LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಯೂತ್ ಫಾರ್ ಸೇವಾ ಸಂಸ್ಥೆಯ ವತಿಯಿಂದ ಮಕ್ಕಳಿಗೆ ಉಚಿತ ಕಿಟ್ ವಿತರಣೆ

Advertisement
--------------------------------ತಾಲೂಕಿನ ವಿವಿಧ ಗ್ರಾಮ ಶಾಲೆಗಳಲ್ಲಿ 

ಸೇಡಂ:  ತಾಲ್ಲೂಕಿನ ಮಲ್ಕಪಲ್ಲಿ, ಮೇದಕ,ಶಕಲಾಸಾಪಲ್ಲಿ, ಬುರಗಪಲ್ಲಿ ಗ್ರಾಮಗಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಟೆಕ್ಸಸ್ ಇನ್ಸ್ಟ್ರುಮೆಂಟ್ಸ್ ಮತ್ತು ಯೂತ್ ಫಾರ್ ಸೇವಾದ ಸ್ವಯಂಸೇವಕರು ಭಾಗವಹಿಸಿ ಕಾರ್ಯಕ್ರಮದ ಸುಗಮ ಹರಿವಿಗೆ ಕೊಡುಗೆ ನೀಡಿದರು.

ಪ್ರತಿ ವರ್ಷದಂತೆ ಈ ವರ್ಷವೂ ಟೆಕ್ಸಸ್ ಇನ್ಸ್ಟ್ರುಮೆಂಟ್ಸ್ ಕಂಪನಿಯ ಸಹಯೋಗದೊಂದಿಗೆ ಯೂತ್ ಫಾರ್ ಸೇವಾ ಶಾಲಾ ಕಿಟ್‌ಗಳನ್ನು ವಿತರಿಸಿತು, 550 ರೂ.ವರೆಗಿನ ವೆಚ್ಚದ ಬ್ಯಾಗ್, ನೋಟ್ ಪುಸ್ತಕಗಳು, ಪೌಚ್ ಮತ್ತು ಇತರ ಅಗತ್ಯ ಸಾಮಗ್ರಿಗಳನ್ನು ಒಳಗೊಂಡ ಕಿಟ್ ಅನ್ನು ಮಕ್ಕಳಿಗೆ ದತ್ತಿಯಾಗಿ ನೀಡಲಾಯಿತು.



ಯೂತ್ ಫಾರ್ ಸೇವಾ ಮತ್ತು ಟೆಕ್ಸ್ಸ್ ಇನ್ಸ್ಟ್ರುಮೆಂಟ್ಸ್ ಕಂಪನಿಯು ಸಾಮಾಜಿಕ ಸೇವಾ ಚಟುವಟಿಕೆಗಳನ್ನು ನಡೆಸುವ ಉದ್ದೇಶದಿಂದ ಸಿಎಸ್‌ಆರ್ ನಿಧಿಯ ಅಡಿಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಿತ್ತು.

ಈ ಕಿಟ್‌ಗಳನ್ನು ವಿತರಿಸಿದ ಎಲ್ಲಾ ವಿದ್ಯಾರ್ಥಿಗಳು ಜ್ಞಾನವನ್ನು ಗಳಿಸುವಲ್ಲಿ ಉತ್ತಮ ಸಾಧನೆ ಮಾಡಬೇಕು ಮತ್ತು ಆದರ್ಶ ಮತ್ತು ಮೌಲ್ಯಾಧಾರಿತ ಜೀವನವನ್ನು ನಡೆಸಬೇಕು, ಭವಿಷ್ಯದಲ್ಲಿ ಅವರು ದೇಶದ ಪ್ರಗತಿಗೆ ಕೊಡುಗೆ ನೀಡಬೇಕು ಮತ್ತು ಈ ದೇಶದ ಉತ್ತಮ ಭವಿಷ್ಯಕ್ಕಾಗಿ ಹೆಚ್ಚಿನ ಸಮಾಜ ಸೇವೆಯನ್ನು ಮಾಡಬೇಕು ಎಂದು ಕಂಪನಿಗಳು ಆಶಿಸುತ್ತವೆ ಮತ್ತು ಬಯಸುತ್ತವೆ ಎಂದು ಯೂತ್ ಫಾರ್ ಸೇವಾ ಸಂಸ್ಥೆಯ ಲಕ್ಷ್ಮಣ್ ಪೂಜಾರಿ ಅವರು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಮೆದಕ್ ಗ್ರಾಮ ಪಂಚಾಯತ ಅಧ್ಯಕ್ಷರಾದ ಮಹದೇವಮ್ಮ, ಶಾಲೆಯ ಮುಖ್ಯ ಗುರುಗಳಾದ ಸಂತೋಷ ಕುಮಾರ್, ಟೆಕ್ಸಾಸ್ ಇನ್ಸ್ಟ್ರುಮೆಂಟ್ಸ್ ಸ್ವಯಂಸೇವಕರಾದ ಸರ್ಭಿಕಾ, ಸುಷ್ಮಾ, ಜಗ್ಗೇಶ್, ಸುಶಿನ್ ಹಾಗೂ ಗ್ರಾಮ ಪಂಚಾಯತಿ ಸದಸ್ಯರಾದ ಭಾಗ್ಯಶ್ರೀ, ನರಸಪ್ಪ ಕಾನಗಡ್ಡ, ಮುರಳಿ ಮೋಹನ್, ಹಾಗೂ ಭಾರತ ವೈಭವ ಪತ್ರಕರ್ತರಾದ ವೆಂಕಟಪ್ಪ ಕೆ ಸುಗ್ಗಾಲ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಬುರಗಪಲ್ಲಿ ಗ್ರಾಮ ಪಂಚಾಯತಿ ಸದಸ್ಯರು, ಮತ್ತು ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಸಹ ಶಿಕ್ಷಕರು ಭಾಗಿಯಾಗಿದ್ದರು.
ಶಕಲಾಸಾಪಲ್ಲಿ ಗ್ರಾಮ ಪಂಚಾಯತಿ ಸದಸ್ಯರು ಮತ್ತು ಗ್ರಾಮದ ಹಿರಿಯರು ಮತ್ತು ಸಿ,ಆರ್,ಪಿ ಅವರು ಭಾಗಿಯಾಗಿದ್ದರು.

ವರದಿ: ವೆಂಕಟಪ್ಪ ಕೆ ಸುಗ್ಗಾಲ್
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ