Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅತ್ತೆ ಅಡುಗೆ ಕಲಿಯುವಂತೆ ಬುದ್ಧಿಮಾತು ಹೇಳಿದ್ದಕ್ಕೆ ಮನನೊಂದು ಸೊಸೆ ಆತ್ಮಹತ್ಯೆ

Advertisement
ಚಿಕ್ಕಬಳ್ಳಾಪುರ : ಕ್ಷುಲ್ಲಕ ಕಾರಣಗಳಿಗಾಗಿ ಇಂದಿನ ಯುವ ಪೀಳಿಗೆ ತುರ್ತು ನಿರ್ಧಾರಗಳನ್ನು ಕೈಗೊಂಡು ಪ್ರಾಣ ಕಳೆದುಕೊಳ್ಳುತ್ತಿರುವುದು (Sucide) ಆತಂಕಕಾರಿ ಸಂಗತಿಯಾಗಿದೆ.

ಇತ್ತೀಚೆಗಷ್ಟೇ ಮೊಬೈಲ್ (Mobile) ನೋಡಬೇಡ ಎಂದಿದ್ದಕ್ಕೆ ಯುವತಿಯೊಬ್ಬಳು (Girl) ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ, ಈಗ ಅತ್ತೆ ಅಡುಗೆ ಕಲಿಯುವಂತೆ ಬುದ್ಧಿಮಾತು ಹೇಳಿದ್ದಕ್ಕೆ ಮನನೊಂದು ಯುವತಿಯೊಬ್ಬಳು ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಪೆರೇಸಂದ್ರ ಗ್ರಾಮದ ನಿವಾಸಿ ಶ್ರುತಿ (18) ಆತ್ಮಹತ್ಯೆಗೆ ಶರಣಾದ ಯುವತಿ. ಅತ್ತೆ ಶ್ರುತಿಗೆ ಮನೆಯಲ್ಲಿ ಸುಮ್ಮನೆ ಇರುವ ಬದಲು ಸ್ವಲ್ಪ ಕೆಲಸ ಮಾಡುವುದನ್ನು ಕಲಿ, ನನಗೂ ಸಹಾಯವಾಗುತ್ತದೆ ಮತ್ತು ನಿನಗೂ ಅಡುಗೆ ಕಲಿತಂತಾಗುತ್ತದೆ ಎಂದು ಹೇಳಿದನ್ನು ತಪ್ಪಾಗಿ ಅರ್ಥೈಸಿಕೊಂಡ ಶ್ರುತಿ ತೀವ್ರವಾಗಿ ಮನನೊಂದಿದ್ದಾಳೆ. ಇದೇ ಮನಸ್ತಾಪದಲ್ಲಿ ಮನೆಯಲ್ಲಿದ್ದ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಿದರು, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಪೆರೇಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಸಣ್ಣಪುಟ್ಟ ವಿಷಯಗಳಿಗೆ ಇಂತಹ ಹಠಾತ್ ನಿರ್ಧಾರಗಳನ್ನು ಕೈಗೊಳ್ಳಬೇಡಿ ಎಂದು ಅಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚೆನ್ನೆöÊ ಸೂಪರ್ ಕಿಂಗ್ಸ್ಗೆ ೨೩೦ ರನ್‌ಗಳ ಗೆಲುವಿನ ಗುರಿನಾಳೆ ಆರ್‌ಸಿಬಿ- ಎಸ್‌ಆರ್‌ಎಚ್ ಪಂದ್ಯಜೂನ್ ೧೧ ರಿಂದ ವಿಶ್ವಕಪ್ ಫುಟ್‌ಬಾಲ್ ಪಂದ್ಯಾವಳಿರಾಜ್ಯ ಜೆಡಿಎಸ್ ಹಿಂದುಳಿದ ವರ್ಗದ ರಾಜ್ಯಾಧ್ಯಕ್ಷರಾಗಿ ಶಿವಕುಮಾರ್ ನಾಟೀಕಾರ ನೇಮಕಒಂದನೇ ತರಗತಿ ದಾಖಲಾತಿಗೆ ವಯೋಮಿತಿ ಆದೇಶವ ಮರುಪರಿಶೀಲಿಸುವಂತೆ ಹೈಕೋರ್ಟ್ ತಾಕೀತು ಗುಜರಾತ್ ಟೈಟನ್ಸ್ಗೆ ಮೊದಲೆರಡು ಸ್ಥಾನದಲ್ಲೇ ಅಭಿಯಾನ ಮುಗಿಸುವ ಗುರಿಧರ್ಮಸ್ಥಳ ಗ್ರಾಮದ 'ಬುರುಡೆ ರಹಸ್ಯ : ಬಂಗ್ಲೆಗುಡ್ಡೆ ಅರಣ್ಯದಲ್ಲಿ SIT ತೀವ್ರ ತನಿಖೆ ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರಿಂದ 8,67,590/- ರೂ. ದಂಡ ವಸೂಲಿಅಪರಿಚಿತನಿಂದ ಪುಲ್ವಾಮಾ ದಾಳಿಯ ಮಾಸ್ಟರ್‌ಮೈಂಡ್‌ ಹಮ್ಜಾ ಬುರ್ಹಾನ್ ಹತ್ಯೆ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಕಡಿಮೆ ಮಾಡುವುದಿಲ್ಲ : ಸಿದ್ದರಾಮಯ್ಯ