Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಿ.ಕೆ. ಶಿವಕುಮಾರ್ ದೇಶದ 2ನೇ ಶ್ರೀಮಂತ ಸಚಿವ

Advertisement
ನವದೆಹಲಿ : ಕರ್ನಾಟಕದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ದೇಶದ ಎರಡನೇ ಶ್ರೀಮಂತ ಸಚಿವ ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್  ವರದಿ ಹೇಳಿದೆ.

ರಾಜ್ಯ ವಿಧಾನಸಭೆಗಳು, ಕೇಂದ್ರಾಡಳಿತ ಪ್ರದೇಶಗಳು ಮತ್ತು ಕೇಂದ್ರ ಸಚಿವರು ಚುನಾವಣೆ ಸಂದರ್ಭದಲ್ಲಿ ಸಲ್ಲಿಸಿದ ಅಫಿಡವಿಟ್‌ಗಳನ್ನು ವಿಶ್ಲೇಷಿಸಿ ಎಡಿಆರ್ ಗುರುವಾರ ವರದಿ ಬಿಡುಗಡೆ ಮಾಡಿದೆ.

27 ವಿಧಾನಸಭೆಗಳು, 3 ಕೇಂದ್ರಾಡಳಿತ ಪ್ರದೇಶಗಳು ಮತ್ತು ಕೇಂದ್ರದ 652 ಸಚಿವರ ಪೈಕಿ 643 ಸಚಿವರ ಅಫಿಡವಿಟ್‌ಗಳನ್ನು ವಿಶ್ಲೇಷಿಸಲಾಗಿದೆ. ಕರ್ನಾಟಕದಲ್ಲಿ ನೂರು ಕೋಟಿಗಿಂತ ಹೆಚ್ಚು ಆಸ್ತಿ ಇರುವ ಎಂಟು ಸಚಿವರು ಇದ್ದಾರೆ. ಆಂಧ್ರ ಪ್ರದೇಶವು ನಂತರದ ಸ್ಥಾನದಲ್ಲಿದೆ.

643 ಸಚಿವರ ಪೈಕಿ 302 ಮಂದಿ (47%) ವಿರುದ್ಧ ಕ್ರಿಮಿನಲ್ ಪ್ರಕರಣಗಳಿವೆ. 174 ಸಚಿವರ ವಿರುದ್ಧ (27%) ಗಂಭೀರ ಅಪರಾಧ ಪ್ರಕರಣಗಳಿವೆ.

ಈ ಸಚಿವರು ಕೊಲೆ, ಕೊಲೆಯತ್ನ, ಅಪಹರಣ, ಮಹಿಳೆಯರ ವಿರುದ್ಧದ ಅಪರಾಧಗಳು ಸೇರಿದಂತೆ ಗಂಭೀರ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ. ಕೇಂದ್ರ ಸಚಿವ ಸಂಪುಟದ 72ರಲ್ಲಿ 29 (40%) ಮಂದಿ ವಿರುದ್ಧ ಪ್ರಕರಣಗಳಿವೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ