ಬೆಂಗಳೂರು : ಕರ್ನಾಟಕ ಸರ್ಕಾರವು ನಿವೃತ್ತ ಐಎಎಸ್ ಅಧಿಕಾರಿ ಅತೀಕ್ ಎಲ್.ಕೆ. ಅವರನ್ನು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಆರ್ಥಿಕ ಸಲಹೆಗಾರರನ್ನಾಗಿ ನೇಮಕ ಮಾಡಿ ಬುಧವಾರ (ಜೂನ್ 3, 2026) ಅಧಿಕೃತ ಆದೇಶ ಹೊರಡಿಸಿದೆ.
ಈ ನೇಮಕಾತಿಯು ತಕ್ಷಣದಿಂದಲೇ ಜಾರಿಗೆ ಬರಲಿದ್ದು, ಮುಂದಿನ ಆದೇಶದವರೆಗೆ ಅವರು ಈ ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ.
ಇವರ ವೇತನ ಮತ್ತು ಇತರ ಸೌಲಭ್ಯಗಳನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿಯ ಹುದ್ದೆಗೆ ಅನುಗುಣವಾಗಿ ನಿಗದಿಪಡಿಸಲಾಗಿದೆ.
ಇದರೊಂದಿಗೆ, ಅತೀಕ್ ಎಲ್.ಕೆ. ಅವರು ಪ್ರಸ್ತುತ ನಿರ್ವಹಿಸುತ್ತಿರುವ ‘ಬೆಂಗಳೂರು ಬ್ಯುಸಿನೆಸ್ ಕಾರಿಡಾರ್’ನ ಅಧ್ಯಕ್ಷರ ಜವಾಬ್ದಾರಿಯನ್ನು ಸಹ ಮುಂದುವರಿಸಲಿದ್ದಾರೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

