ಬೆಂಗಳೂರು: ರಾಜ್ಯ ರಾಜಕಾರಣ ಹಾಗೂ ಆಡಳಿತ ವಲಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಮಾಧ್ಯಮ ಕಾರ್ಯದರ್ಶಿಯಾಗಿ (Media Secretaries) ಹಿರಿಯ ಪತ್ರಕರ್ತ ಪಿ.ತ್ಯಾಗರಾಜ್ ಸೇರಿದಂತೆ ಮೂವರನ್ನು ನೇಮಕ ಮಾಡಿ ಕರ್ನಾಟಕ ಸರ್ಕಾರ ಇಂದು ಅಧಿಕೃತ ಆದೇಶ ಹೊರಡಿಸಿದೆ.
ಪಿ. ತ್ಯಾಗರಾಜ್ ಅವರು ಕೇವಲ ಪತ್ರಿಕೋದ್ಯಮದಲ್ಲಿ ಮಾತ್ರವಲ್ಲದೆ, ರಾಜಕೀಯ ಗಣ್ಯರೊಂದಿಗೆ ಉತ್ತಮ ಆಡಳಿತಾತ್ಮಕ ಒಡನಾಟವನ್ನೂ ಹೊಂದಿದ್ದಾರೆ.
ಈ ಹಿಂದೆ ಇವರು ಈ ಹಿಂದೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮಾಧ್ಯಮ ಸಲಹೆಗಾರರಾಗಿಯೂ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿದ್ದರು.
ಮಾಧ್ಯಮ ರಂಗ ಮತ್ತು ಸರ್ಕಾರದ ನಡುವೆ ಕೊಂಡಿಯಾಗಿ ಕೆಲಸ ಮಾಡುವಲ್ಲಿ ಇವರ ಅನುಭವ ಅಪಾರವಾಗಿದೆ.
ಇಂತಹ ಅವರನ್ನು ಇದೀಗ ಅಧಿಕೃತವಾಗಿ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಮಾಧ್ಯಮ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.


