Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಸಮಾಧಾನ ವರಿಷ್ಠರು ಬಗೆಹರಿಸುವರು: ಪಶ್ಚಿಮ ನಿಯೋಜಿತ ಅಭ್ಯರ್ಥಿ ಲಿಂಬಿಕಾಯಿ ಹೇಳಿಕೆ

Advertisement
ಹುಬ್ಬಳ್ಳಿ: ೨೦೨೬ರ ಕರ್ನಾಟಕ ಪಶ್ಚಿಮ ಪದವೀಧರ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಎಲ್ಲ ಅಭಿಪ್ರಾಯ ಪಡೆದು ನನಗೆ ಟಿಕೆಟ್ ನೀಡಲಾಗಿದೆ. ಕುಬೇರಪ್ಪನವರ ಅಸಮಾಧಾನವನ್ನು ಪಕ್ಷದ ವರಿಷ್ಠರು , ಮುಖಂಡರು ಬಗೆಹರಿಸಲಿದ್ದಾರೆ ಎಂದು ಪಶ್ಚಿಮ ಪದವೀಧರ ಮತಕ್ಷೇತ್ರದ ನಿಯೋಜಿತ ಕಾಂಗ್ರೆಸ್ ಅಭ್ಯರ್ಥಿ ಮೋಹನ್ ಲಿಂಬಿಕಾಯಿ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪಶ್ಚಿಮ ಪದವೀಧರ ಮತಕ್ಷೇತ್ರವು ಧಾರವಾಡ, ಹಾವೇರಿ, ಉತ್ತರ ಕನ್ನಡ, ಗದಗ ಜಿಲ್ಲೆಯನ್ನು ಒಳಗೊಂಡಿದೆ. ಅದರಲ್ಲಿ ಧಾರವಾಡ ಜಿಲ್ಲೆಯಲ್ಲಿ ೩೮ ಸಾವಿರ, ೨೮ ಸಾವಿರ ಹಾವೇರಿ, ೧೯ ಸಾವಿರ ಗದಗ ಜಿಲ್ಲೆ, ೧೫ ಸಾವಿರ ಉತ್ತರ ಕನ್ನಡ ಜಿಲ್ಲೆಯಲ್ಲಿ ಮತದಾರರಿದ್ದಾರೆ. ಇದರಲ್ಲಿ ೫೧ ಸಾವಿರ ಪುರುಷ ಮತದಾರರಿದ್ದು, ೩೫ ಸಾವಿರ ಮಹಿಳಾ ಮತದಾರರಿದ್ದಾರೆ. ಆದರೆ ಮತದಾರರ ಪಟ್ಟಿಯಲ್ಲಿ ಹೆಚ್ಚು ಮಹಿಳಾ ಮತದಾರರು ತಿರಸ್ಕಾರಗೊಂಡಿದ್ದಾರೆ. ಇದಕ್ಕೆ ಅವರ ವಿಳಾಸದ ದಾಖಲಾತಿ ಸೇರಿದಂತೆ ಇನ್ನಿತರ ಕಾರಣಗಳಿವೆ. ಹೀಗಾಗಿ ಈ ಬಗ್ಗೆ ಮತದಾರರು ಜಾಗೃತಗೊಂಡು ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕು ಎಂದರು.
ಕಳೆದ ಬಾರಿ ೯೪ ಸಾವಿರ ಮತದಾರರಿದ್ದು, ಇದರಲ್ಲಿ ೨೨ ಸಾವಿರ ಬಿಜೆಪಿ ಅಭ್ಯರ್ಥಿ ಮತವನ್ನು ಪಡೆದಿದ್ದರು. ಕಾಂಗ್ರೆಸ್ ಅಭ್ಯರ್ಥಿ ೧೩ ಸಾವಿರ ಮತಗಳನ್ನು ಪಡೆದಿದ್ದರು, ಇದಲ್ಲದೇ ಬಂಡಾಯ ಅಭ್ಯರ್ಥಿ ೬ ಸಾವಿರ ಮತಗಳನ್ನು ಪಡೆದುಕೊಂಡು, ಸುಮಾರು ೮ ಸಾವಿರಕ್ಕೂ ಅಧಿಕ ಮತಗಳು ಕುಲಗೆಟ್ಟ ಮತಗಳಾಗಿದ್ದವು. ಇವೆಲ್ಲವನ್ನೂ ನೋಡಿದಾಗ ಬಿಜೆಪಿ ವಿರೋಧಿ ಅಲೆ ನಮಗೆ ಕಂಡು ಬಂದಿದೆ. ಈ ದಿಸೆಯಲ್ಲಿ ಈ ಬಾರಿ ಕಾಂಗ್ರೆಸ್ ಪಕ್ಷ ವಿಧಾನ ಪರಿಷತ್ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲಿದೆ. ಹೀಗಾಗಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸುಲಭವಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಈಗಾಗಲೇ ಪದವೀಧರರ ಸಂಪರ್ಕದಲ್ಲಿದ್ದು ಪ್ರತಿ ಜಿಲ್ಲೆಯಲ್ಲೂ ಸಂಚಾರ ಮಾಡಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುವುದು ಎಂದು ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಎಂ.ಎಸ್.ಅಕ್ಕಿ, ಡಾ.ಲಿಂಗರಾಜ ಅಂಗಡಿ, ಅನಿಲಕುಮಾರ ಪಾಟೀಲ, ಹುಡಾ ಅಧ್ಯಕ್ಷ ಶಾಕೀರ ಸನದಿ ಮುಂತಾದವರಿದ್ದರು.

ವರದಿ: ಸುಧೀರ್ ‌ಕುಲಕರ್ಣಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ