ಬಾಗಲಕೋಟೆ : ವಿಶ್ವ ಕಾರ್ಮಿಕ ದಿನಾಚರಣೆಯ ಹಿನ್ನೆಲೆಯಲ್ಲಿ ಕರ್ನಾಟಕ ಸ್ವಾಭಿಮಾನಿ ಪಡೆ ಸಂಘಟನೆಯ ಕಾರ್ಮಿಕ ಘಟಕದ ರಾಜ್ಯಾಧ್ಯಕ್ಷ ನವೀನ್ ಕಪಾಲಿ ಹಾಗೂ ಕಾರ್ಮಿಕ ಘಟಕದ ರಾಜ್ಯ ಯುವ ಮುಖಂಡರಾದ ರಾಜಕುಮಾರ್ ಲಮಾಣಿ ಅವರ ನೇತೃತ್ವದಲ್ಲಿ ಬಾಗಲಕೋಟೆಯ ಕಾರ್ಮಿಕ ಘಟಕದ ವತಿಯಿಂದ ನಗರದ ಬಾಗಲಕೋಟೆ ಖಾಸಗಿ ಆಸ್ಪತ್ರೆಯಾದ ಯೋಗಪ್ಪನವರ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡಲಾಯಿತು. ವಿಶ್ವ ಕಾರ್ಮಿಕ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು.
ಕಾರ್ಮಿಕ ಘಟಕದ ರಾಜ್ಯಾಧ್ಯಕ್ಷ ನವೀನ್ ಕಪಾಲಿ ಅವರು ಆಸ್ಪತ್ರೆಯಲ್ಲಿ ದಾಖಲಾಗಿರುವ ಪ್ರತಿಯೊಬ್ಬ ರೋಗಿಗಳನ್ನು ಸಂಪರ್ಕಿಸಿ ಆರೋಗ್ಯ ವಿಚಾರಿಸಿದರು ಈ ಸಂದರ್ಭದಲ್ಲಿ ಯೋಗಪ್ಪನವರ ಆಸ್ಪತ್ರೆಯ ವೈದ್ಯರಾದ ಶ್ರೀ ಡಾ ಸಾಮ್ರಾಟ್ ಎಚ್ ಯೋಗಪ್ಪನವರ್. ಮಾತನಾಡಿ, ಕರ್ನಾಟಕ ಸ್ವಾಭಿಮಾನಿ ಪಡೆ ಸಂಘಟನೆ ರಾಜ್ಯಾದ್ಯಂತನಾಡು, ನುಡಿಯ ಕಾಳಜಿಯೊಂದಿಗೆ ಇಂತಹ ಸಮಾಜಮುಖಿ ಕಾರ್ಯಗಳನ್ನು ಮಾಡುವ ಮೂಲಕ ಕನ್ನಡಿಗರ ಮನೆ ಮಾತಾಗಿದ್ದಾರೆ. ಇವರ ಕಾರ್ಯ ನಿಜವಾಗಿಯೂ ಶ್ಲಾಘನೀಯವಾದದ್ದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಕರ್ನಾಟಕ ಸ್ವಾಭಿಮಾನಿ ಪಡೆ ಸಂಘಟನೆಯ ಕಾರ್ಮಿಕ ಘಟಕದ ರಾಜ್ಯಾಧ್ಯಕ್ಷರಾದ ನವೀನ್ ಕಪಾಲಿ ರಾಜ್ಯ ಯುವ ಮುಖಂಡರಾದ ರಾಜಕುಮಾರ್ ಲಮಾಣಿ ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷರಾದ ಆಸಿಫ್ ಬಾಗವಾನ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ರಾರೋಡ ಜಿಲ್ಲಾಧ್ಯಕ್ಷ ಜಗದೀಶ್ ಕರ್ಪೂರಮಠ ಅವರು ಮಾತನಾಡಿ ಕಾರ್ಮಿಕರಿಗೆ ಶುಭ ಕೋರಿದರು ಕಾರ್ಮಿಕ ಘಟಕದ ಕಾರ್ಯಾಧ್ಯಕ್ಷ ಸಂಜಯ್ ಕೋಲ್ಕರ ಸಂಘಟನೆಯ ಹಿರಿಯರಾದ ಸಂಗಮೇಶ್ ದುಬ್ಬಲಗುಂಡಿ ಆದಿತ್ಯ ಆಗೋಜಿ ಗಣೇಶ ಬಡಿಗೇರ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.
ವರದಿ : ಎಸ್.ಎಸ್.ಕವಲಾಪುರೆ

