Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರೈತರಿಗೆ ಬೆಳೆ ನಷ್ಟ ಪರಿಹಾರ ವಿತರಿಸಲು ಡೊಂಗರಗಾವ ಆಗ್ರಹ

Advertisement
ಐಗಳಿ : ಬೆಳಗಾವಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಸಂಪೂರ್ಣ ಬೆಳೆ ಹಾನಿಯಾಗಿದ್ದು, ಸಂಕಷ್ಟದಲ್ಲಿರುವ ರೈತರಿಗೆ ಕೂಡಲೇ ಕೇಂದ್ರ ಮತ್ತು ರಾಜ್ಯ ಸರ್ಕಾರ ರೈತರ ರಕ್ಷಣೆಗೆ ಮುಂದಾಗಿ ಸೂಕ್ತ ಪರಿಹಾರ ನೀಡಬೇಕು ಎಂದು ಜನತಾದಳದ ರಾಜ್ಯ ಉಪಾಧ್ಯಕ್ಷ ಹಾಗೂ ಅಥಣಿ ಮಾಜಿ ಶಾಸಕ ಶಹಜಹಾನ್ ಡೊಂಗರಗಾಂವ ಅವರು ಮುಖ್ಯಮಂತ್ರಿಗಳಿಗೆ ಒತ್ತಾಯಿಸಿದರು.

ಅವರು ಗುರುವಾರ ತಾಲೂಕಿನ ಕೋಹಳ್ಳಿ ಗ್ರಾಮದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಮೂರು-ನಾಲ್ಕು ತಿಂಗಳಿAದ ಸತತ ಧಾರಾಕಾರ ಮಳೆಯಾಗುತ್ತಿದ್ದರಿಂದ ಮುಂಗಾರು ಬೆಳೆಗಳಾದ ಉದ್ದು, ಹೆಸರು, ಸೋಯಾಬೀನ್, ಮೆಕ್ಕೆಜೋಳ ಅಲ್ಲದೆ ತಾಲೂಕಿನಲ್ಲಿ ಸಾವಿರಾರು ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಿದ ತೊಗರಿ ಬೆಳೆ ಕೂಡ ನಷ್ಟವಾಗಿದೆ. ಅಧಿಕಾರಿಗಳ ನಿರ್ಲಕ್ಷö್ಯದಿಂದ ಹಾನಿಯಾದ ಬೆಳೆಗಳ ಸರ್ವೆ ಮಾಡದೇ ಇನ್ನು ರೈತರ ಹೊಲದಲ್ಲಿ ಹಾನಿಯಾದ ಬಗ್ಗೆ ಅಧಿಕಾರಿಗಳು ಮಾಹಿತಿಯನ್ನು ಪಡೆದುಕೊಂಡಿರುವುದಿಲ್ಲ. ಅಧಿಕಾರಿಗಳು ಕೂಡಲೇ ಹಾನಿಯಾದ ರೈತರ ಜಮೀನುಗಳಿಗೆ ಭೇಟಿ ನೀಡಿ ಅತಿವೃಷ್ಠಿಯಿಂದ ಹಾನಿಯಾದ ಬೆಳೆಗಳ ಬಗ್ಗೆ ಮಾಹಿತಿಯನ್ನು ಪಡೆದುಕೊಂಡು ಸರ್ಕಾರಕ್ಕೆ ಮಾಹಿತಿ ನೀಡುವಂತಾಗಬೇಕು. ಈಗಾಗಲೇ ರೈತರು ಬಿತ್ತನೆಗೆ ಸಾವಿರಾರು ರೂಪಾಯಿ ಖರ್ಚು ಮಾಡಿ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ರೈತರ ಗೋಳು ಯಾರೂ ಕೇಳದಂತಾಗಿದೆ. ಪ್ರತಿ ಬಾರಿಯೂ ಬರ, ಅತಿವೃಷ್ಟಿ, ನೆರೆ ಹಾವಳಿ ಹೀಗೆ ಅನೇಕ ತೊಂದರೆ ಸುಳಿಯಲ್ಲಿ ರೈತರು ಸಿಲುಕುತ್ತಿದ್ದಾರೆ. ಕಷ್ಟಪಟ್ಟು ದುಡಿದ ಬೆಳೆ ರೈತರ ಕೈಗೆ ಸಿಗುತ್ತಿಲ್ಲ. ಬೆಳೆ ವಿಮೆ ಹಣ ಕಟ್ಟಿದ್ದರೂ ಅದೂ ಕೂಡಾ ವಿಮೆ ಹಣ ರೈತರ ಖಾತೆಗೆ ಜಮಾ ಆಗಿರುವುದಿಲ್ಲ.

ಆದರೆ ರಾಜ್ಯ ಸರ್ಕಾರಕ್ಕೆ ರೈತರ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ. ರೈತರ ಹೆಸರಲ್ಲಿ ಅಧಿಕಾರಕ್ಕೆ ಬಂದು ನಂತರ ರೈತರನ್ನು ಕಡೆಗಣಿಸುತ್ತಿರುವ ಸರ್ಕಾರಕ್ಕೆ ನಾಚಿಕೆ ಬರಬೇಕು. ಇದರಿಂದ ರೈತರು ಬೆಳೆಸಾಲ ಮರು ಪಾವತಿಸಲಾಗದೆ ಒದ್ದಾಡುವ ಸ್ಥಿತಿ ನಿರ್ಮಾಣವಾಗಿದೆ. ರೈತರು ಬ್ಯಾಂಕಗಳಲ್ಲಿ ಪಡೆದುಕೊಂಡ ಸಾಲಗಳ ಅಸಲು ಮತ್ತು ಬಡ್ಡಿಯನ್ನು ಒಂದು ವರ್ಷದವರೆಗೆ ವಸೂಲಾತಿ ಮಾಡಬಾರದು. ಇಷ್ಟಾದರೂ ಸರ್ಕಾರ ಹಾಗೂ ಜಿಲ್ಲಾಡಳಿತ ಪರಿಹಾರ ಕಾರ್ಯಕೈಗೊಂಡಿಲ್ಲ. ಕೂಡಲೇ ತಾತ್ಕಾಲಿಕ ಪರಿಹಾರ ನೀಡುವ ಮೂಲಕ ಅಥಣಿ ತಾಲೂಕಿನಲ್ಲಿ ಅತಿವೃಷ್ಠಿಯಿಂದ ಹಾನಿಯಾದ ರೈತರ ರಕ್ಷಣೆಗೆ ಸರ್ಕಾರ ಮುಂದಾಗಬೇಕೆಂದು ಒತ್ತಾಯಿಸಿದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ