Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗಣೇಶ್ ವಿಸರ್ಜನೆ ವೇಳೆಗೆ ಡಿ ಜೆ ಸೌಂಡ್ ಗೆ ಅನುಮತಿ ಇಲ್ಲ

Advertisement
-----------------------------------------ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧಿಕಾರಿ ಹರೀಷ

ಲಿಂಗಸ್ಗೂರು : ಹಟ್ಟಿ ಚಿನ್ನದ ಗಣಿ ಪೊಲೀಸ್ ಠಾಣೆಯಲ್ಲಿ ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬದ ಶಾಂತಿ ಪಾಲನಾ ಸಭೆಯಲ್ಲಿ ಪಾಲ್ಗೊಂಡ ರಾಯಚೂರು ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧಿಕಾರಿ ಹರೀಶ್ ಜಿ, ಲಿಂಗಸ್ಗೂರು ಉಪ ವಿಭಾಗದ ಡಿ ವೈ ಎಸ್ ಪಿ ದತ್ತಾತ್ರೇಯ, ಕಾರ್ನಾಡ್, ಲಿಂಗಸ್ಗೂರು ತಹಸಿಲ್ದಾರ್ ಸತ್ಯಮ್ಮ, ಹಟ್ಟಿ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಹೊಸಕೇರಪ್ಪ ಕೆ, ಲಿಂಗಸುಗೂರು ಸರ್ಕಲ್ ಇನ್ಸ್ಪೆಕ್ಟರ್ ಪುಂಡಲಿಕ್, ಹಟ್ಟಿ ಕಂಪನಿಯ ಅಧಿಕಾರಿಯಾದ ಜಗನ್ ಮೋಹನ್, ಹಟ್ಟಿ ಚಿನ್ನದ ಗಣಿ ಕಂಪನಿಯ ಭದ್ರತಾ ಅಧಿಕಾರಿ, ಜೆಸ್ಕಾಂ,ಅಬಕಾರಿ ಇಲಾಖೆಯ , ಪಟ್ಟಣ ಪಂಚಾಯತಿಯ ಅಧಿಕಾರಿಗಳು, ಹಟ್ಟಿ ಪೊಲೀಸ್ ಠಾಣೆಯ ಪಿಎಸ್ಐ ಧರ್ಮಣ್ಣ ಈ ಸಭೆಯಲ್ಲಿ ಪಾಲ್ಗೊಂಡಿದ್ದರು.

ಈ ಸಭೆಯಲ್ಲಿ ಹಿಂದೂ ಮುಸ್ಲಿಂ ಧರ್ಮದ ಎಲ್ಲಾ ಮುಖಂಡರು ಪಾಲ್ಗೊಂಡಿದ್ದರು. ಚಿನ್ನದ ನಾಡಿನಲ್ಲಿ ಗಣೇಶ್ ಚತುರ್ಥಿ, ಈದ್ ಮಿಲಾದ್ ಹಬ್ಬವು ಎರಡು ಧರ್ಮದವರು ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಶಾಂತಿಯುತವಾಗಿ ಹಬ್ಬಗಳನ್ನು ಆಚರಿಸಬೇಕು, ಗಣೇಶನ ಮೂರ್ತಿ ಪ್ರತಿಷ್ಠಾಪಿಸುವ ಗಣೇಶ ಭಕ್ತರು ಮುಂಜಾಗ್ರತೆ ಕ್ರಮವಾಗಿ ಕೂಡಿಸುವ ಸ್ಥಳದಲ್ಲಿ ಸಿಸಿ ಕ್ಯಾಮೆರಾ ಕಡ್ಡಾಯವಾಗಿ ಅಳವಡಿಸಬೇಕು ಮತ್ತು ಸಂಬಂಧಪಟ್ಟ ಇಲಾಖೆಯವರಿಂದ ಪರವಾನಿಗೆ ಪಡೆದುಕೊಳ್ಳಬೇಕು, ಗಣೇಶ ವಿಸರ್ಜನೆ ವೇಳೆಯಲ್ಲಿ ಡಿಜೆ ಸೌಂಡ್ ಅನುಮತಿ ಇಲ್ಲ. ಪ್ರಚೋದನೆಕಾರಿ ಭಾಷಣವಾಗಲಿ ಅಥವಾ ಹಾಡು ಹಾಕುವಂತಿಲ್ಲ , ಗಣೇಶ ಉತ್ಸವಕ್ಕೆ ಪೊಲೀಸ್ ಇಲಾಖೆಯಿಂದ ಸೂಕ್ತ ಭದ್ರತೆಯನ್ನು ಒದಗಿಸಲಾಗುವುದು ಮತ್ತು ಸುಗಮ ಸಂಚಾರಕ್ಕೆ ತೊಂದರೆಯಾಗದಂತೆ ಪ್ರತಿಮೆಯನ್ನು ಸಾರ್ವಜನಿಕರ ರಸ್ತೆಯಲ್ಲಿ ಪ್ರತಿಷ್ಠಾಪನೆ ಮಾಡಬಾರದೆಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು.

ಹಟ್ಟಿ ಅನ್ನುವುದು ಸಣ್ಣ ಭಾರತ ಇದ್ದ ಹಾಗೆ ನನ್ನ ಪ್ರೀತಿಯ ಊರು ಹಟ್ಟಿ ನಾನು ಹಟ್ಟಿ ಠಾಣೆಯಲ್ಲಿ 15 ವರ್ಷಗಳ ಹಿಂದೆ ಇಲ್ಲಿ ಕರ್ತವ್ಯ ನಿರ್ವಹಿಸಿದ್ದು ಇಲ್ಲಿಯ ಜನ ಮತ್ತು ಯುವಕರು ಒಳ್ಳೆಯವರಾಗಿದ್ದಾರೆ ಯಾವುದೇ ರೀತಿಯ ಘಟನೆಗೆ ಆಸ್ಪದ ಕೊಡುವುದಿಲ್ಲ, ಶಾಂತಿ ಸುವ್ಯವಸ್ಥೆಗೆ ತೊಂದರೆಯಾದರೆ ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದೆಂದು, ಶಾಂತಿಯುತವಾಗಿ ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬವನ್ನು ಆಚರಿಸಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಹಟ್ಟಿ ಪೊಲೀಸ ಇನ್ಸ್ಪೆಕ್ಟರ್ ಹೊಸಕೇರಪ್ಪ ಕೆ ಮಾತನಾಡಿ ಶಾಂತಿ ಸುವ್ಯವಸ್ತೆಯಿಂದ ಗಣಪತಿ ಹಬ್ಬವನ್ನು ಆಚರಿಸಿ ಗಣಪತಿ ವಿಸರ್ಜನೆ ವೇಳೆಯಲ್ಲಿ ಗಣೇಶ್ ಮಂಡಳಿಯವರು ಕೂಡಲೇ ರಾತ್ರಿ 12 ಗಂಟೆ ಒಳಗಾಗಿ ಗಣಪತಿ ವಿಸರ್ಜನೆ ಮಾಡಬೇಕು ಸಾರ್ವಜನಿಕರಿಗೆ ತೊಂದರೆ ಆಗದ ರೀತಿಯಲ್ಲಿ ನೀವು ಮುಂಜಾಗ್ರತೆ ಕ್ರಮವನ್ನು ವಹಿಸಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಶಂಶುದ್ದೀನ್ ವಕೀಲರು, ಅಂಜುಮನ್ ಕಮಿಟಿ ಅಧ್ಯಕ್ಷರು, ಬಸವರಾಜ್ ಗುರಿಕಾರ್, ಗುಂಡಪ್ಪ ಗುರಿಕಾರ್, ಬಾಲಪ್ಪ ನಾಯಕ್, ಜಮದಗ್ನಿಕೋಟ, ಶ್ರೀರಾಮ ಸೇನೆಯ ಅಧ್ಯಕ್ಷ ರಘು ಗೌಡ, ಲಿಂಗಪ್ಪ ಹೆಚ್ ಎ, ಮೌಲಾ ಮಾಸ್ಟರ್, ಸಿರಾಜುದ್ದೀನ್ ಖುರೇಷಿ, ಶೇಕ್ ಹುಸೇನ್ ಸೌದಾಗರ್ ಸೇರಿದಂತೆ ಇನ್ನು ಅನೇಕ ಮುಖಂಡರು ಮತ್ತು ಯುವಕರು ಉಪಸ್ಥಿತರಿದ್ದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ