಾಡಿದೆ.

 

 

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಂಗಳೂರನಲ್ಲಿ ಬೈಲಹೊಂಗಲ ಮೂಲದ ಇನ್ಸ್‌ಪೆಕ್ಟರ್ ಹೃದಯಾಘಾತದಿಂದ ನಿಧನ ವಿವಾದಿತ ಭೋಜಶಾಲಾ ಇನ್ಮುಂದೆ "ದೇವಸ್ಥಾನ": ಹೈಕೋರ್ಟ್ ಐತಿಹಾಸಿಕ ಆದೇಶ ತುಂಗಭದ್ರಾ ಸೇತುವೆ ಮೇಲಿನಿಂದ ಬಿದ್ದ ಟ್ರ್ಯಾಕ್ಟರ್ : ಒಂದೇ ಕುಟುಂಬದ 6 ಜನ ಸಾವು ನೂತನ ಬಿಇಓ ಆಗಿ ಬಿ ಉಮಾಪತಿ ಅಧಿಕಾರ ಸ್ವೀಕಾರ 30 ದಿನಕ್ಕೆ ಕಾಲಿಟ್ಟ ಪ್ರತಿಭಟನೆ ಯಾವುದೇ ಅಧಿಕಾರಿ ಬರುತ್ತಿಲ್ಲಅಪ್ರಾಪ್ತ ಮಗಳ ಮೇಲೆ ತಂದೆ ಹಾಗೂ ಆತನ ಸ್ನೇಹಿತನಿಂದಲೇ ನಿರಂತರ ಅತ್ಯಾಚಾರಬೆಂಗಳೂರಿನಿಂದ ಕುಂದಾನಗರಿ ಬೆಳಗಾವಿಗೂ ವಿಸ್ತರಿಸಿದ ಶಿವಕುಮಾರ್ 'ಮುಂದಿನ ಸಿಎಂ ಫ್ಲೇಕ್ಸ್ ಗಂಗಾ ಕಲ್ಯಾಣ ಯೋಜನೆಯ ವಿವಿಧ ಫಲಾನುಭವಿಗಳಿಗೆ ಮೋಟಾರ್ ಪೈಪ್ ಸೆಟ್ ವಿತರಣೆಜಮೀನು ಸರ್ಕಾರದ ಭೂಸ್ವಾಧೀನ ಹರ್ಷ ನಟ ದರ್ಶನ್ ಗೆ ಇನ್ನೊಂದು ವರ್ಷ ಜೈಲೇ ಗತಿ : ಜಾಮೀನು ಅರ್ಜಿ ವಜಾ