Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಿ.ಕೆ. ಶಿವಕುಮಾರ್ ಅವರು ಸಿಎಲ್‌ಪಿ ನಾಯಕರಾಗಿ ಆಯ್ಕೆ: ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆ

Advertisement

ಹುಬ್ಬಳ್ಳಿ:  ಸಿಎಲ್‌ಪಿ (CLP) ನಾಯಕರಾಗಿ ಡಿ.ಕೆ. ಶಿವಕುಮಾರ್ ಅವರು ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ, ವಿದ್ಯಾನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಅಕ್ಷಯ ಪಾರ್ಕ್ ವೃತ್ತ, ಗೋಕುಲ ರಸ್ತೆಯಲ್ಲಿ ಅತ್ಯಂತ ಸಂಭ್ರಮದಿಂದ ಅಭಿನಂದನಾ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಪಕ್ಷದ ಹಿರಿಯ ಮುಖಂಡರು, ಸ್ಥಳೀಯ ಪದಾಧಿಕಾರಿಗಳು ಮತ್ತು ಅಪಾರ ಸಂಖ್ಯೆಯ ಕಾರ್ಯಕರ್ತರು ಭಾಗವಹಿಸಿದ್ದರು. ಕಾರ್ಯಕರ್ತರು ಸಿಹಿ ಹಂಚಿ, ಪಟಾಕಿ ಸಿಡಿಸಿ ಹಾಗೂ ಘೋಷಣೆಗಳನ್ನು ಕೂಗುವ ಮೂಲಕ ತಮ್ಮ ಸಂತೋಷವನ್ನು ಹಂಚಿಕೊಂಡರು.

news_1780148607_0_124.webp

 

ಈ ಸಂದರ್ಭದಲ್ಲಿ ಮಾತನಾಡಿದ ವಿದ್ಯಾನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಜತ್ ಉಳ್ಳಾಗಡ್ಡಿಮಠ “ ಡಿ. ಕೆ. ಶಿವಕುಮಾರ್ ಅವರೊಂದಿಗಿನ ನನ್ನ ಬಾಂಧವ್ಯ ಬಹಳ ಹಳೆಯದು ಮತ್ತು ಭಾವನಾತ್ಮಕವಾದದ್ದು. ಅವರು ನನ್ನ ತಂದೆಯವರ ಆತ್ಮೀಯ ಒಡನಾಡಿಯಾಗಿದ್ದರು. ಅಷ್ಟೇ ಅಲ್ಲದೆ, ನಮ್ಮ ರಂಭಾಪುರಿ ಪೀಠದ ವೀರ ಗಂಗಾಧರ ಜಗದ್ಗುರುವಿನ ಶಿಷ್ಯರಾಗಿ, ನನ್ನ ಜೀವನದ ಪ್ರತಿ ಹಂತದಲ್ಲೂ ನನಗೆ ಒಬ್ಬ ಮಾರ್ಗದರ್ಶಕರಾಗಿ, ಪ್ರೇರಣೆಯಾಗಿ ಮತ್ತು ದಾರಿದೀಪವಾಗಿ ನಿಂತಿದ್ದಾರೆ. ಅವರಲ್ಲಿರುವ ಸಂಘಟನಾ ಚತುರತೆ, ಬದ್ಧತೆ ಮತ್ತು ಕಷ್ಟದ ಸಮಯದಲ್ಲೂ ಸ್ಥಿರವಾಗಿ ನಿಲ್ಲುವ ಗುಣ ನಮಗೆಲ್ಲರಿಗೂ ಆದರ್ಶಪ್ರಾಯ.
ಅವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯವು ಸರ್ವತೋಮುಖ ಅಭಿವೃದ್ಧಿಯನ್ನು ಕಾಣಲಿದೆ ಮತ್ತು ಜನಸಾಮಾನ್ಯರ ಆಶೋತ್ತರಗಳನ್ನು ಈಡೇರಿಸುವಲ್ಲಿ ಅವರು ಯಶಸ್ವಿಯಾಗಲಿದ್ದಾರೆ ಎಂಬ ದೃಢ ವಿಶ್ವಾಸ ನನಗಿದೆ” ಎಂದು ಹರ್ಷ ವ್ಯಕ್ತಪಡಿಸಿದರು. 

ಕಾರ್ಯಕ್ರಮದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿಯ ಜಿಲ್ಲಾ ಉಪಾಧ್ಯಕ್ಷ ವೀರೇಶ್ ಕಡಕೊಳಮಠ, ಷರೀಫ್ ಗರ್ಗದ, ಪಾಲಿಕೆ ಸದಸ್ಯ ಸೆಂಥಿಲ್ ಕುಮಾರ್, ಸಾದಿಕ್ ಯಕ್ಕುಂಡಿ,  ಸುವರ್ಣ ಕಲ್ಲಕುಂಟ್ಲ, ಇಕ್ಬಾಲ್ ನವಲೂರ, ಸಂಗಮೇಶ್ ಗೌರಕ್ಕನವರ, ಮದಾರ್ ಮಕಾಂದರ, ಸಂತೋಷ್ ನಾಯಕ್, ಮಹೇಶ್, ದೀಪಕ್, ರಘುವೀರ್ ಪಾಟೀಲ್, ಬಸವರಾಜ್ ಮ್ಯಾಗೆಡಿ, ಪರ್ವೇಜ್ ಕಟ್ಟಿಮನಿ ವಿದ್ಯಾನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು ಮತ್ತು ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.
 ವರದಿ: ಸುಧೀರ್ ಕುಲಕರ್ಣಿ 

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸರ್ಕಾರ ರಚಿಸಲು ಡಿ.ಕೆ.ಶಿವಕುಮಾರ್ ಗೆ ರಾಜ್ಯಪಾಲರ ಆಹ್ವಾನಈಜಲು ತೆರಳಿದ್ದ ಮೂವರು ಬಾಲಕರು ನೀರಲ್ಲಿ ಮುಳುಗಿ ದುರ್ಮರಣಡಿ.ಕೆ. ಶಿವಕುಮಾರ್ ಅವರು ಸಿಎಲ್‌ಪಿ ನಾಯಕರಾಗಿ ಆಯ್ಕೆ: ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆಸವದಿಯವರಿಗೆ  ಸಚಿವ ಸ್ಥಾನ ನೀಡಲು ಸಿ ಎಸ್ ನೇಮಗೌಡ ಆಗ್ರಹ ಸರ್ಕಾರಗಳ ಕೈಲಾಗದ ಪುಣ್ಯ ಕಾರ್ಯಗಳನ್ನು ಧರ್ಮಸ್ಥಳ ಯೋಜನೆ ಮಾಡುತ್ತಿದೆ : ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಡಿ ಲಕ್ಷ್ಮೀನಾರಾಯಣ್ ಶ್ಲಾಘನೆಅಶಕ್ತರಿಗೆ ಆಸರೆಯಾದ ಧರ್ಮಸ್ಥಳ ಸಂಸ್ಥೆಯ ಜನಮಂಗಲ ಕಾರ್ಯಕ್ರಮ ವಸಂತ ಎಸ್ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್ ಆಯ್ಕೆಸಿದ್ದರಾಮಯ್ಯ ನೆನೆದು ಸತೀಶ್ ಜಾರಕಿಹೊಳಿ ಭಾವುಕ ಪೋಸ್ಟ್ ಕೆಎಂಎಫ್‌ ನಲ್ಲಿ ಖಾಲಿ ಇರುವ 55 ಹುದ್ದೆಗಳಿಗೆ ಅರ್ಜಿ ಆಹ್ವಾನ ಹೈಕಮಾಂಡ್‌ನಿಂದ ಅಧಿಕೃತ ಘೋಷಣೆ ಹೊರಬೀಳುವ ಮುನ್ನವೇ ಡಿಕೆಶಿ ಫ್ಲೇಕ್ಸ್, ಬ್ಯಾನರ್ ಅಬ್ಬರ