Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೋಮಟಿ ಗಲ್ಲಿಯ ಅಂಗನವಾಡಿ ಕೇಂದ್ರದಲ್ಲಿ ಪೂರಕ ಪೌಷ್ಟಿಕ ಆಹಾರ ವಿತರಣೆ

Advertisement

ಸೇಡಂ: ಪಟ್ಟಣದ ವಾರ್ಡ್ ಸಂಖ್ಯೆ–04ರ ಕೋಮಟಿ ಗಲ್ಲಿಯ ಅಂಗನವಾಡಿ ಕೇಂದ್ರದಲ್ಲಿ ಸೋಮವಾರ ಗರ್ಭಿಣಿಯರು, ಬಾಣಂತಿಯರು, 6 ತಿಂಗಳಿಂದ 6 ವರ್ಷದ ಮಕ್ಕಳಿಗೆ ಹಾಗೂ ಕಿಶೋರಿಯರಿಗೆ ಸರ್ಕಾರದಿಂದ ಒದಗಿಸಲಾಗುವ ಪೂರಕ ಪೌಷ್ಟಿಕ ಆಹಾರ ಸಾಮಗ್ರಿಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಕಲಬುರಗಿ ಜಿಲ್ಲಾ ಯುವ ಘಟಕದ ಪ್ರಧಾನ ಕಾರ್ಯದರ್ಶಿ ಶ್ರೀ ಅಬ್ದುಲ್ ಸತ್ತಾರ್ ನಾಡೇಪಲ್ಲಿ ಉಪಸ್ಥಿತರಿದ್ದು, ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಜ್ಯೋತಿ ಎಂ.ಕೆ. ಹಾಗೂ ಸಹಾಯಕಿ ಶ್ರೀಮತಿ ಮಹೇಶ್ವರಿ ಅವರ ನೇತೃತ್ವದಲ್ಲಿ ಫಲಾನುಭವಿಗಳಿಗೆ ಅಕ್ಕಿ, ಹಾಲಿನ ಪುಡಿ, ಪೂರಕ ಪೌಷ್ಟಿಕ ಆಹಾರ, ಬೆಲ್ಲ, ಮಸಾಲೆ ಸೇರಿದಂತೆ ಎರಡು ತಿಂಗಳಿಗೆ ಅಗತ್ಯವಿರುವ ಆಹಾರ ಸಾಮಗ್ರಿಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ಅಬ್ದುಲ್ ಸತ್ತಾರ್ ನಾಡೇಪಲ್ಲಿ ಅವರು, ಸರ್ಕಾರದಿಂದ ಗರ್ಭಿಣಿಯರು, ಬಾಣಂತಿಯರು, 6 ತಿಂಗಳಿಂದ 6 ವರ್ಷದ ಮಕ್ಕಳಿಗೆ ಹಾಗೂ ಕಿಶೋರಿಯರಿಗೆ ನೀಡಲಾಗುತ್ತಿರುವ ಪೂರಕ ಪೌಷ್ಟಿಕ ಆಹಾರವು ಪ್ರತಿಯೊಬ್ಬ ಅರ್ಹ ಫಲಾನುಭವಿಗೂ ಸಮರ್ಪಕವಾಗಿ ತಲುಪುವಂತೆ ನೋಡಿಕೊಳ್ಳುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ಸೇಡಂ ಪಟ್ಟಣದ ಎಲ್ಲಾ ಯುವಕರು ತಮ್ಮ ತಮ್ಮ ವಾರ್ಡ್‌ಗಳ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ, ಪೌಷ್ಟಿಕ ಆಹಾರ ವಿತರಣೆಯಂತಹ ಜನಪರ ಕಾರ್ಯಕ್ರಮಗಳಲ್ಲಿ ಸ್ವಯಂಪ್ರೇರಿತವಾಗಿ ಸಹಕರಿಸುವ ಮೂಲಕ ಸರ್ಕಾರದ ಯೋಜನೆಗಳು ಯಶಸ್ವಿಯಾಗಿ ಅನುಷ್ಠಾನಗೊಳ್ಳಲು ಕೈಜೋಡಿಸಬೇಕು ಎಂದು ಅವರು ಮನವಿ ಮಾಡಿದರು.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿ : ಉಮಾಶ್ರೀ ಯಾರೇ ರಾಜೀನಾಮೆ ಕೊಟ್ಟರು 5 ನಿಮಿಷದಲ್ಲಿ ಸ್ವೀಕರಿಸುತ್ತೇನೆ : ಡಿ.ಕೆ.ಶಿ ಖಡಕ್ ಉತ್ತರ ನಟಿ ತ್ರಿಶಾ ಬಗ್ಗೆ ದ್ವಂದ್ವಾರ್ಥ ಬರುವ ಹೇಳಿಕೆ : ಸ್ಟಾಲಿನ್ ಅರೆಸ್ಟ್ ಆಗಸ್ಟ್ 10 ರಂದು ಎನ್.ಡಿ.ಎ. ಮೈತ್ರಿಕೂಟದಿಂದ ಬೃಹತ್ ಪ್ರತಿಭಟನೆ ಶಾಸಕ ಎನ್ ವೈ ಗೋಪಾಲಕೃಷ್ಣರವರಿಗೆ ಸಚಿವ ಸ್ಥಾನ ನೀಡದಿದ್ದಕ್ಕೆ ರಾಂಪುರ ಕ್ಷೇತ್ರದಲ್ಲಿ ಪ್ರತಿಭಟನೆ: ಉದ್ವಿಗ್ನ ವಾತಾವರಣ ಸೃಷ್ಟಿಕೋಮಟಿ ಗಲ್ಲಿಯ ಅಂಗನವಾಡಿ ಕೇಂದ್ರದಲ್ಲಿ ಪೂರಕ ಪೌಷ್ಟಿಕ ಆಹಾರ ವಿತರಣೆಶಾಸಕ PM ಅಶೋಕ್ ಅವರಿಗೆ ಸೋಕ್ತ ಸ್ಥಾನಮಾನ ನೀಡುವಂತೆ ಒತ್ತಾಯಿಸಿ ಪ್ರತಿಭಟನೆಬಾದರ್ಲಿಗೆ ತಪ್ಪಿದ ಸಚಿವ ಸ್ಥಾನ! ಅಭಿಮಾನಿಗಳಿಂದ ಆತ್ಮಹತ್ಯೆಗೆ ಯತ್ನ!ಹೆಬ್ಬಾಳಕರ್ ಸಚಿವ ಸ್ಥಾನಕ್ಕಾಗಿ ಬಿಗಿಪಟ್ಟು : ಬೆಂಬಲಿಗರ ಬೃಹತ್ ಪ್ರತಿಭಟನೆ ಮೊಬೈಲ್ ಕೊಡಿಸದಕ್ಕೆ ಮನನೊಂದು 13 ವರ್ಷದ ಬಾಲಕ ಆತ್ಮಹತ್ಯೆ