LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಮುಂದಿನ 7 ವರ್ಷದವರೆಗೂ ಡಿ.ಕೆ ಶಿವಕುಮಾರ್ ಸಿಎಂ : ಲಕ್ಷ್ಮಣ್ ಸವದಿ 

Advertisement

ಕಾರವಾರ: ಡಿ.ಕೆ. ಶಿವಕುಮಾರ್ ಅವರು ಎರಡು ವರ್ಷಕ್ಕೆ ಮುಖ್ಯಮಂತ್ರಿಯಲ್ಲ, ಅವರು ಮುಂದಿನ 7 ವರ್ಷದವರೆಗೂ ಮುಖ್ಯಮಂತ್ರಿ ಆಗಿರುವೆ ಎನ್ನುವ ಸಂಕಲ್ಪದೊಂದಿಗೆ ಕೆಲಸ ಮಾಡುತ್ತಿದ್ದಾರೆ ಎಂದು ನೂತನ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಶಿರಸಿ ಉಪವಿಭಾಗ ತಾಲೂಕುಗಳಲ್ಲಿ ಬರ ಪರಿಸ್ಥಿತಿ ಅವಲೋಕನ ನಡೆಸಿದ ಸಚಿವರು, ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಹಿಂದಿನ ಡಿ.ಕೆ. ಶಿವಕುಮಾರ್ ಅವರಿಗೂ ಈಗಿನ ಡಿ.ಕೆ. ಶಿವಕುಮಾರ್ ಅವರಿಗೂ ಬಹಳಷ್ಟು ದೊಡ್ಡ ಬದಲಾವಣೆ ಕಾಣುತ್ತಿದೆ. ವಿಭಿನ್ನ ಕಾರ್ಯ ಶೈಲಿ ಇದೆ. ಮುಂದಿನ ಅವಧಿಗೂ ಕಾಂಗ್ರೆಸ್ ಸರ್ಕಾರವೇ ಬೇಕು ಎಂದು ಜನರಲ್ಲಿ ಭಾವನೆ ಮೂಡಿಸುವಂತೆ ಡಿ.ಕೆ. ಶಿವಕುಮಾರ್ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಸಚಿವರಾಗಿದ್ದೇವೆ ಎಂದು ಕ್ಷೇತ್ರಕ್ಕೆ ಹೋಗಿ ಹಾರ ತುರಾಯಿ ಹಾಕಿಸಿಕೊಂಡು ಸನ್ಮಾನ ಮಾಡಿಸಿಕೊಳ್ಳುವುದಕ್ಕಿಂತ ಜನರ ಸಂಕಷ್ಟ ಆರಿಸಲು ತಮ್ಮ ಉಸ್ತುವಾರಿ ಕ್ಷೇತ್ರಗಳಿಗೆ ಹೋಗುವಂತೆ ಸಿಎಂ ಸೂಚನೆ ನೀಡಿದ್ದರು. 

ಅಂತೆಯೇ ಇಲ್ಲಿಗೆ ಬಂದಿದ್ದೇನೆ. ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ವೇಳೆ ನಮಗೆ ಎರಡು ತಿಂಗಳು ಖಾತೆ ನೀಡಿರಲಿಲ್ಲ. ಹಾಗೆಯೇ ಇದ್ದೆವು. ಈಗ ಶೀಘ್ರವೇ ಖಾತೆ ಹಂಚಿಕೆ ಆಗಬಹುದು ಎಂದು ಹೇಳಿದ್ದಾರೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪಕ್ಷ ಶಿಸ್ತಿಗೆ ಸವಾಲು: ಶಿವಾಜಿ ಮೇತ್ರೆ ಬಿಜೆಪಿ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷ ಉಚ್ಚಾಟನೆಇರಾನ್‌ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಗಂಭೀರ ಸ್ಥಿತಿ : ಅವರ ಹುತಾತ್ಮತೆಯ ಸುದ್ದಿ ಶೀಘ್ರಕರ್ನಾಟಕ ಹೈಕೋರ್ಟ್ ಗೆ 6 ನ್ಯಾಯಮೂರ್ತಿಗಳ ನೇಮಕಮುಂದಿನ 7 ವರ್ಷದವರೆಗೂ ಡಿ.ಕೆ ಶಿವಕುಮಾರ್ ಸಿಎಂ : ಲಕ್ಷ್ಮಣ್ ಸವದಿ ಐರ್ಯಲೆಂಡ್‌ಗೆ ೩೦೦ ರನ್‌ಗಳ ಗೆಲುವಿನ ಗುರಿಶ್ರೀಲಂಕಾ ಇಲೆವೆನ್ ಉತ್ತಮ ಮೊತ್ತಕಳಸಕೊಪ್ಪ ಸೇರಿದಂತೆ 8 ಕೆರೆಗಳಿಗೆ ನೀರು ತುಂಬಿಸುವ ಕಾರ್ಯಕ್ರಮ: ಜೆ ಟಿ ಪಾಟೀಲಹೆಚ್ಚಿನ ಬಡ್ಡಿ ಆಮಿಷವೊಡ್ಡಿ ಕೋಟಿ ಕೋಟಿ ಹಣ ವಂಚನೆ ಕೇಸ್ : ಶಿವಾನಂದ ನೀಲಣ್ಣವರ ಇಡಿ ರೇಡ್ಹಾಡ ಹಾಗಲೇ ಗುಂಡಿಕ್ಕಿ ಕಾಂಗ್ರೆಸ್ ಮುಖಂಡ ಬರ್ಬರ ಹತ್ಯೆ ಆಗಸ್ಟ್ 15ವರೆಗೆ ಖಾತೆ ಹಂಚಿಕೆಗೆ ಕಾಲಾವಕಾಶ ಇದೆ : ಡಿ.ಕೆ.ಶಿವಕುಮಾರ್