Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಶ್ಮೀರದಲ್ಲಿನ ಉಗ್ರರ ದಾಳಿ ಇಡೀ ಪ್ರಪಂಚಕ್ಕೆ ದೊಡ್ಡ ಆಘಾತ : ಡಿ. ಕೆ ಶಿವಕುಮಾರ್ 

Advertisement
ಬೆಂಗಳೂರು: ಕಾಶ್ಮೀರದಲ್ಲಿನ ಉಗ್ರರ ದಾಳಿ ಇಡೀ ಪ್ರಪಂಚಕ್ಕೆ ದೊಡ್ಡ ಆಘಾತ. ಈ ಭಯೋತ್ಪಾದಕ ದಾಳಿಯನ್ನು ನಾವು ಖಂಡಿಸುತ್ತೇವೆ. ಈ ಉಗ್ರರು ಹಾಗೂ ಭಯೋತ್ಪಾದಕ ಸಂಘಟನೆಗಳನ್ನು ಸದೆಬಡಿಯಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ, ನಾವು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಬೇಕು.ಕೇಂದ್ರ ಸರ್ಕಾರ ಈ ವಿಚಾರದಲ್ಲಿ ಜಾಗೃತವಾಗಿ ಕೆಲಸ ಮಾಡಬೇಕಿದೆ.

ಮುಖ್ಯಮಂತ್ರಿಗಳು ಈ ವಿಚಾರ ತಿಳಿದ ಕೂಡಲೇ ತಕ್ಷಣವೇ ರಾಜ್ಯ ಸರ್ಕಾರದ ಪರವಾಗಿ ಸಚಿವ ಸಂತೋಷ ಲಾಡ್ ಅವರ ಮುಖಂಡತ್ವದಲ್ಲಿ ಒಂದು ತಂಡವನ್ನು ಕಳುಹಿಸಿದ್ದಾರೆ ಎಂದು ತಿಳಿಸಿದರು.

ದರ್ಮದ ಹೆಸರಿನಲ್ಲಿ ಭಯೋತ್ಪಾದಕ ದಾಳಿ ನಡೆದಿರುವುದು ನಿಜಕ್ಕೂ ಕೆಟ್ಟ ಬೆಳವಣಿಗೆ. ಕಾಂಗ್ರೆಸ್ ಪಕ್ಷ ಇದನ್ನು ಖಂಡಿಸುತ್ತದೆ. ಈ ವಿಚಾರದಲ್ಲಿ ನಮ್ಮ ಪಕ್ಷ ಕೇಂದ್ರ ಸರ್ಕಾರದ ಪರ ನಿಲ್ಲುವುದಾಗಿ ತಿಳಿಸಿದೆ. ಕೇಂದ್ರ ಸರ್ಕಾರ ಈ ಭಯೋತ್ಪಾದಕರನ್ನು ಸದೆಬಡಿಯಬೇಕು.

ಇಂತಹ ಭಯೋತ್ಪಾದಕ ಸಂಘಟನೆಗಳ ವಿರುದ್ಧ ನಿರ್ದಾಕ್ಷೀಣ್ಯ ಕ್ರಮ ಕೈಗೊಳ್ಳಬೇಕು. ಇಂತಹ ಸಂಘಟನೆಗಳು ಯಾವುದೇ ದೇಶಕ್ಕೆ ಸಂಬಂಧಿಸಿದರೂ ಇವುಗಳನ್ನು ಬುಡಸಮೇತ ಕಿತ್ತೊಗೆಯಬೇಕು. ಕಾಶ್ಮೀರದಲ್ಲಿ ಶಾಂತಿ ನೆಲೆಸುವಂತೆ ಮಾಡಬೇಕು ಎಂದು ಹೇಳಿದರು.

ಈ ಘಟನೆ ವಿದೇಶಾಂಗ ನೀತಿಯಿಂದ ಪ್ರವಾಸಿಗರು ಹಾಗೂ ದೇಶದ ಜನರ ಮೇಲೆ ಪ್ರಭಾವ ಬೀರುವುದರಿಂದ ಕೇಂದ್ರ ಸರ್ಕಾರ ಈ ವಿಚಾರವಾಗಿ ಸರ್ವಪಕ್ಷ ಸಭೆ ಕರೆಯಬೇಕು. ನಾನು ಈಗಷ್ಟೇ ದಾಳಿಯಲ್ಲಿ ಮೃತರ ಕುಟುಂಬದವರ ಜತೆ ಚರ್ಚೆ ಮಾಡಿದೆ. ಶಿವಮೊಗ್ಗ ಜಿಲ್ಲಾ ಸಚಿವರು ಹಾಗೂ ಪೊಲೀಸ್ ಅಧಿಕಾರಿಗಳ ಜತೆ ಮಾತನಾಡಿದ್ದು, ಮೃತರ ಕುಟುಂಬದವರನ್ನು ಭೇಟಿ ಮಾಡುವಂತೆ ತಿಳಿಸಿದ್ದೇನೆ ಎಂದರು.

ಕೇಂದ್ರ ಸರ್ಕಾರ ಸರ್ವಪಕ್ಷ ಸಭೆ ಕರೆದು ಈ ವಿಚಾರವನ್ನು ಚರ್ಚಿಸಬೇಕು. ದೇಶವನ್ನು ರಕ್ಷಣೆ ಮಾಡುವುದು ನಮ್ಮ ಮೊದಲ ಆದ್ಯತೆ ಎಂದು ತಿಳಿಸಿದರು.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ